Breaking News
ಅಕ್ರಮ ಇಟ್ಮಂಗಿ ಭಟ್ಟಿಗಳಿಗೆ ಅಕ್ರಮ ಮಣ್ಣು ಸಾಗಾಣಿಕೆ ತಡೆಯುವಂತೆ ಆಗ್ರಹ

*ಅಕ್ರಮವಾಗಿ ಮಣ್ಣು ಸಾಗಾಟ :ಜನಪ್ರತಿನಿಧಿಗಳ ಹಿಂಬಾಲಕರು, ಅಧಿಕಾರಿಗಳು ಶಾಮೀಲು

*ಅಕ್ರಮದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದವರನ್ನು ಟಾರ್ಗೆಟ್ ಮಾಡುತ್ತಿರುವ ಡಿವೈಎಸ್ಪಿ ಆಮಾನತ್ತಿಗೆ ಆಗ್ರಹ

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ತಾಲೂಕಿನ ವೆಂಕಟಗಿರಿ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಇಟ್ಟಂಗಿ ಭಟ್ಟಿಗಳನ್ನು ನಡೆಸಲಾಗುತ್ತಿದ್ದು ಈ ಇಟ್ಟಂಗಿ ಭಟ್ಟಿ ಗಳಿಗೆ ಅಕ್ರಮವಾಗಿ ತುಂಗಭದ್ರಾ ಡ್ಯಾಮಿನ ಹಿಂಭಾಗದಿಂದ ಫಲವತ್ತಾದ ಮಣ್ಣನ್ನು ತಂದು ಉಪಯೋಗಿಸಲಾಗುತ್ತಿದೆ. ವೆಂಕಟಗಿರಿ ಭಾಗದ ಪರಿಸರ ವ್ಯಾಪಕವಾಗಿ ಹಾನಿ ಮತ್ತು ರಾಜ್ಯ ಸರ್ಕಾರಕ್ಕೆ ರಾಜಧನ ನಷ್ಟವಾಗುತ್ತಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ ಹೋರಾಟಗಾರರನ್ನೇ ಡಿ ಎಸ್ ಪಿ ಅವರು ಟಾರ್ಗೆಟ್ ಮಾಡುತ್ತಿದ್ದು ಅವರನ್ನು ಅಮಾನತು ಮಾಡುವಂತೆ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷ ಅಜಯ್‌ಕುಮಾರ ಚಲುವಾದಿ ಒತ್ತಾಯಿಸಿದ್ದಾರೆ.

