Breaking News
ಮನೆಯ ಮುಂದೆ ಮೂತ್ರವಿಸರ್ಜನೆ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ನ್ಯಾಯವಾದಿ ಹಾಗೂ ಅವರ ಪತ್ನಿ ಮೇಲೆ ಹಲ್ಲೆ!

*ಜಮೀರ್ ಇತರರನ್ನು ಬಂಧಿಸುವಂತೆ ಮಾಜಿ ಶಾಸಕ ಮುನವಳ್ಳಿ ನೇತೃತ್ವದಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ.

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ಮನೆಯ ಮುಂದೆ ಮೂತ್ರ ಮಾಡಿದ ವಿಷಯಕ್ಕೆ ಸಂಬಂಧಪಟ್ಟಂತೆ ಜಮೀರ್ ಹಾಗೂ ಐವತ್ತು ಹೆಚ್ಚು ಜನರು ಸೇರಿ ನ್ಯಾಯವಾದಿ ಎಚ್.ಪ್ರಭಾಕರ್ ಹಾಗೂ ಅವರ ಪತ್ನಿಯ ಮೇಲೆ ಹಲ್ಲೆ ಮಾಡಿದ ಘಟನೆ ಬಸವೇಶ್ವರ ಕಾಲೋನಿ(ಬಂಬೂ ಬಜಾರ್)ಯಲ್ಲಿ ಮಂಗಳವಾರ ಸಂಜೆ ಜರುಗಿದ್ದು ಹಲ್ಲೆ ಮಾಡಿದವರು ಕೂಡಲೇ ಬಂಧಿಸುವಂತೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ನೇತೃತ್ವದಲ್ಲಿ ನ್ಯಾಯವಾದಿ ಪ್ರಭಾಕರ್ ಆಪ್ತರು ಹಾಗೂ ವಕೀಲರು ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಗಂಗಾವತಿಯಲ್ಲಿ ಇಂಥ ಘಟನೆಗಳು ಪದೇಪದೇ ನಡೆಯುತ್ತಿದ್ದು ಪೊಲೀಸ್ ವೈಫಲ್ಯ ಕಾರಣವಾಗಿದೆ. ಕೆಲ ವ್ಯಕ್ತಿಗಳ ಕುಮ್ಮಕ್ಕಿನಿಂದ ನಗರದಲ್ಲಿ ಪದೇ ಪದೇ ಹಲ್ಲೆ, ದೌರ್ಜನ್ಯ, ಗೂಂಡಾಗಿರಿಯಂತಹ ಕೃತ್ಯಗಳು ನಡೆಯುತ್ತಿವೆ. ಕೃತ್ಯವೆಸಗಿದವರನ್ನು ಕೂಡಲೇ ಬಂಧಿಸಬೇಕೆಂದರು.

ಡಿಎಸ್ಪಿ ಜೆ.ಎಸ್.ನ್ಯಾಮಗೌಡ ಮಾತನಾಡಿ, ದೌರ್ಜನ್ಯ ಗುಂಡಾಗಿರಿ ಹಲ್ಲೆ ಈ ಕೃತ್ಯದಲ್ಲಿ ಪಾಲ್ಗೊಂಡಿರುವ ಯಾರನ್ನು ಬಿಡುವ ಪ್ರಶ್ನೆ ಇಲ್ಲ ಅವರನ್ನು ಕೂಡಲೇ ಬಂಧಿಸಿ ಶಿಕ್ಷಿಸಲಾಗುತ್ತದೆ. ಎಲ್ಲರೂ ಸಹಕಾರ ನೀಡುವ ಮೂಲಕ ಗಂಗಾವತಿಯಲ್ಲಿ ಶಾಂತಿ ನೆಲೆಸಲು ಸಹಕರಿಸಬೇಕು. ಈಗಾಗಲೇ ಗಂಗಾವತಿ ನಗರದಾದ್ಯಂತ ಸಿಸಿ ಕ್ಯಾಮರಗಳನ್ನು ಅಳವಡಿಸಿ ಕಣ್ಗಾವಲು ಇಡಲಾಗಿದೆ ಅವರ ಹಿಂದೆ ಇರುವವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷರು,ಕಾರ್ಯದರ್ಶಿ,ಪದಾಧಿಕಾರಿಗಳು ಬಿಜೆಪಿ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳಿದ್ದರು.

