Sport
News
ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂದಿದ್ದಕ್ಕೆ ಸಿದ್ದರಾಮಯ್ಯನವರು ನಮ್ಮ ವಿರೋಧಿಸುತ್ತಿದ್ದಾರೆ:ಪೂಜ್ಯ ಪ್ರಣವಾನಂದ ಸ್ವಾಮೀಜಿ.
ಆಧ್ಯಾತ್ಮಿಕ ರಾಜಕೀಯ- Est 1 min
- 0 Views
- 2 months ago
ಜನರನ್ನು ಬೆಸೆಯಲು ಪ್ರತಿ ಧರ್ಮದಲ್ಲಿ ಹಬ್ಬಗಳು ಇವೆ:ಗಾಲಿ ಜನಾರ್ದನ ರೆಡ್ಡಿ
ಆಧ್ಯಾತ್ಮಿಕ ರಾಜಕೀಯ- Est 0 min
- 0 Views
- 2 months ago
ಕನಕಗಿರಿ ಕನಕಾಚಲಪತಿ ಮಹಾರಥೋತ್ಸವಕ್ಕೆ ಸಾಕ್ಷಿಯಾಯ್ತು ಲಕ್ಷಾಂತರ ಭಕ್ತ ಸಮೂಹ!
ಆಧ್ಯಾತ್ಮಿಕ- Est 0 min
- 0 Views
- 2 months ago
ವಾಲ್ಮೀಕಿಶ್ರೀಗಳ ಕ್ಷೇಮ ವಿಚಾರಿಸಿದ ಕೆಎಂಎಫ್ ಬಳ್ಳಾರಿ ಮಾಜಿ ಅಧ್ಯಕ್ಷ ಭೀಮ್ ನಾಯ್ಕ್
ಆಧ್ಯಾತ್ಮಿಕ- Est 1 min
- 0 Views
- 2 months ago
134ನೇ ಬೆಟ್ಟದ ಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಜೋಡು ರಥೋತ್ಸವ ಮತ್ತು ಸಾಮೂಹಿಕ ವಿವಾಹಗಳು
ಆಧ್ಯಾತ್ಮಿಕ- Est 1 min
- 0 Views
- 3 months ago
ಮಾ.03 ರಂದು ಚಂದ್ರ ಗ್ರಹಣ: ಅರ್ಧ ದಿನ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಗುಡಿ ಬಂದ್
ಆಧ್ಯಾತ್ಮಿಕ ಸುದ್ದಿ- Est 1 min
- 0 Views
- 3 months ago
ನವ ಬೃಂದಾವನ ಗಡ್ಡಿಯ ಯತಿವರ್ಯರ ದರ್ಶನಕ್ಕೆ ಆಗಮಿಸಿದ ನವರಸ ನಾಯಕ,ರಾಜ್ಯಸಭಾ ಸದಸ್ಯ ಜಗ್ಗೇಶ್.
ಆಧ್ಯಾತ್ಮಿಕ ರಾಜಕೀಯ- Est 0 min
- 0 Views
- 3 months ago
Recent
Posts
ವೆಂಕಟಗಿರಿ ವ್ಯಾಪ್ತಿಯ ಬಗರ್ ಹುಕುಂ, ಅಕ್ರಮ ಸಕ್ರಮ ಯೋಜನೆಯಡಿ ಸಾಗುವಳಿದಾರರಿಗೆ ಶೀಘ್ರ ಪಟ್ಟ ಹಂಚಿಕೆ: ಶಾಸಕ ಗಾಲಿ ಜನಾರ್ದನ ರೆಡ್ಡಿ.
ಕಿಷ್ಕಿಂಧವಾಣಿ ಸುದ್ದಿ
ಗಂಗಾವತಿ: ವೆಂಕಟಗಿರಿ ಹೋಬಳಿಯ ಹಲವು ಗ್ರಾಮಗಳಲ್ಲಿ ಹಲವು ದಶಕಗಳಿಂದ ಬಗರ್ ಹುಕುಂ, ಅಕ್ರಮ ಸಕ್ರಮ ಯೋಜನೆ ಅಡಿ ಶೀಘ್ರದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಪಟ್ಟಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಗಾಲಿ ಜನಾರ್ಧನ್ ರೆಡ್ಡಿ ಹೇಳಿದರು.