ಅವರು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಕಳೆದ 15-20 ವರ್ಷಗಳಿಂದ ಕೊಪ್ಪಳ ತಾಲೂಕಿನ ತುಂಗಭದ್ರಾ ಜಲಾಶಯದ ಹಿಂಭಾಗದಲ್ಲಿ ಅಕ್ರಮವಾಗಿ ಮಣ್ಣು ಅಗೆದು ಗಂಗಾವತಿ ತಾಲೂಕಿನ ವೆಂಕಟಗಿರಿ ಸಮೀಪ ಇರುವ ಇಟ್ಟಿಗೆ ಭಟ್ಟಿಗಳಿಗೆ ಸಾಗಾಟ ಮಾಡಲಾಗುತ್ತಿದೆ. ರಾತ್ರೋ ರಾತ್ರಿ ಹತ್ತಾರು ಟಿಪ್ಪರುಗಳು, ಲಾರಿಗಳು ಪ್ರತಿ ದಿನಾಲೂ ಮಣ್ಣು ಸಾಗಾಟ ಮಾಡುತ್ತಿದ್ದು, ಡ್ಯಾಂ ಹಿಂಭಾಗದಲ್ಲಿ ದೊರೆಯುವ ಫಲವತ್ತತ್ತೆಯಿಂದ ಕೂಡಿದ ಮಣ್ಣನ್ನು ರೈತರ ಜಮೀನುಗಳಿಗೆ ಹಾಕುವುದು ಬಿಟ್ಟು, ದುಬಾರಿ ಹಣಕ್ಕೆ ಕೆಲ ಪ್ರಭಾವಿಗಳು ಮಾರಾಟ ಮಾಡಿಕೊಳ್ಳುತ್ತಿದ್ದಾರೆ. ಈ ದಂಧೆವು ಕೆಲ ಹಲವು ವರ್ಷಗಳಿಂದ ನಡೆಯುತ್ತಿದೆ. ಮಾರ್ಚ್ 04,2026 ರಂದು ಸಂಘಟನೆಯ ಕಾರ್ಯಕರ್ತರು ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯ ಮಾಹಿತಿಯನ್ನು 112 ಗೆ ಕರೆ ಮಾಡಿ, ಮಾಹಿತಿ ನೀಡಲಾಗಿತ್ತು. ಆಗ ಲಾರಿ ಮಾಲೀಕರು ಸಂಘಟನೆಯ ಕಾರ್ಯಕರ್ತರಿಗೆ ಹಣ ಆಮಿಷವನ್ನು ನೀಡಿದ್ದಾರೆ. ಕಾರ್ಯಕರ್ತರು ಹಣದ ಆಮಿಷಕ್ಕೆ ಮಣಿಯದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇಷ್ಟೇಲ್ಲ ಆದರೂ ಗಂಗಾವತಿ ಡಿವೈಎಸ್ಪಿಯವರು ಟಿಪ್ಪರು ಲಾರಿಗಳನ್ನು ಹಿಡಿಯಲು ನಿಮಗೆ ಏನು ಅಧಿಕಾರವಿದೆ. ನಿಮ್ಮ ಮೇಲೆಯೇ ರಾಬರಿ ಪ್ರಕರಣ ದಾಖಲು ಮಾಡಲಾಗುವುದು ಎಂದು ಕಾರ್ಯಕರ್ತರಿಗೆ ಧಮ್ಕಿ ಹಾಕಿರುವುದು ಅತ್ಯಂತ ಖಂಡನೀಯವಾಗಿದೆ. ಈ ರೀತಿಯಾಗಿ ಅಕ್ರಮ ಮಣ್ಣು ಸಾಗಾಟ ಮಾಡುವುದನ್ನು ತಡೆಯಲು ಮುಂದಾಗಿರುವ ಕಾರ್ಯಕರ್ತರಿಗೆ ಧಮ್ಕಿ ಹಾಕುತ್ತಿರುವುದು ಅಧಿಕಾರಿಗಳ ನಡೆಯ ಮೇಲೆ ಅನುಮಾನ ಉಂಟಾಗುತ್ತಿದೆ. ಕೂಡಲೇ ಎಸ್ಪಿಯವರು,ಐಜಿಯವತು ಅಕ್ರಮವಾಗಿ ಡ್ಯಾಂನ ಮಣ್ಣನ್ನು ಅಕ್ರಮವಾಗಿ ಇಟ್ಡಂಗಿ ಭಟ್ಟಿಗಳಿಗೆ ಸಾಗಾಟ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಹಾಗೂ ಹೋರಾಟಗಾರರಿಗೆ

ಧಮ್ಕಿ ಹಾಕಿರುವ ಡಿವೈಎಸ್ಪಿ ಅವರನ್ನು ಅಮಾನತ್ತು ಮಾಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ

ಸಂಘಟನೆಯ ತಾಲೂಕು ಘಟಕದ ಅಧ್ಯಕ್ಷ ಯಮನೂರ ಮಾದಿಗ,ಪ್ರಮುಖರಾದ ಮರ್ದಾನ ಅಲಿ, ಉಮೇಶ ನಾಯಕ, ಶಿವಕುಮಾರ ಹಾಗೂ ಇತರರಿದ್ದರು.

ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಿಂದ ಆನೆಗೊಂದಿಯನ್ನು  ಕೈಬಿಡುವಂತೆ ಕೊಪ್ಪಳದಲ್ಲಿ ಬೃಹತ್ ಪಾದಯಾತ್ರೆ!

*ಪ್ರತಿಭಟನೆಯ ನಂತರ ಡಿಸಿ ಅವರಿಗೆ ಮನವಿ ಸಲ್ಲಿಕೆ.

*ಲಲಿತಾರಾಣಿ ಶ್ರೀರಂಗದೇವರಾಯಲು,ಶ್ರೀಕೃಷ್ಣದೇವರಾಯ ಸೇರಿ ಪ್ರಮಖರ ನೇತೃತ್ವ

*ಪ್ರಾಧಿಕಾರ ಜೀವಿಸುವ ಹಕ್ಕುಗಳನ್ನು ಕಸಿದುಕೊಂಡಿದೆ.

