Breaking News
ಗಂಗಾವತಿ ಮಳೆ ಮಲ್ಲೇಶ್ವರ ಬೆಟ್ಟಕ್ಕೆ ಬೆಂಕಿಯ ಕೆನ್ನಾಲಿಗೆ: ಕಿಡಿಗೇಡಿಗಳ ದುಷ್ಕೃತ್ಯ. *ಬೆಂಕಿ ಹೊತ್ತಿಕೊಂಡು ಮೂರು ತಾಸು ಕಳೆದರೂ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು.

ಕಿಷ್ಕಿಂಧವಾಣಿ ಸುದ್ದಿ
ಗಂಗಾವತಿ: ಇದೀಗ ಬೇಸಿಗೆ ಆರಂಭವಾಗಿದ್ದು ಅರಣ್ಯ ಪ್ರದೇಶದಲ್ಲಿ ಕಾಡಗಿಚ್ಚು ಕಾಣಿಸಿಕೊಳ್ಳುವ ಸಂಭವ ಹೆಚ್ಚಿದೆ. ಶುಕ್ರವಾರ ಸಂಜೆ ಗಂಗಾವತಿ ನಗರದ ಮಳೆ ಮಲ್ಲೇಶ್ವರ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಬೆಟ್ಟ ಪ್ರದೇಶವನ್ನು ವ್ಯಾಪಿಸಿದ್ದು ಅಪಾರ ಪ್ರಮಾಣದ ಸಸ್ಯ ಮತ್ತು ಜೀವಜಂತುಗಳು ಬೆಂಕಿಗೆ ಆಹುತಿಯಾಗಿವೆ. ಸಂಜೆ ನಾಲ್ಕು ಗಂಟೆಯಿಂದ ಆರಂಭವಾಗಿರುವ ಬೆಂಕಿ ಇಡೀ ಬೆಟ್ಟವನ್ನು ವ್ಯಾಪಿಸಿದ್ದು ಸ್ಥಳಕ್ಕೆ ಅರಣ್ಯ ಇಲಾಖೆಯ ಯಾವ ಸಿಬ್ಬಂದಿಯೂ ಭೇಟಿ ನೀಡಿಲ್ಲ ಬೆಂಕಿಯನ್ನು ನಂದಿಸುವ ಕಾರ್ಯವನ್ನು ಮಾಡಿಲ್ಲ. ಜನಸಾಮಾನ್ಯರು ಬೆಟ್ಟಕ್ಕೆ ಬೆಂಕಿ ಹತ್ತಿರುವುದನ್ನು ತಮ್ಮ ಮೊಬೈಲ್ಗಳಲ್ಲಿ ಫೋಟೋ ಮತ್ತು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತಿದ್ದಾರೆ.
ನಗರಕ್ಕೆ ಹೊಂದಿಕೊಂಡಿರುವ ಮಳೆ ಮಲ್ಲೇಶ್ವರ ಬೆಟ್ಟಕ್ಕೆ ನಿತ್ಯವೂ ವಾಯುಹಾರಕ್ಕೆ ಜನರು ತೆರುಳುತ್ತಿದ್ದು ಈ ಸಂದರ್ಭದಲ್ಲಿ ಕೆಲವು ದುಷ್ಕರ್ಮಿಗಳು ಬೆಟ್ಟಕ್ಕೆ ಬೆಂಕಿ ಹಚ್ಚಿರುವ ಕುರಿತು ಅನುಮಾನಗಳು ವ್ಯಕ್ತವಾಗುತ್ತವೆ.
ಮಳೆ ಮಲ್ಲೇಶ್ವರ ಬೆಟ್ಟ ಗಂಗಾವತಿ ನಗರಕ್ಕೆ ಹೊಂದಿಕೊಂಡಿರುವುದು ಅರಣ್ಯ ಇಲಾಖೆಯವರು ಬೆಟ್ಟಕ್ಕೆ ತಂತಿ ಬೇಲಿಯನ್ನು ಅಳವಡಿಸುವ ಮೂಲಕ ಬೆಟ್ಟ ಪ್ರವೇಶದಂತೆ ಜನರನ್ನು ತಡೆಯುವ ಕ್ರಮ ಕೈಗೊಂಡಿಲ್ಲ ಆದ್ದರಿಂದ ಈ ಪ್ರದೇಶದಲ್ಲಿ ಕಲ್ಲು ಗಣಿಗಾರಿಕೆ, ಮರಂ ಸಾಗಾಣಿಕೆ ನಿರಂತರವಾಗಿ ನಡೆದಿದೆ. ಇದೀಗ ದುಷ್ಕರ್ಮಿಗಳು
ಬೆಟ್ಟಕ್ಕೆ ಬೆಂಕಿ ಹಚ್ಚಿರುವ ಅನುಮಾನ ವ್ಯಕ್ತವಾಗುತ್ತಿದೆ.