Breaking News
ಬಾಗಲಕೋಟೆಯ ಎಲ್ಲಾ ಸಮುದಾಯಗಳ ಬೆಂಬಲ ಚರಂತಿಮಠ ಅವರಿಗಿದೆ :ಬಿ ಶ್ರೀರಾಮುಲು.

*ನೇಕಾರ ಮತ್ತು ಗುಜರಾತ್ ಸಮುದಾಯದವರ ಜತೆ ಸಭೆ.

ಕಿಷ್ಕಿಂಧವಾಣಿ ಸುದ್ದಿ

ಬಾಗಲಕೋಟೆ,: ಬಾಗಲಕೋಟೆಯ ಎಲ್ಲಾ ಸಮುದಾಯಗಳ ಬೆಂಬಲ ಆಶೀರ್ವಾದ ಚರಂತಿಮಠ ಅವರಿಗೆ ಇದೆ. ಆದ್ದರಿಂದ ಉಪಚುನಾವಣೆಯಲ್ಲಿ ಅವರು ಅತ್ಯಧಿಕ ಮತಗಳಿಂದ ಗೆಲುವು ಪಡೆಯಲಿದ್ದಾರೆ. ಕಾಂಗ್ರೆಸ್ ನವರ ಕಪಟ ನಾಟಕ ಈ ಉಪಚುನಾವಣೆಯಲ್ಲಿ ನಡೆಯುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಬಿ. ಶ್ರೀರಾಮುಲು ಹೇಳಿದರು.

ಅವರು ಬಾಗಲಕೋಟೆ ನಗರದಲ್ಲಿ

ನೇಕಾರ ಸಮುದಾಯ ಹಾಗೂ ಗುಜರಾತಿ ಸಮುದಾಯದ ಪ್ರಮುಖರ ಜೊತೆ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ಕೊಡ ತುಂಬಿದೆ ಗ್ಯಾರಂಟಿ ನೆಪದಲ್ಲಿ ಸುಳ್ಳು ಯೋಜನೆಯನ್ನು ಪ್ರಕಟಿಸಿ ಜನರನ್ನು ಮರಳು ಮಾಡಿ ಗೆದ್ದು ಸರ್ಕಾರ ರಚನೆ ಮಾಡಿದ ಕಾಂಗ್ರೆಸ್ ಪಕ್ಷ ಸ್ವಾರ್ಥ ಮತ್ತು ಸ್ವಜನ ಪಕ್ಷಪಾತದಲ್ಲಿ ಮುಳುಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ ನಿತ್ಯವೂ ಕಾಳಗವಾಡುತ್ತಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಜನಸಾಮಾನ್ಯರ ಕಷ್ಟವನ್ನು ಯಾರೂ ಕೇಳುತ್ತಿಲ್ಲ,

ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಪಕ್ಷದ ಸರ್ಕಾರಕ್ಕೆ ರಾಜ್ಯದ ಜನರು ಬುದ್ಧಿ ಹೇಳುವ ಚುನಾವಣೆಗಳಾಗಿದ್ದು ಎರಡು ಕಡೆ ಬಿಜೆಪಿ ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಗೆಲುವು ಪಡೆಯಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್, ಅಭ್ಯರ್ಥಿ ವೀರಣ್ಣ ಚರಂತಿ ಮಠ, ರಾಜ್ಯಸಭಾ ಸದಸ್ಯ ನಾರಾಯಣ ಸಾ ಬಾಂಡೆ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು….