Breaking News
ದ್ವಿತೀಯ ಪಿಯುಸಿ ಫಲಿತಾಂಶ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ.

 

*ಕಿಷ್ಕಿಂಧ ಪಿಯು ಕಾಲೇಜು ಅತ್ಯುತ್ತಮ ಸಾಧನೆ, ಶೇ. 100 ಫಲಿತಾಂಶ.

*ಫಲಿತಾಂಶದಲ್ಲಿ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ.

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ನಗರದ ಕಿಷ್ಕಿಂಧ ಪಿಯು ಕಾಲೇಜು ಈ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸಿ ಗಮನಾರ್ಹ ಸಾಧನೆ ಮಾಡಿದೆ. ಒಟ್ಟು 163 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿರುವುದು ಕಾಲೇಜಿನ ಶೈಕ್ಷಣಿಕ ಬದ್ಧತೆಯನ್ನು ತೋರಿಸುತ್ತದೆ. ಇವರಲ್ಲಿ 145 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, 18 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಸಾಧನೆ ಮಾಡಿದ್ದಾರೆಂದು ಸಂಸ್ಥೆಯ ಅಧ್ಯಕ್ಷ ಡಾ.ಜಿ.ಚಂದ್ರಪ್ಪ ಹೇಳಿದರು.

ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕೇವಲ ಶೇ.45 ಅಂಕಗಳನ್ನು ಪಡೆದ ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದರು. ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ, ಆಧ್ಯಾಪಕ ವೃಂದ ಮತ್ತು ಪಾಲಕರ ಸಹಕಾರದೊಂದಿಗೆ ಉತ್ತಮ ತರಬೇತಿ ನೀಡಿ, ಇಂದು ಶೇ. 95 ಮಟ್ಟದ ಸಾಧನೆಗೇರಿಸಿರುವುದು ಕಾಲೇಜಿನ ಮಹತ್ವದ ಸಾಧನೆಯಾಗಿದೆ.

ವಾಣಿಜ್ಯ ವಿಭಾಗದಲ್ಲಿಯೂ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿ ಶೇ.100 ಫಲಿತಾಂಶ ತಂದುಕೊಟ್ಟಿದ್ದಾರೆ. ಕೆಲ ಕಾಲೇಜುಗಳು ಹೆಚ್ಚಿನ ಪರ್ಸೆಂಟೇಜ್ ಪಡೆದ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳುವ ಸಂದರ್ಭದಲ್ಲಿ, ಕಿಷ್ಕಿಂಧ ಕಾಲೇಜು ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅವಕಾಶ ನೀಡಿ, ಅವರನ್ನು ಜಿಲ್ಲಾಮಟ್ಟದಲ್ಲಿ ಮೆರೆದಿರುವುದು ಗಮನಾರ್ಹವಾಗಿದೆ.

, “ನಮ್ಮ ಗುರಿ ಶೇಕಡಾವಾರು ಆಧಾರಿತ ಆಯ್ಕೆ ಅಲ್ಲ, ಬದಲಾಗಿ ಗುಣಮಟ್ಟದ ಶಿಕ್ಷಣ ನೀಡುವುದು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸಂಕಷ್ಟ ನಮಗೆ ತಿಳಿದಿದೆ. ಅವರಿಗೆ ಉತ್ತಮ ಶಿಕ್ಷಣ ನೀಡಿ ಜೀವನದಲ್ಲಿ ಮುಂದಕ್ಕೆ ತರುವುದು ನಮ್ಮ ಧ್ಯೇಯವಾಗಿದ್ದು ಪ್ರಾಂಶುಪಾಲ ಮುರಳೀ ಕೃಷ್ಣ ಹಾಗೂ ಆಡಳಿತ ಮಂಡಳಿ ಸದಸ್ಯರಾದ ವೀರಭದ್ರರಾವ್, ಡಾ. ಮಲ್ಲನಗೌಡ ಮತ್ತು ಅಧ್ಯಾಪಕರ ಪರಿಶ್ರಮದಿಂದ ಕಾಲೇಜಿಗೆ ಉತ್ತಮ ಹೆಸರು ಬಂದಿದೆ. ಪಾಲಕರ ಸಹಕಾರವೂ ಇದಕ್ಕೆ ಪ್ರಮುಖ ಕಾರಣವಾಗಿದೆ ಎಂದರು.

ಆಡಳಿತಾಧಿಕಾರಿ ವೀರಭದ್ರರಾವ್ ಮಾತನಾಡಿ, “ಕೆಲವು ಖಾಸಗಿ ಕಾಲೇಜುಗಳು ಪ್ರಚಾರಕ್ಕೆ ಆದ್ಯತೆ ನೀಡಿ ಪ್ರಚಾರದ ಮೂಲಕ ವಿದ್ಯಾರ್ಥಿಗಳನ್ನು ಆಕರ್ಷಿಸಲು ಪ್ರಯತ್ನಿಸುತ್ತಿವೆ. ಪಾಲಕರು ಮತ್ತು ವಿದ್ಯಾರ್ಥಿಗಳು ಇಂತಹ ಪ್ರಚಾರಕ್ಕೆ ಮರುಳಾಗದೇ, ನಿಜವಾದ ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆಯನ್ನು ಆಯ್ಕೆ ಮಾಡಬೇಕು,” ಎಂದು ಸಲಹೆ ನೀಡಿದರು.

ಒಟ್ಟಾರೆ, ಕಿಷ್ಕಿಂಧ ಪಿಯು ಕಾಲೇಜು ಕಡಿಮೆ ಅಂಕಗಳಿಂದ ಬಂದ ವಿದ್ಯಾರ್ಥಿಗಳನ್ನು ಉತ್ತೇಜಿಸಿ, ಶೇ.100 ಫಲಿತಾಂಶ ಸಾಧಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮಾದರಿಯಾಗಿ ಹೊರಹೊಮ್ಮಿದೆ

ಈ ಸಂದರ್ಭದಲ್ಲಿ ಸಾಧನೆಗೈದ ಮಕ್ಕಳನ್ನು ಸನ್ಮಾನಿಸಲಾಯಿತು ಆಡಳಿತ ಮಂಡಳಿಯ ನಿರ್ದೇಶಕರು ಮತ್ತು ಪಾಲಕರು ಉಪಸ್ಥಿತರಿದ್ದರು