ಅವರು ತಹಸೀಲ್ದಾರ್ ಕಚೇರಿಯಲ್ಲಿ ಬಗರ್ ಹುಕುಂ ಕಮಿಟಿ, ಅಕ್ರಮ ಸಕ್ರಮ ಕಮಿಟಿಯ ಸಭೆಯಲ್ಲಿ ಪಾಲ್ಗೊಂಡು ವೆಂಕಟಗಿರಿ ಭಾಗದ ರೈತರ ಮನವಿಯನ್ನು ಸ್ವೀಕರಿಸಿ ಮಾತನಾಡಿದರು. ನಿಯಮಾನುಸಾರ ಬಗರ್ ಹುಕುಂ ಮತ್ತು ಅಕ್ರಮ ಸಕ್ರಮ ಕಾನೂನಿನ ಅನ್ವಯ ಸರ್ಕಾರಿ ಭೂಮಿಯನ್ನು ಉಳುಮೆ ಮಾಡುವವರಿಗೆ ಸಾಗುವಳಿ ಚೀಟಿ ವಿತರಣೆಗೆ ಕಾನೂನು ವ್ಯಾಪ್ತಿಯಲ್ಲಿ ವ್ಯವಸ್ಥೆ ಮಾಡಲಾಗುತ್ತದೆ. ರೈತರು ತಾವು ಇದುವರೆಗೂ ಸಲ್ಲಿಸಿರುವ ಅರ್ಜಿಗಳು ಸೇರಿದಂತೆ ಅಧಿಕಾರಿಗಳಿಂದ ಬಂದ ದಾಖಲೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸಾಗುವಳಿ ಚೀಟಿ ಪಡೆಯಲು ಸಿದ್ದರಾಗುವಂತೆ ತಿಳಿಸಿದರು.
ಕುಡಿಯುವ ನೀರಿನ ವ್ಯವಸ್ಥೆಗೆ ಸೂಚನೆ:ಬೇಸಿಗೆ ಬಿಸಿಲು ಹೆಚ್ಚಾಗುತ್ತಿದ್ದು ಗಂಗಾವತಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸಬೇಕು. ಹಣದ ಕೊರತೆ ಇದ್ದರೆ ಕೂಡಲೇ ತಮ್ಮ ಗಮನಕ್ಕೆ ತರಬೇಕು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿದಂತೆ ಬೋರ್ವೆಲ್ ಕೊರೆಸುವ ಮತ್ತು ರೈತರಿಂದ ಬೋರ್ವೆಲ್ ಗಳನ್ನು ಬಾಡಿಗೆ ಪಡೆದು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಅನುಕೂಲ ಕಲ್ಪಿಸಬೇಕೆಂದರು.
ಸಭೆಯಲ್ಲಿ ಗಂಗಾವತಿ ತಹಸೀಲ್ದಾರ್ ವಿಶ್ವನಾಥ್ ವಿಶ್ವನಾಥ್ ಮುರುಡಿ, ಕೊಪ್ಪಳ ತಹಸೀಲ್ದಾರ್ ಬಸವರಾಜ್, ಉಪತಹಶೀಲ್ದಾರ ಮಹಾಂತಗೌಡ ಪಾಟೀಲ್, ಶಿರಸ್ತೇದಾರ್ ಪ್ರಕಾಶ ನಾಯಕ,ಎಇಇ ಹೊನ್ನಪ್ಪ, ಇ.ಓ ರಾಮ್ ರೆಡ್ಡಿ, ಎ ಡಿ ಎಲ್ ಆರ್ ರಾಜಶೇಖರ್ ಹಾಗೂ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬಾಗಲಕೋಟೆ ಉಪಚುನಾವಣೆ: ಗಡ್ಡದವರನ್ನು ಹಾಗೂ ಟೂರ್ ನವರನ್ನು ಹಣಿಯಬೇಕು ಸಿಸಿ ಪಾಟೀಲ್ ಆಕ್ಷೇಪಾರ್ಹ ಹೇಳಿಕೆ.ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ವೈರಲ್!
*ವೀರಶೈವ ಲಿಂಗಾಯತರು ಒಳಪಂಗಡ ಮರೆತು ಚರಂತಿಮಠ ಅವರನ್ನು ಬೆಂಬಲಿಸಲು ಪಾಟೀಲ್ ಕರೆ.
