ಹಿರಿಯ ಶಾಸಕ ಹಿಂದುಳಿದ ವರ್ಗದ ಕೆ.ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ಕಲ್ಪಿಸುವಂತೆ ಬೆಟ್ಟಪ್ಪ ಹುರಕಡ್ಲಿ ಆಗ್ರಹ.
*ಕಾಂಗ್ರೆಸ್ ಬೆಂಬಲಿಸಿರುವ ಜಿಲ್ಲೆಯ ಕುರುಬ ಸಮಾಜದವರಿಗೆ ನಿಗಮ,ಮಂಡಳಿಗೆ ನೇಮಕ ಮಾಡಬೇಕು.
ಕಿಷ್ಕಿಂಧವಾಣಿ ಸುದ್ದಿ
ಗಂಗಾವತಿ: ಕೊಪ್ಪಳ ಜಿಲ್ಲೆಯ ಹಿರಿಯ ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿರುವ ಹಿಂದುಳಿದ ವರ್ಗದ ಕೆ. ರಾಘವೇಂದ್ರ ಹಿಟ್ನಾಳ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳನ್ನು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಬೆಟ್ಟಪ್ಪ ಹುರಕಡ್ಲಿ ಮನವಿ ಮಾಡಿದ್ದಾರೆ.
ಕಳೆದ 25 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿರುವ ರಾಘವೇಂದ್ರ ಹಿಟ್ನಾಳ್ ಅವರು ಕೊಪ್ಪಳ ಜಿಲ್ಲೆಯ ಸಮಗ್ರ ಮಾಹಿತಿಯನ್ನು ಬಲ್ಲವರಾಗಿದ್ದಾರೆ ಜೊತೆಗೆ ಕೊಪ್ಪಳ ಕ್ಷೇತ್ರವನ್ನು ವಿವಿಧ ನೀರಾವರಿ ಯೋಜನೆಗಳ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಕುಡಿಯುವ ನೂರು ರಸ್ತೆ ವಸತಿ ಯೋಜನೆ ಸೇರಿದಂತೆ ಶೈಕ್ಷಣಿಕವಾಗಿ ಇಡೀ ಕ್ಷೇತ್ರವನ್ನು ಮುಂದುವರಿಯುವಂತೆ ಮಾಡಿದ್ದಾರೆ ಆದ್ದರಿಂದ ರಾಘವೇಂದ್ರ ಹಿಟ್ನಾಳ್ ಅವರು ರಾಜ್ಯ ಸಚಿವ ಸಂಪುಟದಲ್ಲಿ ಇದ್ದರೆ ಇಡೀ ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ತೆಗೆದುಕೊಂಡು ಹೋಗಲು ಅಳಿಲು ಸೇವೆ ಮಾಡಲಿದ್ದಾರೆ ಆದ್ದರಿಂದ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಚಿವ ಸಂಪುಟದಲ್ಲಿ ಹಿಟ್ನಾಳ್ ಅವರಿಗೆ ಸ್ಥಾನ ಕಲ್ಪಿಸಬೇಕು.
ಜೊತೆಗೆ ಕೊಪ್ಪಳ ಜಿಲ್ಲೆಯಲ್ಲಿರುವ ಹಾಲುಮತ ಕುರುಬ ಸಮಾಜದ ಯುವ ಮುಖಂಡರು ಮತ್ತು ಹಿರಿಯರಿಗೆ ನಿಗಮ ಮಂಡಳಿ ಸೇರಿದಂತೆ ವಿವಿಧ ಸ್ಥಾನಮಾನಗಳನ್ನು ಕಲ್ಪಿಸಬೇಕು. ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಇಡೀ ಸಮಾಜ ಕಾಂಗ್ರೆಸ್ ಪಕ್ಷದ ಪರವಾಗಿದ್ದು ಹೆಚ್ಚು ಸ್ಥಾನ ಗೆಲ್ಲುವಲ್ಲಿ ನೆರವಾಗಿದೆ. ಆದ್ದರಿಂದ ಹಾಲುಮತ ಕುರುಬ ಸಮಾಜದವರಿಗೆ ರಾಜಕೀಯ ಸ್ಥಾನಮಾನ ಕೊಡುವುದು ಅವಶ್ಯವಾಗಿದೆ ಎಂದು ಬೆಟ್ಟಪ್ಪ ಬಲ್ಲವಕಲ್ಪಿಸಬೇಕು.