*20 ವರ್ಷಗಳಿಂದ ಮಾಸ್ಟರ್ ಪ್ಲಾನ್ ರಚನೆಯಾಗಿಲ್ಲ

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ಮಾರಕಗಳ ರಕ್ಷಣೆಯ ನೆಪದಲ್ಲಿ ಜನಸಾಮಾನ್ಯರ ಜೀವಿಸುವ ಮೂಲಭೂತ ಮತ್ತು ಮಾನವ ಹಕ್ಕುಗಳನ್ನು ಹಂಪಿ ಅಭಿವೃದ್ಧಿ ಪ್ರಾಧಿಕಾರ ಕಸಿದುಕೊಂಡಿದೆ ಆದ್ದರಿಂದ ಆನೆಗೊಂದಿ ಭಾಗವನ್ನು ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಿಂದ ಕೈಬಿಡುವಂತೆ ಆಗ್ರಹಿಸಿ ಆನೆಗೊಂದಿ ರಾಜ ವಂಶಸ್ಥರ ನೇತೃತ್ವದಲ್ಲಿ 15 ಗ್ರಾಮಗಳ ಗ್ರಾಮಸ್ಥರು ರೈತರು ಮಹಿಳೆಯರು ಕೊಪ್ಪಳದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಆನೆಗೊಂದಿ ರಾಜ ವಂಶಸ್ಥರಾದ ಲಲಿತಾರಾಣಿ ಶ್ರೀರಂಗದೇವರಾಯಲು ಹಾಗೂ ಶ್ರೀ ಕೃಷ್ಣದೇವರಾಯಲು ಮಾತನಾಡಿ ಐತಿಹಾಸಿಕ ಪ್ರಸಿದ್ಧ ಆನೆಗೊಂದಿ ಕಿಷ್ಕಿಂಧಾ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಕಳೆದ 35 ವರ್ಷಗಳ ಹಿಂದೆ ಆನೆಗೊಂದಿ ಭಾಗವನ್ನು ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ತರಲು ಒಪ್ಪಿಕೊಳ್ಳಲಾಗಿತ್ತು ಆದರೆ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಇತ್ತೀಚಿನ ಕೆಲ ನಿಯಮಗಳು ಮತ್ತು ಅಧಿಕಾರಿಗಳು ಆನೆಗುಂದಿ ಭಾಗದ ಜನರ ಜೀವಿಸುವ ಹಕ್ಕನ್ನು ಮತ್ತು ಮಾನವ ಹಕ್ಕುಗಳನ್ನು ಕಸಿದುಕೊಂಡಿದೆ.ಇಲ್ಲಿನ ಜನರನ್ನು ಕತ್ತಲಿನಲ್ಲಿ ಬದುಕನ್ನು ದೂಡುವಂತೆ ಮಾಡಿದೆ. ಮನೆಗಳಿಗೆ ಸಣ್ಣಪುಟ್ಟ ವ್ಯಾಪಾರದ ಅಂಗಡಿಗಳಿಗೆ ವಿದ್ಯುತ್ ಸಂಪರ್ಕ ಖಂಡಿತ ಮಾಡುವುದು, ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುವುದು, ಗುಡಿಸಲು, ಮನೆ ನಿರ್ಮಾಣಕ್ಕೆ ಅಡ್ಡಿಪಡಿಸಲಾಗುತ್ತಿದೆ. ಹಂಪಿ ಅಭಿವೃದ್ಧಿ ಭಾಗದ ಅಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳು ಪೊಲೀಸ್ ಅಧಿಕಾರಿಗಳು ಆನೆಗೊಂದಿ ಭಾಗದ ಜನರನ್ನು ಅನುಮಾನದಿಂದ ನೋಡುತ್ತಿದ್ದಾರೆ ಅಕ್ರಮದ ಹೆಸರಿನಲ್ಲಿ ಇಲ್ಲಿಯ ಅಂಗಡಿ ಮುಂಗಟ್ಟುಗಳನ್ನು ಮನೆಗಳನ್ನು ಮಾನವೀಯತೆ ಇಲ್ಲದೆ ತೆರವುಗೊಳಿಸಲಾಗುತ್ತಿದೆ.

ಕಳೆದ 20 ವರ್ಷಗಳಿಂದ ಮಹಾಯೋಜನೆ ಮಾಸ್ಟರ್ ಪ್ಲಾನ್ ಘೋಷಣೆಯಾಗಿಲ್ಲ. ಸ್ಮಾರಕಗಳ ಸಂರಕ್ಷಣೆ ಸಾವಿರಾರು ವರ್ಷಗಳಿಂದ ಆನೆಗೊಂದಿ ಭಾಗದ 15 ಹಳ್ಳಿಗ ಜನರೇ ಮಾಡಿದ್ದಾರೆ ಆದರೆ ಸ್ಮಾರಕಗಳ ಸಂರಕ್ಷಣೆ ನೆಪದಲ್ಲಿ ಆನೆಗೊಂದಿ ಭಾಗದ 15 ಗ್ರಾಮಗಳ ಗ್ರಾಮಗಳ ಗ್ರಾಮಸ್ಥರನ್ನು ಒಕ್ಕಲಿಬ್ಬಿಸುವ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಕ್ರಮ ಕಂಡನೀಯವಾಗಿದೆ. ಜನಪ್ರತಿನಿಧಿಗಳು ನಮ್ಮ ಭಾಗದ ಸಮಸ್ಯೆಗಳಿಗೆ ಯಾರು ಸ್ಪಂದಿಸುತ್ತಿಲ್ಲ. ಗ್ರಾಮ ಪಂಚಾಯಿತಿಯಲ್ಲಿ ಸಣ್ಣಪುಟ್ಟ ಕೆಲಸಗಳಿಗೂ ಅರ್ಜಿ ಸಲ್ಲಿಸಿದರೆ ಆ ಅರ್ಜಿಯನ್ನು ಹಂಪಿ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ನಾಲ್ಕು ಪಂಚಾಯತಿಯ ಪಿಡಿಓಗಳು ರವಾನೆ ಮಾಡುತ್ತಾರೆ ನಂತರ ಪ್ರಾಧಿಕಾರದ ಅಧಿಕಾರಿಗಳು ಇದು ಮಾಡಲು ಬರುವುದಿಲ್ಲ ನಿಯಮಗಳು ಅಡ್ಡಿಯಾಗುತ್ತವೆ ಎಂದು ಶರಬರೆಯುತ್ತಾರೆ. ಇದರಿಂದ ಆನೆಗೊಂದಿ ಗ್ರಾಮದ 15 ಗ್ರಾಮಗಳ ಜನರ ಬದುಕು ಸಂಕಷ್ಟದಿಂದ ಕೂಡಿದೆ, ಆದ್ದರಿಂದ ಕೂಡಲೇ ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಿಂದ ಆನೆಗೊಂದಿ ಭಾಗವನ್ನು ಕೈಬಿಡಬೇಕು. ಜೊತೆಗೆ ಅಭಿವೃದ್ಧಿ ಕಾರ್ಯಗಳು ನಡೆಯಬೇಕು. ಸಣ್ಣಪುಟ್ಟ ವ್ಯಾಪಾರಕ್ಕೆ ಟ್ರೇಡ್ ಲೈಸೆನ್ಸ್ ಕೊಡುವ ಅಧಿಕಾರವನ್ನು ಗ್ರಾಮ ಪಂಚಾಯತಿಗಳಿಗೆ ನೀಡಬೇಕು.

ಕೂಡಲೇ ಸಂಸದರು ಶಾಸಕರು ಜಿಲ್ಲಾ ಉಸ್ತುವಾರಿ ಸಚಿವರು ಮುಖ್ಯಮಂತ್ರಿಗಳ ಮಟ್ಟದಲ್ಲಿ ಮಾತುಕತೆ ನಡೆಸಿ ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಕಾರಿಗನೂರನ್ನು ಕೈ ಬಿಟ್ಟಂತೆ ಆನೆಗೊಂದಿ ಭಾಗದ 15 ಹಳ್ಳಿಗಳನ್ನು ಕೈಬಿಡಬೇಕು.

1961 ರಾಜ್ಯ ಪುರಾತತ್ವ ಮತ್ತು ಪ್ರಾಚ್ಯ ವಸ್ತು ಸಂಬಂಧಿಸಿದಂತೆ ಕಾಯಿದೆಗೆ ವಿಧಾನಸಭೆಯಲ್ಲಿ ತಿದ್ದುಪಡಿ ತಂದು

1988 ಪುರಾತತ್ವ ಮತ್ತು ಪ್ರಾಚ್ಯ ವಸ್ತು ಅಧಿನಿಯಮ ವ್ಯಾಪ್ತಿಗೆ ಆನೆಗೊಂದಿ ಮತ್ತು ವಿರುಪಾಪುರ ಗಡ್ಡಿಯನ್ನು

ಕೆಲವು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ತಪ್ಪು ಮಾಹಿತಿಯನ್ನು ಸರ್ಕಾರಕ್ಕೆ ತಿಳಿಸಿ ಸೇರಿಸಿದ್ದು ಮೊದಲಿಗೆ ಕೋರ್ ಝೋನ್ ನಿಂದ ಆನೆಗೊಂದಿ ಮತ್ತು ವಿರುಪಾಪುರ ಗಡ್ಡಿಯನ್ನು ಕೈಬಿಡಬೇಕು.