ಚಿಕಿತ್ಸೆ: ಮೂತ್ರ ವಿಸರ್ಜನೆ ಘಟನೆಯಲ್ಲಿ ಅಸ್ವಸ್ಥಗೊಂಡ ನ್ಯಾಯವಾದಿ ಎಚ್.ಪ್ರಭಾಕರ್ ಹಾಗೂ ಅವರ ಪತ್ನಿ ಅನಸೂಯಾ ಇವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

**

“ಮೂತ್ರ ವಿಸರ್ಜನೆ ಮಾಡಿ ರದ್ದಾಂತಕ್ಕೆ ಕಾರಣನಾದ ಜಮೀರ್ ಎನ್ನುವ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಗಂಗಾವತಿ ಬಸ್ ನಿಲ್ದಾಣದಲ್ಲಿ ದುಷ್ಕರ್ಮಿಯಿಂದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ!

*ಪುಡಾರಿಗಳ ಅಡ್ಡ ಆಗಿರುವ ಕೇಂದ್ರ ಬಸ್ ನಿಲ್ದಾಣ. 

*ನಿತ್ಯವೂ ಪ್ರಯಾಣಿಕರು,ವ್ಯಾಪಾರಿಗಳ ಮೇಲೆ ನಿಶಾಚರಿಗಳಿಂದ ಹಲ್ಲೆ, ದೌರ್ಜನ್ಯ.

*ಒಂದು ವರ್ಷದಿಂದ ಕೆಟ್ಟು ನಿಂತಿರುವ ಬಸ್ ನಿಲ್ದಾಣದ ಸಿಸಿ ಕ್ಯಾಮರಾಗಳು.

*ರಾತ್ರಿ ವೇಳೆ ನಗರದ ವಿವಿಧ ಸರ್ಕಲ್ ಗಳ ಪುಡಾರಿ ಯುವಕರಿಂದ ಗುಂಡು ಪಾರ್ಟಿ

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ದುಷ್ಕರ್ಮಿಯೊರ್ವ ವಿನಾಕಾರಣ ವ್ಯಕ್ತಿಯೊಬ್ಬರ ಮೇಲೆ ಕಲ್ಲಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರಿಂದ ತಲೆ ಮತ್ತು ಎಡ ಭಾಗದ ಕಣ್ಣು, ಕಿವಿಗೆ ತೀವ್ರ ಗಾಯವಾದ ಪ್ರಕರಣ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಮಧ್ಯ ರಾತ್ರಿ ಜರುಗಿದೆ.

ಗಂಗಾವತಿ ಜೆಸ್ಕಾಂ ಕಚೇರಿಯ ನಿವೃತ್ತ ಲೈನ್ ಮ್ಯಾನ್ ಶಿವಪ್ಪ ಕೇಂದ್ರ ಬಸ್ ನಿಲ್ದಾಣದಲ್ಲಿ ಕುಳಿತಿರುವ ಸಂದರ್ಭದಲ್ಲಿ ದುಷ್ಕರ್ಮಿ ಒಬ್ಬ ಆಗಮಿಸಿ ವಿನಾಕಾರಣ ಜಗಳ ತೆಗೆದು ಕಲ್ಲಿನಿಂದ ತಲೆ ಮತ್ತು ಎಡ ಭಾಗದ ಕಣ್ಣು ಕಿವಿಗೆ ಹೊಡೆದಿದ್ದರಿಂದ ದೂರ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿನಿತ್ಯ ಪುಡಾರಿಗಳ ಅಟ್ಟಹಾಸ ಹೆಚ್ಚಾಗಿದ್ದು ನಿತ್ಯವೂ ಪ್ರಯಾಣಿಕರು ಮತ್ತು ಸಾರ್ವಜನಿಕರ ಮೇಲೆ ಮತ್ತು ವ್ಯಾಪಾರಿಗಳ ಮೇಲೆ ದೌರ್ಜನ್ಯ ಗುಂಡಾಗಿರಿ ವ್ಯಸಗುವ ಗುಂಪು ಕೆಲಸ ಮಾಡುತ್ತಿದೆ. ಜೊತೆಗೆ ನಗರದ ವಿವಿಧ ಸರ್ಕಲ್ ಗಳಲ್ಲಿ ಮಧ್ಯರಾತ್ರಿ ಪುಡಾರಿಗಳು ಮಧ್ಯಪಾನ ಸೇವನೆ ಮಾಡಿ ಪ್ರಯಾಣಿಕರು, ಸಾರ್ವಜನಿಕರು ಮತ್ತು ವಾಹನ ಸವಾರರ ಮೇಲೆ ಹೊಡಿಬಡಿ ಮಾಡುತ್ತಿದ್ದಾರೆ.

