ಶ್ರೀ ನೀಲಕಂಠೇಶ್ವರ ದೇವಸ್ಥಾನದ 37ನೇ ವಾರ್ಷಿಕೋತ್ಸವ: ಶ್ರದ್ಧೆ, ಭಕ್ತಿಯಿಂದ ಜರುಗಿದ ರಥೋತ್ಸವ.


*ಕುರುಹೀನಶೆಟ್ಟಿ ಜಗದ್ಗುರು ಪೂಜ್ಯ ನೀಲಕಂಠ ಪಟ್ಟದಾರ್ಯ ಸ್ವಾಮೀಜಿ,ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಸೇರಿ ಪ್ರಮುಖರ ಉಪಸ್ಥಿತಿ.
ಕಿಷ್ಕಿಂಧವಾಣಿ ಸುದ್ದಿ
ಗಂಗಾವತಿ: ನಗರದ ಆರಾಧ್ಯ ದೈವ ಶ್ರೀ ನೀಲಕಂಠೇಶ್ವರ ದೇವರ ದೇವಸ್ಥಾನ ನಿರ್ಮಾಣದ 37ನೇ ವಾರ್ಷಿಕೋತ್ಸವದ ನಿಮಿತ್ಯ ಶ್ರೀ ನೀಲಕಂಠೇಶ್ವರ ಮಹಾರಥೋತ್ಸವ ಬಸವ ಜಯಂತಿಯಂದು ಸಂಜೆ ಸಾವಿರಾರು ಭಕ್ತರ ಮಧ್ಯೆ ಶ್ರದ್ದೆ, ಭಕ್ತಿಯಿಂದ ಜರುಗಿತು.
ಕರುಹೀನ ಶೆಟ್ಟಿ ಸಮಾಜದ ಜಗದ್ಗುರು ಪೂಜ್ಯ ನೀಲಕಂಠ ಪಟ್ಟದಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಗಿನ ಜಾವ ಶ್ರೀ ನೀಲಕಂಠೇಶ್ವರ ಸ್ವಾಮಿಗೆ ನೈರ್ಮಲ್ಯ ವಿಸರ್ಜನೆ, ಜಲಾಭಿಷೇಕ, ಪಂಚಾಮೃತ ಅಭಿಷೇಕ, ವಿವಿಧ ಹೂಗಳಿಂದ ಅಲಂಕಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಮಧ್ಯಾಹ್ನ ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಮಧ್ಯಾಹ್ನ ದೇವಸ್ಥಾನಕ್ಕೆ ಭೇಟಿ ನೀಡಿ ನೀಲಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ಮಡಿತೇರಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಕುರುಹಿನಶೆಟ್ಟಿ ಸಮಾಜದ ಮುಖಂಡರಾದ ಎಂ ಮಲ್ಲಿಕಾರ್ಜುನ ನಾಗಪ್ಪ ಸೇರಿದಂತೆ ಕುರುಹೀನಶೆಟ್ಟಿ ಸಮಾಜದ ಹಿರಿಯರು ಮತ್ತು ಶ್ರೀ ನೀಲಕಂಠೇಶ್ವರ ದೇವಸ್ಥಾನ ಕಮಿಟಿಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.