ಕೂಡಲೇ ಆನೆಗುಂದಿ ಭಾಗದ 15 ಗ್ರಾಮಗಳ ಗ್ರಾಮಸ್ಥರನ್ನು ರಾಜವಂಶಸ್ಥರನ್ನು ರೈತರನ್ನು ಮಹಿಳೆಯರನ್ನು ಸೇರಿಸಿ ರಾಜ್ಯ ಸರ್ಕಾರ ಪ್ರವಾಸೋದ್ಯಮ ಇಲಾಖೆ ರಾಜ್ಯ ವಸ್ತು ಇಲಾಖೆ ಹಂಪಿ ಅಭಿವೃದ್ಧಿ ಪ್ರಾಧಿಕಾರದವರು ಸಭೆ ನಡೆಸಿ ಸೂಕ್ತ ಪರಿಹಾರವನ್ನು ನೀಡಬೇಕು ಕೂಡಲೇ ಪ್ರಾಧಿಕಾರದಿಂದ ಆನೆಗೊಂದಿ ಭಾಗದ 15 ಗ್ರಾಮಗಳನ್ನು ಕೈಬಿಡುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಲಲಿತ ರಾಣಿ ಶ್ರೀರಂಗದೇವರಾಯಲು, ಶ್ರೀ ಕೃಷ್ಣದೇವರಾಯಲು, ರತ್ನಶ್ರೀ ರಾಯಲು,

ಆನೆಗೊಂದಿ, ಮಲ್ಲಾಪುರ, ಸಾಣಾಪುರ ಮತ್ತು ಸಂಗಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿ ಪಕ್ಷಾತೀತ,ಜಾತ್ಯತೀತವಾಗಿ ಸಾವಿರಾರು ರೈತರು,ಕೃಷಿ ಕಾರ್ಮಿಕರು, ಬೀದಿಬದಿಯ ವ್ಯಾಪಾರಿಗಳು ಮತ್ತು ಮಹಿಳೆಯರಿದ್ದರು.

ಬಿಸಿಎಂ‌ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ಪುಂಡರ ಹಾಳಿ ತಡೆಯುವಂತೆ ತಾ.ಪಂ.ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ.

* ಕಳಪೆ ಆಹಾರ ಪೂರೈಕೆ ಆಸ್ವಚ್ಛತೆ ಸೇರಿದತೆ ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ!