ಕೆಟ್ಟು ನಿಂತ ಸಿ.ಸಿ. ಕ್ಯಾಮರಾಗಳು: ಕೇಂದ್ರ ಬಸ್ ನಿಲ್ದಾಣಕ್ಕೆ ನಿತ್ಯವೂ ಸಾವಿರಾರು ಪ್ರಯಾಣಿಕರು ಸಾರ್ವಜನಿಕರು ಭೇಟಿ ನೀಡುತ್ತಾರೆ ಅಪರಾಧ ಕೃತ್ಯಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೆ. ಎಸ್. ಆರ್. ಟಿ.ಸಿ ಕ್ಯಾಮರಗಳನ್ನು ಅಳವಡಿಸಿದ್ದು ಕಳೆದ ಒಂದು ವರ್ಷದಿಂದ ಸಿಸಿ ಕ್ಯಾಮರಗಳು ಕೆಟ್ಟು ನಿಂತಿವೆ. ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಿ.ಸಿ.ಕ್ಯಾಮೆರಾ ಗಳು ಇರುವ ಜಾಗದಲ್ಲಿ ವಿದ್ಯುತ್ ತೊಂದರೆ ಇದ್ದು ಕಳೆದ ಕೆಲವು ದಿನಗಳಿಂದ ಸಿ.ಸಿ. ಕ್ಯಾಮೆರಾಗಳು ಕೆಲಸ ಮಾಡುತ್ತಿಲ್ಲ.ದುರಸ್ತಿ ಮಾಡಿಸಲಾಗುತ್ತದೆ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ.

ದುಷ್ಕರ್ಮಿ‌ ಬಂಧನಕ್ಕೆ ಕ್ರಮ: ಕೇಂದ್ರ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ದುಷ್ಕರ್ಮಿಯ ಕುರಿತು ಪೊಲೀಸ್ ಇಲಾಖೆಯ ಶ್ರೀ ಕೃಷ್ಣದೇವರಾಯ ವೃತ್ತದ ಸಿ ಸಿ ಕ್ಯಾಮರಾದಲ್ಲಿ ವಿಡಿಯೋ ಸೆರೆಯಾಗಿದ್ದು ದುಷ್ಕರ್ಮಿಯನ್ನು ಶೀಘ್ರದಲ್ಲೇ ಬಂದಿಸಲಾಗುತ್ತದೆ ಎಂದು ನಗರ ಪೊಲೀಸ್ ಠಾಣೆಯ ಸಿ. ಪಿ. ಐ. ಪ್ರಕಾಶ ಮಾಳೆ ತಿಳಿಸಿದ್ದಾರೆ.

 

ಹಂಪಪಟ್ಟಣ:ಶಾಲೆಯಲ್ಲಿ ಮಕ್ಕಳಿಂದ ಅನುಚಿತ ಕಾರ್ಯ,ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ. * ಇಬ್ಬರು ಶಿಕ್ಷಕರ ವರ್ಗಾವಣೆಗೆ ಒತ್ತಾಯ.

