Breaking News
ಬಿಜೆಪಿ ಮುಖಂಡ ಕುರುಬರ್ ವೆಂಕಟೇಶ ಕೊಲೆ ಪ್ರಕರಣದ ಆರು ಆರೋಪಿಗಳಿಗೆ ಗಲ್ಲು ಶಿಕ್ಷೆ ಪ್ರಕಟ!.

 

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಬಿಜೆಪಿ ಯುವ ಮೋರ್ಚಾ ನಗರಾಧ್ಯಕ್ಷ ಕುರುಬರ್ ವೆಂಕಟೇಶ್ ಕುರುಬರ ಬರ್ಬರ ಹತ್ಯೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಆರು ಜನ ಅಪರಾಧಿಗಳಿಗೆ ನ್ಯಾಯಾಲಯವು ಮರಣದಂಡನೆ ವಿಧಿಸಿ ಐತಿಹಾಸಿಕ ಆದೇಶ ನೀಡಿದೆ.

ಗಂಗಾವತಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು ಈ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ.

ಕಳೆದ 2025 ಅಕ್ಟೋಬರ್ 7, ರಂದು ಹಳೇ ದ್ವೇಷದ ಹಿನ್ನೆಲೆಯಲ್ಲಿ ವೆಂಕಟೇಶ್ ಅವರನ್ನು ಗಂಗಾವತಿ ನಗರದಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಕೊಲೆಯಾದ ಕುರುಬರ ವೆಂಕಟೇಶ್ ಪಾಲಕರಿಂದ ಕೇಸು ಪಡೆದ ನಗರ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣದ ಆರೋಪಿಗಳಿಗಾಗಿ ತಮಿಳುನಾಡು ಆಂಧ್ರಪ್ರದೇಶ ಕೇರಳ ಸೇರಿದಂತೆ ದಕ್ಷಿಣ ಭಾರತದ ತುಂಬಾ ಸಂಚಾರ ಮಾಡಿ ಆರೋಪಿಗಳನ್ನು ಬಂಧಿಸಿದ್ದರು.

ನಂತರ ನ್ಯಾಯಾಲಯವು ಪ್ರತಿದಿನವೂ ಪ್ರಕರಣದ ವಿಚಾರಣೆಯನ್ನು ನಡೆಸಿ ಸಾಕ್ಷಿ ಸಂಗ್ರಹಿಸಿ ಅಂತಿಮವಾಗಿ ಇದೀಗ ಪ್ರಕರಣದ 12 ಜನ ಆರೋಪಿಗಳ ಪೈಕಿ ಆರು ಜನರಿಗೆ ಗೆಲ್ಲು ಶಿಕ್ಷೆ ವಿಧಿಸಿದೆ.

ಪ್ರಕರಣದ ತನಿಖೆ ನಡೆಸಿದ್ದ ನಗರ ಪೊಲೀಸರು 997 ಪುಟಗಳ ಬೃಹತ್ ದೋಷಾರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದ ರವಿ ಕುರುಬರ್, ವಿಜಯ್ ಅಲಿಯಾಸ್ ಮೈಲಾರಿ, ಧನರಾಜ್, ಭೀಮ್ ಅಲಿಯಾಸ್ ಭರತ್, ಸಲೀಮ್ ಮಹಮ್ಮದ್ ರಫೀಕ್ ಮತ್ತು ಗಂಗಾಧರ ಗೌಳಿ ಎಂಬ ಆರು ಜನರನ್ನು ದೋಷಿಗಳೆಂದು ಪರಿಗಣಿಸಿ ಗಲ್ಲು ಶಿಕ್ಷೆ ಹಾಗೂ ತಲಾ 3 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಇದೇ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಕಾರ್ತಿಕ್, ದಾದಪೀರ್ ಸೇರಿದಂತೆ ಇತರ ಆರು ಮಂದಿಯನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನಿರ್ದೋಷಿಗಳೆಂದು ಘೋಷಿಸಿ ನ್ಯಾಯಾಲಯವು ಖುಲಾಸೆಗೊಳಿಸಿದೆ