Breaking News
ಸ್ಥಳೀಯ ನ್ಯಾಯಾಲಯಕ್ಕೆ ನ್ಯಾಯಮೂರ್ತಿ ಸಿಎಂ ಪೂಣಚ್ಚ ಭೇಟಿ.

*ಎರಡನೇ ಹಿರಿಯ ಶ್ರೇಣಿ ನ್ಯಾಯಾಲಯ ಸ್ಥಾಪನೆ, ವಕೀಲರ ಭವನ ನಿರ್ಮಾಣಕ್ಕೆ ಮನವಿ.

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ:

ನ್ಯಾಯಾಲಯಕ್ಕೆ ಕೊಪ್ಪಳ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಸಿಎಂ ಪೂಣಚ್ಚ ಭೇಟಿ ನೀಡಿದರು. ಇದೇ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಚಂದ್ರಶೇಖರ್ ಸಿ, ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಕುಮಾರ, ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್, ಹಿರಿಯ ಶ್ರೇಣಿ ನ್ಯಾಯಾಧೀಶ ಜಿಬಿ ಹಳ್ಳಕಾಯಿ, ಪ್ರಧಾನ ಸಿವಿಲ್ ನ್ಯಾಯಾಧೀಶ ನಾಗೇಶ್ ಪಾಟೀಲ್, ಸಿವಿಲ್ ನ್ಯಾಯಾಧೀಶೆ ಮೇಘ ಸೋಮಣ್ಣನವರ್,

ವಕೀಲರ ಸಂಘದ ಅಧ್ಯಕ್ಷ ಶರಣಬಸಪ್ಪ ನಾಯಕ ಕಾರ್ಯದರ್ಶಿ ಹೆಚ್ ಎಂ ಮಂಜುನಾಥ್ ಉಪಾಧ್ಯಕ್ಷ ಪ್ರಕಾಶ್ ಕುಸಬಿ,

ಲೋಕೋಪಯೋಗಿ ಇಲಾಖೆಯ ಇಇ

ಹೇಮಂತ್ ರಾಜ್, ಎಇಇ ವಿಶ್ವನಾಥ, ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಗಂಗಾವತಿ ವಕೀಲರ ಸಂಘವತಿಯಿಂದ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ನ್ಯಾಯಾಧೀಶರನ್ನು ನೇಮಕ ಮಾಡಲು, ಎರಡನೇ ಹಿರಿಯ ಶ್ರೇಣಿ ನ್ಯಾಯಾಲಯ ಸ್ಥಾಪಿಸಲು ಮತ್ತು ವಕೀಲರ ಭವನ ನಿರ್ಮಾಣ ಮಾಡಲು ಮನವಿ ಮಾಡಲಾಯಿತು.