ಕಿಷ್ಕಿಂಧವಾಣಿ ಸುದ್ದಿ

ಹಗರಿಬೊಮ್ಮನಹಳ್ಳಿ : ತಾಲೂಕಿನ ಹಂಪಾಪಟ್ಟಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಅನುಚಿತ ಕಾರ್ಯ ಮಾಡಿಸಿದ ಇಬ್ಬರು ಶಿಕ್ಷಕರನ್ನು ತಕ್ಷಣವೇ ವರ್ಗಾವಣೆ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿ ಬಿಇಓಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ರೈತ ಮುಖಂಡ ಬಂಟರ ಕುಬೇರ ಮಾತನಾಡಿ, ಶಿಕ್ಷಕರನ್ನು ದೇವರ ಸಮವಾಗಿ ಕಾಣುವ ನಮ್ಮ ಗ್ರಾಮದ ವಿದ್ಯಾರ್ಥಿಗಳಿಗೆ ಶಿಕ್ಷಕರಿಬ್ಬರ ಅನುಚಿತ ವರ್ತನೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಕುಂಠಿತವಾಗತೊಡಗಿದೆ ಎಂದು ನೋವನ್ನು ತೋಡಿಕೊಂಡರು.

ಪ್ರಭಾರಿ ಮುಖ್ಯ ಶಿಕ್ಷಕ ಮತ್ತು ದೈಹಿಕ ಶಿಕ್ಷಕ ಇವರಿಬ್ಬರನ್ನು ಈ ಕೂಡಲೇ ಬೇರೆ ಕಡೆ ವರ್ಗಾವಣೆ ಮಾಡಿ ಶಾಲೆಯಲ್ಲಿ ನಡೆಯುತ್ತಿರುವ ದುರ್ವತನೆ ಬಗ್ಗೆ ನ್ಯಾಯ ಸಮ್ಮತ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಈ ಕೂಡಲೆ ಕ್ರಿಮಿನಲ್ ಕೇಸ್ ದಾಖಲಿಸಿ ಸಸ್ಪೆಂಡ್ ಮಾಡಬೇಕೆಂದರು.

ನಮ್ಮೂರಿನ ಶಾಲೆಯಲ್ಲಿ ಇಂಥ ಘಟನೆಗಳು ಯಾವತ್ತು ನಡೆದಿರಲಿಲ್ಲ, ಆದರೆ ಯಾರದ್ದೋ ವೈಯಕ್ತಿಕ ಕಾರಣದಿಂದ ಈ ಘಟನೆ ನಡೆದುಹೋಗಿದೆ ಇದರಿಂದ ಗ್ರಾಮದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ ಎಂದರು. ನಮ್ಮ ಶಾಲೆಯಲ್ಲಿ ನಡೆದ ಘಟನೆ ಪೊಲೀಸ್ ಠಾಣೆಯವರಿಗೆ ಹೋಗಿರುವುದು ದುರದೃಷ್ಟಕರ ಸಂಗತಿ. ಇದರಿಂದ ಶಾಲೆಗೆ ಕಪ್ಪು ಚುಕ್ಕಿ ಬಂದಂತಾಗಿದೆ ಎಂದರು.

ಈ ಕೊಡಲೇ ಶಿಕ್ಷಕರಿಬ್ಬರನ್ನು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ವರ್ಗಾವಣೆ ಮಾಡುವುದಷ್ಟೇ ಅಲ್ಲ. ಶಿಕ್ಷಣ ಇಲಾಖೆಯ ನಿಯಮಾನುಸಾರ ತನಿಖೆ ಮಾಡಿ, ತಪ್ಪಿತಸ್ಥ ಶಿಕ್ಷಕರನ್ನು ಸಸ್ಪೆಂಡ್ ಮಾಡಬೇಕು ಎಂದು ಎಸ್ ಡಿ ಎಮ್ ಸಿ ಅಧ್ಯಕ್ಷ ವಿ, ಹನುಮಂತ ಆಗ್ರಹಿಸಿದರು,

