Breaking News
ವಿದೇಶಿ ಮಹಿಳೆ ಅತ್ಯಾಚಾರ ಕೇಸ್ ಸೇರಿ ಅತೀ ಸೂಕ್ಷ್ಮ ಕೇಸ್ ಗಳಲ್ಲಿ ಕಾರ್ಯ ನಿರ್ವಹಿಸಿ ಯಶಸ್ವಿಯಾದ    ಪಿಐ ಪ್ರಕಾಶ ಎಲ್.ಮಾಳೆಯವರಿಗೆ ಮುಖ್ಯಮಂತ್ರಿ ಪದಕ ಘೋಷಣೆ. 

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ರಾಜ್ಯ ಪೊಲೀಸ್‌ ಇಲಾಖೆಯಲ್ಲಿನ ಅತ್ಯುತ್ತಮ ಸೇವೆಯನ್ನು ಗುರುತಿಸಿ ನೀಡಲಾಗುವ ಪ್ರತಿಷ್ಠಿತ 2025 ನೇ ಸಾಲಿನ ‘ಮುಖ್ಯಮಂತ್ರಿಗಳ ಚಿನ್ನದ ಪದಕ’ಕ್ಕೆ ಗಂಗಾವತಿ ನಗರದ ಪೊಲೀಸ್ ಠಾಣೆ ಪಿಐ ಪ್ರಕಾಶ ಎಲ್.ಮಾಳೆ ಅವರು ಭಾಜನರಾಗಿದ್ದಾರೆ. ಅವರು ತಮ್ಮ ಕರ್ತವ್ಯದ ಅವಧಿಯಲ್ಲಿ ತೋರಿದ ನಿಷ್ಠೆ ಮತ್ತು ಸಾಧನೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.

ಇತ್ತೀಚಿಗೆ ಜರುಗಿದ ಸಾಣಾಪುರ ಕೆರೆಯ ಹತ್ತಿರ ವಿದೇಶಿ ಮಹಿಳೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸೇರಿದಂತೆ ಕೋಮು ಸಂಘರ್ಷ ಇತರೆ ಸೂಕ್ಷ್ಮ ಕೇಸ್ ಗಳಲ್ಲಿ ಪ್ರಕಾಶ್ ಮಾಳೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಇತರ ಅಧಿಕಾರಿಗಳ ಜೊತೆಗೆ ಕಾರ್ಯ ಮಾಡಿದ್ದಾರೆ.

ಈಗಾಗಲೇ ವಲಯ ಪೊಲೀಸ್ ಅಧಿಕಾರಿಗಳು ಪ್ರಕಾಶ್ ಮಾಳೆ ಸೇರಿದಂತೆ ಈ ಪ್ರಕರಣಗಳಲ್ಲಿ ಯಶಸ್ವಿಯಾಗಿ ಕೆಲಸ ಮಾಡಿದ ಕಾರಣಕ್ಕಾಗಿ ಸನ್ಮಾನಿಸಿದ್ದಾರೆ.

ಮಾಳೆ ಅವರು ಕೊಪ್ಪಳ,ರಾಯಚೂರು,ಬಳ್ಳಾರಿ ಜಿಲ್ಲೆಯಲ್ಲಿ ಪಿಎಸೈ, ಸಿಪಿಐಯಾಗಿ ಸೇವೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಳೆ ಅವರ ಕರ್ತವ್ಯವನ್ನು ಪೊಲೀಸ್ ಇಲಾಖೆ ಗುರುತಿಸಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಶಸ್ತಿ

ಘೋಷಿಸಿಸಲಾಗಿದೆ.

ಪ್ರಶಸ್ತಿ ಭಾಜನರಾದ ಪ್ರಕಾಶ ಮಾಳೆ ಯವರನ್ನು

ಗಂಗಾವತಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಅಭಿನಂದಸಿ ಸನ್ಮಾನಿಸಿ ಗೌರವಿಸಿದರು.

ಏ 02ಕ್ಕೆ ಪ್ರದಾನ:

ರಾಜ್ಯಾದ್ಯಂತ ಒಟ್ಟು 152 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪದಕ ಲಭಿಸಿದೆ. ಪದಕ ಪುರಸ್ಕೃತರಿಗೆ ಏ. 02 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಜರುಗಲಿದೆ.

ಈ ಸಂದರ್ಭದಲ್ಲಿ ಪಿಎಸ್ಐ ಟಿ.ಜಿ.ನಾಗರಾಜ ಹಾಗೂ ಪೊಲೀಸ್ ಸಿಬ್ಬಂದಿ ವರ್ಗದವರಿದ್ದರು.