ಕಿಷ್ಕಿಂಧವಾಣಿ ಸುದ್ದಿ
ಗಂಗಾವತಿ: ನಗರದ ಪ್ರಶಾಂತ ನಗರದಲ್ಲಿರುವ ಬಿಸಿಎಂ ಇಲಾಖೆಯ ವಿದ್ಯಾರ್ಥಿನಿಯರ ಕಾಲೇಜು ಹಾಸ್ಟೆಲ್ ನಲ್ಲಿ ಪ್ರತಿನಿತ್ಯವೂ ಪುಂಡರ ಹಾವಳಿ ಹೆಚ್ಚಾಗಿದ್ದು ವಿದ್ಯಾರ್ಥಿನಿಯರು ಜೀವ ಕೈಯಲ್ಲಿ ಹಿಡಿದು ವಿದ್ಯಾಭ್ಯಾಸ ಮಾಡಬೇಕಾಗಿದೆ. ಆದ್ದರಿಂದ ಸೂಕ್ತ ಭದ್ರತೆ ಒದಗಿಸಬೇಕು ಮತ್ತು ಹಾಸ್ಟೆಲ್ ನಲ್ಲಿ ಕಳಪೆ ಗುಣಮಟ್ಟದ ಆಹಾರವನ್ನು ಪೂರೈಕೆ ಮಾಡುತ್ತಿದ್ದು ತರಕಾರಿ ಸೇರಿದಂತೆ ಪೌಷ್ಟಿಕಾಂಶ ಇರುವ ಆಹಾರವನ್ನು ನೀಡುತ್ತಿಲ್ಲ ಎಂದು ಆರೋಪಿಸಿ ಬಿ ಸಿ ಎಂ ಇಲಾಖೆಯ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿನಿಯರು ಎಸ್ ಎಫ್ ಐ ನೇತೃತ್ವದಲ್ಲಿ ತಾಲೂಕ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಎಸ್ ಎಫ್ ಐ ಮುಖಂಡ ಬಾಲಾಜಿ ಮಾತನಾಡಿ, ವಿದ್ಯಾರ್ಥಿನಿಯರ ಕಾಲೇಜು ಹಾಸ್ಟೆಲ್ ಅತ್ಯಂತ ಚಿಕ್ಕ ಬಿಲ್ಡಿಂಗ್ ನಲ್ಲಿ ಇದ್ದು ವಿದ್ಯಾರ್ಥಿನಿಯರು ಗಾಳಿ, ಬೆಳಕು ಇಲ್ಲದಂತ ಸ್ಥಿತಿಯಲ್ಲಿ ಅ ನೈರ್ಮಲ್ಯಯುತ ಜೀವನ‌‌ ನಡೆಸಬೇಕಿದೆ. ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಊಟ ರಾತ್ರಿ ಊಟ ಕಳಪೆ ಮಟ್ಟದ್ದಾಗಿರುತ್ತದೆ. ಸೂಕ್ತ ತರಕಾರಿ ಇರುವುದಿಲ್ಲ, ಅಶುದ್ದ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತೆ, ಹಣ್ಣುಗಳನ್ನು ನೀಡುತ್ತಿಲ್ಲ, ದಿನಪತ್ರಿಕೆ ತರಿಸುತ್ತಿಲ್ಲ, ಹೀಗೆ ಹಲವು ಸಮಸ್ಯೆಗಳ ಮಧ್ಯೆ ನಿತ್ಯವೂ ಹಾಸ್ಟೆಲ್ ಗೆ ಪುಂಡರು ಅಕ್ರಮ ಪ್ರವೇಶ ಮಾಡುತ್ತಿದ್ದಾರೆ. ಮುಖಕ್ಕೆ ಬಟ್ಟೆಯನ್ನು ಕಟ್ಟಿಕೊಂಡು ಅಥವಾ ಅರಿಶಿನವನ್ನು ಹಚ್ಚಿಕೊಂಡು ವಿದ್ಯಾರ್ಥಿನಿಯರ ರೂಮುಗಳನ್ನು ಮತ್ತು ಮಳಿಗೆಯ ಮೇಲೆ ನಿತ್ಯವೂ ರಾತ್ರಿ ಸಂದರ್ಭದಲ್ಲಿ ಕೆಲ ಯುವಕರು ಆಗಮಿಸಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ. ಈ ಕುರಿತು ಮಹಿಳಾ ವಾರ್ಡನ್ ಹಾಗೂ ಸೆಕ್ಯೂರಿಟಿಯವರಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಕೂಡಲೇ ಪ್ರಶಾಂತ್ ನಗರದಲ್ಲಿರುವ ಹಾಸ್ಟೆಲ್ ನ್ನು ಬಸ್ ನಿಲ್ದಾಣದ ಹತ್ತಿರಕ್ಕೆ ಸ್ಥಳಾಂತರ ಮಾಡಬೇಕು. ಪೌಷ್ಟಿಕವುಳ್ಳ ಆಹಾರವನ್ನು ವಿತರಣೆ ಮಾಡಬೇಕು.ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು. ಹಣ್ಣು ಸೇರಿದಂತೆ ಸರ್ಕಾರದ ನಿಯಮದಂತೆ ಆಹಾರ ಪದಾರ್ಥಗಳನ್ನು ನಿರ್ಧರಿಸಬೇಕು. ರವಿವಾರ ಬೆಳಗ್ಗೆ ಇಡ್ಲಿ ಚಟ್ನಿಯನ್ನು ಉಪಾರಕ್ಕಾಗಿ ವಿತರಿಸಿದ್ದು ಇವು ವಾಸನೆಯಿಂದ ಕೂಡಿವೆ, ನಿತ್ಯವೂ ಇಂತಹ ಆಹಾರವನ್ನು ಸೇವನೆ ಮಾಡಲು ಆಗುತ್ತಿಲ್ಲ. ಆದ್ದರಿಂದ ಕೂಡಲೇ ವಾರ್ಡನ್ ಅವರನ್ನು ವರ್ಗಾವಣೆ ಮಾಡಿ ಸರಿಯಾಗಿ ಆಹಾರ ಪದಾರ್ಥಗಳನ್ನು ವಿತರಿಸುವ ವಾರ್ಡನ್ ಅವರನ್ನು ನೇಮಿಸುವಂತೆ ವಿದ್ಯಾರ್ಥಿಗಳು ಇಲಾಖೆ ಅಧಿಕಾರಿಗಳು ವಿದ್ಯಾರ್ಥಿನಿಯರ ಬೇಡಿಕೆಯನ್ನು ಈಡೇರಿಸುವಂತೆ ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿನಿಯರು ಮತ್ತು ಎಸ್ಎಫ್ಐ ನ ವಿವಿಧ ಪದಾಧಿಕಾರಿಗಳು ಉಪಸ್ಥಿತಮಾತನಾಡಿ,