ಕಿಷ್ಕಿಂಧವಾಣಿ ಸುದ್ದಿ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭೆಯ ಉಪಚುನಾವಣೆಯ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾಜಿ ಸಚಿವ ಸಿಸಿ ಪಾಟೀಲ್ ಅವರು ವೀರಶೈವ ಲಿಂಗಾಯತ ಸಮಾಜದ ಸಭೆಯಲ್ಲಿ ಹೇಳಿರುವ ಆಕ್ಷೇಪಾರ್ಹ ಮಾತುಗಳನ್ನಾಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲಾಗಿದ್ದು ವ್ಯಾಪಕ ಟೀಕೆಗಳು ಕೇಳಿಬಂದಿವೆ. ಕಾಂಗ್ರೆಸ್ ಅಭ್ಯರ್ಥಿಗೆ ತೀವ್ರ ಪೈಪೋಟಿ ನೀಡುವಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಸದೃಢ ಅಭ್ಯರ್ಥಿಯಾಗಿದ್ದು ವೀರಶೈವ ಲಿಂಗಾಯತ ಸಮಾಜದ ಒಳಪಂಗಡ ಮರೆತು ಎಲ್ಲರೂ ಅವರನ್ನು ಬೆಂಬಲಿಸಬೇಕು. ಜೊತೆಗೆ ಗಡ್ಡದವರನ್ನು ಮತ್ತು ಟೂರ್
ನವರನ್ನು ಹಣೆಯಲು ಅಥವಾ ತಡೆಹಿಡಿಯುವ ಶಕ್ತಿ ವೀರಣ್ಣ ಚರಂತಿ ಮಠ ಅವರಿಗಿದೆ. ಆದ್ದರಿಂದ ಇವರನ್ನು ಹಣೆಯಲು ಸರ್ವರೂ ಬಿಜೆಪಿ ಅಭ್ಯರ್ಥಿಯನ್ನು ಕಮಲದ ಗುರುತಿಗೆ ಮತ ಚಲಾಯಿಸುವ ಮೂಲಕ ಬೆಂಬಲಿಸಬೇಕು. ನಾನು ದಾವಣಗೆರೆಯ ಬಿಜೆಪಿ ಉಸ್ತುವಾರಿಯಾಗಿದ್ದರೂ ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಗೆಲ್ಲಿಸುವ ಉದ್ದೇಶದಿಂದ ಹಿರಿಯರಾದ ಬಸವರಾಜ ಪಾಟೀಲ್ ಯತ್ನಾಳ್ ಸೂಚನೆ ಮೇರೆಗೆ ದಾವಣಗೆರೆಯಿಂದ ಇಲ್ಲಿಗೆ ಬಂದು ವೀರಶೈವ ಲಿಂಗಾಯತ ಸಮಾಜದ ಸಭೆಯನ್ನು ನಡೆಸುತ್ತಿದ್ದೇನೆ, ಆದ್ದರಿಂದ ಈ ಉಪಚುನಾವಣೆ ಮಹತ್ವದ್ದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬುದ್ಧಿ ಕಲಿಸಲು ಭ್ರಷ್ಟ ಸರ್ಕಾರವನ್ನು ಕಿತ್ತುಹೊಗೆಯಲು
ಒಳ್ಳೆಯ ಅವಕಾಶವಾಗಿದ್ದು ಎಲ್ಲರೂ ಒಗ್ಗಟ್ಟಾಗಿ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸ
ಬೇಕು ಎಂದು ಹೇಳಿಕೆ ನೀಡಿದ್ದಾರೆ.
ಮಾಜಿ ಸಚಿವ ಸಿ ಸಿ ಪಾಟೀಲ್ ಅವರ ವಿಡಿಯೋ ಹಾಕಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಮುಸ್ಲಿಂಸರನ್ನು ಮತ್ತು ಕುರುಬ ಸಮಾಜದವರನ್ನು ಪಾಟೀಲರು ಟೀಕೆ ಮಾಡಿದ್ದಾರೆ ಅವರಿಗೆ ಧಿಕ್ಕಾರ ಎನ್ನುವ ಸ್ಟೇಟಸ್ಗಳು ವ್ಯಾಪಕವಾಗಿ ವೈರಲ್ ಆಗುತ್ತಿವೆ.
ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಹಳೆಯ ಚೈನ್ ಗಳಲ್ಲಿ ಮರುಜೋಡಣೆಗೆ ಆಕ್ಷೇಪ, ರೈತರಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರ ಸ್ವಾಮಿಗೆ ಮನವಿ!

*ಸಿಂಧನೂರು ಕಾರ್ಯಕ್ರಮಕ್ಕೆ ತೆರಳಿದ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಅದ್ಧೂರಿ ಸ್ವಾಗತ
ಕಿಷ್ಕಿಂಧವಾಣಿ ಸುದ್ದಿ
ಗಂಗಾವತಿ: ತುಂಗಭದ್ರಾ ಡ್ಯಾಂ ನ ಕ್ರಸ್ಟ್ ಗೇಟ್ಗಳನ್ನು ಹಳೆಯ ಚೈನುಗಳಲ್ಲಿ ಮರುಜೋಡಣೆ ಮಾಡುತ್ತಿದ್ದು ಇದರಿಂದ ಶಾಶ್ವತ ದುರಸ್ತಿ ಅನುಮಾನವಾಗಿದೆ. ಕೂಡಲೇ ಕಾಮಗಾರಿ ಗುತ್ತಿಗೆ ಪಡೆದ ಗುತ್ತಿಗೆದಾರರಿಗೆ ಹೊಸ ಚೈನುಗಳ ಮೂಲಕ ಕ್ರಸ್ಟ್ ಗೇಟ್ಗಳನ್ನು ಮರುಜೊಡಣೆ ಮಾಡುವಂತೆ ಆದೇಶ ಮಾಡಬೇಕೆಂದು ರೈತರು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡಿಕೊಂಡರು ಇದಕ್ಕೆ ಸ್ಪಂದಿಸಿದ ಕುಮಾರಸ್ವಾಮಿಯವರು ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಹೊಸಚೈನ್ ಹಾಕಲು ಸೂಚನೆ ನೀಡಲಾಗುತ್ತದೆ.
ಜೊತೆಗೆ ಎಲ್ಲಾ 32 ಕ್ರಸ್ಟ್ ಗೇಟ್ಗಳನ್ನು ಮರುಜೊಡನೆ ಮಾಡುವ ಸಂದರ್ಭದಲ್ಲಿ ಚೈನ್ ಗಳನ್ನು ಹೊಸದಾಗಿ ಅಳವಡಿಸಲು ಟೆಂಡರ್ ನಲ್ಲಿ ಅವಕಾಶವಿದ್ದರೆ ಕೂಡಲೇ ಅದನ್ನು ಮಾಡುವಂತೆ ತಿಳಿಸುವುದಾಗಿ ಅವರು ಹೇಳಿದರು.
ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಂಧನೂರಿಗೆ ಕಾರ್ಯಕ್ರಮಕ್ಕೆ ತೆರಳುವ ಸಂದರ್ಭದಲ್ಲಿ ಗಂಗಾವತಿಯಲ್ಲಿ ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದರು.
ಈ ಸಂದರ್ಭದಲ್ಲಿ
ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು
ಸೇರಿ ಸ್ವಾಗತ ಕೋರಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ವಿರೂಪಾಕ್ಷಪ್ಪ ಸಿಂಗನಾಳ.ಜೆಡಿಎಸ್ ಮುಖಂಡ ರಾಜುನಾಯಕ,ವೆಂಕಟೇಶ ಚಲುವಾದಿ,
ಬಿಜೆಪಿಯ ಮಾಜಿ ನಗರಸಭೆ ಸದಸ್ಯರಾದ ವಾಸುದೇವ ನವಲಿ,ನೀಲಕಂಠಪ್ಪ ಕಟ್ಟಿಮನಿ ಸೇರಿದಂತೆ ಸ್ಥಳೀಯ ಮುಖಂಡರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಪ್ರಮುಖ ಕಾರ್ಯಕರ್ತರು ಮತ್ತು ಜೆಡಿಎಸ್ ಕಾರ್ಯಕರ್ತರು. ಉಪಸ್ಥಿತರಿದ್ದರು.