ಈ ಸಂಧರ್ಭದಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಬುಡ್ಡಿ ಬಸವರಾಜ್, ಗ್ರಾಮ ಪಂಚಾಯಿತಿ ಸದಸ್ಯ ಬಿ ನಾಗರಾಜ್, , ನವೋದಯ ಯುವಕ ಸಂಘದ ಅಧ್ಯಕ್ಷ ಉಪ್ಪಾರ್ ಹನುಮಂತ, ಗ್ರಾಮದ ರೈತ ಮುಖಂಡ ಬಂಟರ ಸೋಮಣ್ಣ, ಹಾಗೂ ಶಾಲೆಯ ಹಳೆ ವಿದ್ಯಾರ್ಥಿ ಬಳಗದ ಸೇರಗಾರ್ ಸೋಮನಾಥ್, ತಳವಾರ್ ರಾಮು, ಸೀಗೇನಹಳ್ಳಿ ಚಂದ್ರು, ಸಿ, ಪ್ರಹ್ಲಾದ್, ಸೀಗೆನಹಳ್ಳಿ ಬಸವರಾಜ, ಹನುಮಂತ ಎಚ್ ತೀರ್ಥ ಪ್ರಸಾದ್, ಹೆಚ್ ಅಶೋಕ್, ಪತ್ರಿ ಯಲ್ಲಪ್ಪ ಸೀಗೇನಹಳ್ಳಿ ಮಾರುತಿ, ಸೋಮನಾಥ ಭಜಂತ್ರಿ, ಬರದರೂ ಸೋಮು ಇತರರು ಇದ್ದರು

*”ಹಂಪಾಪಟ್ಟಣದ ಶಾಲೆಯಲ್ಲಿ ಜರುಗಿರುವ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ

ಸಮಗ್ರ ಮಾಹಿತಿ ಸಂಗ್ರಹಿಸಲಾಗಿದೆ.ವರದಿಯನ್ನು ಡಿಡಿಪಿಐ ಅವರಿಗೆ ಸಲ್ಲಿಸಲಾಗುತ್ತದೆ.”

-ಪ್ರಭಾಕರ ಬಿಇಓ ಹಗರಿಬೊಮ್ಮನಹಳ್ಳಿ.

ಅಪ್ರಾಪ್ತೆಗೆ ಹೆರಿಗೆ, ಪೋಕ್ಸೋ ಕೇಸ್ ದಾಖಲು ಸೋದರ ಮಾವನಿಂದ ಕೃತ್ಯ.

ಅಪ್ರಾಪ್ತೆಗೆ ಹೆದರಿಸಿ ಆತ್ಯಾಚಾರ,ಬೇರೆಯವರಿಗೆ ಹೇಳದಂತೆ ತಾಕೀತು.

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ತಾಲೂಕಿನ ಗ್ರಾಮೀಣ ಭಾಗದ ಅಲ್ಪಸಂಖ್ಯಾತರ ಕಾಲೇಜಿನ

ವಸತಿ ನಿಲಯದಲ್ಲಿ ಅಪ್ರಾಪ್ತೆ ಹೆರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ

ಬಾಧಿತೆಯ ತಾಯಿ ಅಣ್ಣ ಅನ್ವರಬಾಷಾ ಇವರ ಪುತ್ರ ಅಲ್ಪಪಬಾಷಾ (21) ಈತನು ಅಪ್ರಾಪ್ತೆಯನ್ನು ಪುಸಲಾಯಿಸಿ ಕಳೆದ ಅಕ್ಟೋಬರ್ ತಿಂಗಳಿಂದ ಲೈಂಗಿಕ ದೌರ್ಜನ್ಯವೆಸಗಿದ್ದು

ಲೈಂಗೀಕ ದೌರ್ಜನ್ಯವೆಸಗಿರುವ ಕುರಿತು ದೂರಿನಲ್ಲಿ ತಿಳಿಸಲಾಗಿದೆ.

ಫೆಬ್ರುವರಿ 19 ನೇ ತಾರೀಖಿನಂದು ರಾತ್ರಿ ಜಾಸ್ತಿ ರಕ್ತ ಸ್ರಾವವಾಗಿದ್ದು ಹಾಸ್ಟೆಲ್ ವಾರ್ಡನ್ ಅವರಿಗೆ ತಿಳಿಸಿದಾಗ ಬಾಲಕಿಯ ತಂದೆ-ತಾಯಿಯವರಿಗೆ ಫೋನ್ ಮಾಡಿ ಕರೆಯಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರ ಜತೆ ಗಂಗಾವತಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೃತ್ಯವೆಸಗಿದ ಅಲ್ಲಪಾಬಾಷಾ ಹೊಸ ಮಲಪನಗುಡಿ ಈತನ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.