ಹಗರಿಬೊಮ್ಮನಹಳ್ಳಿಯ ಎರಡು ಮೇಲ್ಸೇತುವೆ ನಿರ್ಮಾಣಕ್ಕೆ ಟೆಂಡರ್ ಆಹ್ವಾನ

*ಹಲವು ದಶಕಗಳ ಜನರ ಬೇಡಿಕೆಗೆ ಸಂಸದ ಈ ತುಕಾರಾಂ ಸ್ಪಂದನೆ.
*ಶೀಘ್ರವಾಗಿ ಕಾಮಗಾರಿ ಆರಂಭ ಸಾಧ್ಯತೆ

ಕಿಷ್ಕಿಂಧವಾಣಿ ಸುದ್ದಿ
ಹಗರಿಬೊಮ್ಮನಹಳ್ಳಿ:
ಹಗರಿಬೊಮ್ಮನಹಳ್ಳಿ ಪಟ್ಟಣದ ರಾಮನಗರ ಬಳಿಯ ರೈಲ್ವೆ ಗೇಟ್ ನಂಬರ್ 37 ರಲ್ಲಿ ಮೇಲ್ಸೇತುವೆ ಹಾಗೂ ಪಟ್ಟಣದ ನೇತಾಜಿ ರಸ್ತೆಯಲ್ಲಿನ ಎಸ್ ಬಿ ಐ ಬ್ಯಾಂಕ್ ಹತ್ತೀರದ ರೈಲ್ವೆ ಗೇಟ್ ನಂಬರ್ 38ರ ಬಳಿ ಕೆಳ ಸೇತುವೆ(ಅಂಡರ್ ಪಾಸ್) ನಿರ್ಮಾಣದ ಕಾಮಗಾರಿಗೆ ಭಾರತೀಯ ರೈಲ್ವೆ ಇಲಾಖೆ ಟೆಂಡರ್ ಕರೆದಿದ್ದು ಹಲವು ದಶಕಗಳ ಜನರ ಬೇಡಿಕೆಗೆ ಸಂಸದ ಈ ತುಕಾರಾಂ ಅವರ ಸ್ಪಂದಿಸುವ ಕಾರ್ಯ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಪಡೆದಿದೆ. ರೂ, 43.24 ಕೋಟಿ ವೆಚ್ಚದ ಮೇಲ್ಸೇತುವೆ, ಅಂಡರ್ ಪಾಸ್ ಕಾಮಗಾರಿಗಳ ಮಂಜೂರಾತಿ ಪಡೆದು ಟೆಂಡರ್ ಸಹ ಆಗಿದೆ.
ಕಳೆದ ನಾಲ್ಕೈದು ದಶಕಗಳಿಂದ ರಾಮನಗರ ಮತ್ತು ಈಶ್ವರಿ ವಿವಿ ಹತ್ತಿರ ಕೆಓಆರ್ ಕಾಲೋನಿ ಹತ್ತಿರ ರೈಲ್ವೆ ಬಂದಾಗೆಲ್ಲ ತಾಸು ಗಟ್ಟಲೆ ವಾಹನಗಳು,ಜನರು ನಿಲ್ಲಬೇಕಾಗಿತ್ತು. ಹಲವು ಅಪಘಾತಗಳು ಸಂಭವಿಸಿ ಹಲವು ಜನ ಹಾಗೂ ಜಾನುವಾರುಗಳು ಸಹ ಮೃತಪಟ್ಟ ಘಟನೆಗಳು ಜರುಗಿದ್ದವು. ಸಂಘ ಸಂಸ್ಥೆಗಳು ನೂರಾರು ಪ್ರತಿಭಟನೆ ನಡೆಸಿದರೂ ಮೇಲ್ಸೇತುವೆ ನಿರ್ಮಾಣ ಆಗಿರಲಿಲ್ಲ.
ಇದೀಗ ಜನರ ದಶಕಗಳ ಬೇಡಿಕೆಯನ್ನು ಸಂಸದ ಈ ತುಕಾರಾಂ ಈಡೇರಿಸಿದ್ದಾರೆ.
ಕೊಟ್ಟೂರು-ವ್ಯಾಸ್ ಕಾಲೋನಿ ಮಾರ್ಗದಲ್ಲಿ ಹಗರಿಬೊಮ್ಮನಹಳ್ಳಿ ಹೊರತು ಪಡಿಸಿ ಇತರೆ ನಿಲ್ದಾಣಗಳಲ್ಲಿ ಕ್ರಾಸಿಂಗ್ ಸೌಲಭ್ಯ ಇಲ್ಲದ ಕಾರಣಕ್ಕೆ ರೈಲು ಬಂದಗೊಮ್ಮೆ ಈ ಎರಡು ಗೇಟ್ ಗಳನ್ನು ಬಂದ್ ಮಾಡಿದಾಗ ಇಲ್ಲಿ ಉಂಟಾಗುವ ಟ್ರಾಫಿಕ್ ಜಾಮ್ ನಿಂದ ಜನತೆ ಮತ್ತು ಸವಾರರು, ಚಾಲಕರು ರೋಸಿಹೋಗಿದ್ದರು.
ಮೇಲ್ಸೇತುವೆ ಹಾಗೂ ಅಂಡರ್ ಪಾಸ್ ನಿರ್ಮಾಣ ಮಾಡಬೇಕು ಎನ್ನುವುದು ಹಗರಿಬೊಮ್ಮನಹಳ್ಳಿ ಪಟ್ಟಣ ಸೇರಿದಂತೆ ಈ ತಾಲೂಕಿನ ಜನತೆ ಹಾಗು ಹೊಸಪೇಟೆ-ಹರಿಹರ ರಾಜ್ಯ ಹೆದ್ದಾರಿ ಮೇಲೆ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರ ದಶಕಗಳ ಬೇಡಿಕೆ ಆಗಿತ್ತು.
ಹಲವು ದಶಕಗಳಿಂದಲೂ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನೆನಗುದಿಗೆ ಬಿದ್ದಿದ್ದ ಈ ಎರಡು ಕಾಮಗಾರಿಗಳು ಪ್ರಸ್ತುತ ತ್ವರಿತಗತಿಯಲ್ಲಿ ಮೇಲೆದ್ದು ನಿಲ್ಲಲು ಸಾಧ್ಯವಾಗಿದೆ.

