Breaking News
ಜನರನ್ನು ಬೆಸೆಯಲು ಪ್ರತಿ ಧರ್ಮದಲ್ಲಿ ಹಬ್ಬಗಳು ಇವೆ:ಗಾಲಿ ಜನಾರ್ದನ ರೆಡ್ಡಿ

* ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರ ಜೊತೆ ಸೇರಿ ಸಾಮೂಹಿಕ ಪ್ರಾರ್ಥನೆ.

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ಪ್ರತಿ ಧರ್ಮದಲ್ಲೂ ಜನರನ್ನು ಪರಸ್ಪರ ಬೆಸೆಯಲು ಹಬ್ಬಗಳು ಇವೆ, ಆದ್ದರಿಂದ ಜಾತಿ,ಧರ್ಮದ ಹೆಸರಿನಲ್ಲಿ ಅಶಾಂತಿ ಸೃಷ್ಟಿ ಸಲ್ಲದು, ಪವಿತ್ರ ರಂಜಾನ್ ಐಕ್ಯತೆಯನ್ನು ಹೇಳುತ್ತದೆ ಎಂದು ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದರು.

ಅವರು ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ನಿಮಿತ್ತ ಮುಸ್ಲಿಂ ಬಾಂಧವರ ಜೊತೆ ಸೇರಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಪರಸ್ಪರ ಶುಭ ಕೋರಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ತಾವು ರಾಜಕೀಯಕ್ಕೆ ಪ್ರವೇಶ ಮಾಡಿದಾಗಿ ನಿಂದಲೂ ಧರ್ಮ,ಜಾತಿ ಹೆಸರಿನಲ್ಲಿ ರಾಜಕೀಯ ಮಾಡಿಲ್ಲ, ಅಭಿವೃದ್ಧಿ ಮತ್ತು ಐಕ್ಯತೆ ಹೆಸರಿನಲ್ಲಿ ರಾಜಕೀಯ ಮಾಡಿ ಬಳ್ಳಾರಿ ಮತ್ತು ಗಂಗಾವತಿಯನ್ನು ಅಭಿವೃದ್ಧಿಯ ಕಡೆಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಮುಸ್ಲಿಂ ಪ್ರತಿಯೊಬ್ಬರು ದೇಶಭಕ್ತರಾಗಿ ದೇಶ,ಧರ್ಮಕ್ಕೆ ಮೊದಲು ಆದ್ಯತೆ ನೀಡಬೇಕು. ಆ ಮೂಲಕ ದೇಶದ ಅಭಿವೃದ್ಧಿ ಮತ್ತು ವೈಯಕ್ತಿಕ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಗುರುಗಳಾದ ಕಮಲ್ ಮುಸ್ತಾಪ್ ಹಾಗೂ ಈದ್ಗಾ ಕಮೀಟಿಯ ಪದಾಧಿಕಾರಿಗಳು ಮುಸ್ಲಿಂ ಸಮಾಜದ ಗುರುಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.