ಹಿರೇಬೆಣಕಲ್ ಮೋರ್ಯರ ಬೆಟ್ಟದ ಶಿಲಾಸಮಾಧಿ ಸ್ಥಳ ಪ್ರವಾಸಿ ತಾಣವಾಗಿಸಲು ಯೋಜನೆ:ಡಾ.ಸುರೇಶ ಇಟ್ನಾಳ. *ಬೃಹತ್ ಶಿಲಾಯುಗದ ನೆಲೆ ಸಂರಕ್ಷಣೆಗೆ ಅಗತ್ಯ ಅನುದಾನ.

ಕಿಷ್ಕಿಂಧವಾಣಿ ಸುದ್ದಿ
ಗಂಗಾವತಿ:
ಹಿರೇಬೆಣಕಲ್ ನಲ್ಲಿ ಮೋರ್ಯರ ಬೆಟ್ಟದ ಪ್ರಾಚೀನ ಬೃಹತ್ ಶಿಲಾಯುಗದ (ಮೆಗಾಲಿಥಿಕ್) ನೆಲೆಯ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸುರೇಶ್ ಬಿ. ಇಟ್ನಾಳ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಭಾನುವಾರ ಹಿರೇಬೆಣಕಲ್ ನಲ್ಲಿರುವ ಐತಿಹಾಸಿಕ ನೆಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ ದರು. ಈ ತಾಣವನ್ನು ಪ್ರವಾಸಿಗರ ಮತ್ತು ಪರಿಸರ ಸ್ನೇಹಿಯಾಗಿ, ಅಭಿವೃದ್ಧಿಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ
“ನಾಡಿನ ಹೆಮ್ಮೆಯ ಈ ಬೃಹತ್ ಶಿಲಾಯುಗದ ನೆಲೆ ಕೊಪ್ಪಳ ಜಿಲ್ಲೆಯಲ್ಲಿರುವುದು ಹೆಮ್ಮೆಯ ಸಂಗತಿ. ಈ ತಾಣದ ಸಂರಕ್ಷಣೆಗೆ ನಾವು ಮೊದಲ ಆದ್ಯತೆ ನೀಡಿದ್ದೇವೆ. ಶಿಥಿಲಾವಸ್ಥೆಯಲ್ಲಿರುವ ಸ್ಮಾರಕಗಳ ರಕ್ಷಣೆ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಈಗಾಗಲೇ 80 ಲಕ್ಷ ರೂಪಾಯಿಗಳ ಅನುದಾನ ಮೀಸಲಿರಿಸಿ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ. ಗಂಗಾವತಿ-ಕೊಪ್ಪಳ ಮುಖ್ಯ ರಸ್ತೆಯಿಂದ ಹಿರೇಬೆಣಕಲ್ ನೆಲೆಯ ಕೆಳ ಭಾಗದವರೆಗೆ ಸುಗಮ ರಸ್ತೆ ನಿರ್ಮಾಣಕ್ಕೆ ವಿಶೇಷ ಒತ್ತು ನೀಡಲಾಗುವುದು. ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸುವಂತೆ ಜಿಲ್ಲಾ ಅರಣ್ಯ ಅಧಿಕಾರಿ ನಿರ್ಮಲಾ ಅವರಿಗೆ ಸೂಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಮುರಳಿಧರ, ಮಾರ್ಗದರ್ಶಕ ಮಂಜುನಾಥ ಗುಡ್ಲಾನೂರ, ದಂತ ವೈದ್ಯ ಶಿವಕುಮಾರ ಮಾಲಿಪಾಟೀಲ, ವೀರೇಶ ಅಂಗಡಿ, ಬಸನಗೌಡ ಹೊಸಹಳ್ಳಿ, ಮಂಜುನಾಥ ಡಿ, ಚಂದ್ರಶೇಖರ, ಹೆಚ್. ಭಾಷಾ,ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಉಪವಲಯ ಅರಣ್ಯ ಅಧಿಕಾರಿ ಉಮೇಶ್ವರ್, ಅರಣ್ಯಪಾಲಕ ಮಂಜುನಾಥ ನರೇರ, ಶಿವಕುಮಾರ ವಾಲಿ, ಶಿವಾನಂದ ತಳವಾರ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