ತರಕಾರಿ ಅಂಗಡಿಯೊಳಗಿದ್ದ ಹಾವನ್ನು ಸೆರೆ ಹಿಡಿದ ಉರಗ ಪ್ರೇಮಿ ರವಿ ಗೌಳಿ!

*ಆರು ಅಡಿ ಉದ್ದದ ಕೆರೆಹಾವು ಸಂರಕ್ಷಣೆ

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ನಗರದ ಆನೆಗುಂದಿ ರಸ್ತೆಯಲ್ಲಿರುವ ಸೀತಾರಾಮ ಕಲ್ಯಾಣ ಮಂಟಪದ ಪಕ್ಕದ ಸಣ್ಣ ತರಕಾರಿ ಅಂಗಡಿಯೊಳಗಿದ್ದ ಆರು ಅಡಿ ಉದ್ದದ ಬೃಹತ್ ಕೆರೆಹಾವೊಂದನ್ನು ಸೆರೆ ಹಿಡಿದು ಸಂರಕ್ಷಣೆ ಮಾಡಲಾಗಿದೆ.

ತರಕಾರಿ ಅಂಗಡಿಯಲ್ಲಿದ್ದ ಹಾವನ್ನು ಕಂಡು

ಸಾರ್ವಜನಿಕರು ಭಯಭೀತರಾಗಿದ್ದರು. ಶುಕ್ರವಾರ ಸಂಜೆ 6:30 ರ ಸುಮಾರಿನಲ್ಲಿ ಸೀತಾರಾಮ ಕಲ್ಯಾಣ ಮಂಟಪದ ಬಳಿಯಿರುವ ಉಮೇಶ ಅಯ್ಯಾ ಎಂಬುವವರು ತರಕಾರಿ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಸಂದರ್ಭದಲ್ಲಿ, ದಿಢೀರನೆ ಸುಮಾರು ಆರು ಅಡಿ ಉದ್ದದ ಕೆರೆಹಾವು ಕಾಣಿಸಿಕೊಂಡಿದೆ. ಹಾವನ್ನು ಕಂಡ ತಕ್ಷಣ ಅಂಗಡಿ ಮಾಲೀಕರು ಹಾಗೂ ಗ್ರಾಹಕರು ಗಾಬರಿಯಿಂದ ಹೊರಕ್ಕೆ ಓಡಿ ಬಂದಿದ್ದಾರೆ. ಜನನಿಬಿಡ ರಸ್ತೆಯಾಗಿರುವುದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ತಕ್ಷಣವೇ ಹಾವಿನ ಸಂರಕ್ಷಕ ಪರಿಸರಪ್ರೇಮಿ ರವಿ ಗೌಳಿ ನಗರದ (ಲಕ್ಷ್ಮಿ ಕ್ಯಾಂಪ್)ರವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪರಿಣಿತರು ಬಹಳ ಜಾಣ್ಮೆಯಿಂದ ಕಾರ್ಯಾಚರಣೆ ನಡೆಸಿ, ಯಾವುದೇ ಅನಾಹುತವಾಗದಂತೆ ತರಕಾರಿ ಬುಟ್ಟಿಗಳ ನಡುವೆ ಅವಿತು ಕುಳಿತಿದ್ದ ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾದರು.ಹಿಡಿದ ಹಾವನ್ನು ಸುರಕ್ಷಿತವಾಗಿ ಚೀಲದಲ್ಲಿ ತುಂಬಿಕೊಂಡು ಜನವಸತಿ ಇಲ್ಲದ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ರಕ್ಷಕರು ತಿಳಿಸಿದ್ದಾರೆ. ಕೆರೆಹಾವು ವಿಷಕಾರಿಯಲ್ಲದಿದ್ದರೂ, ಅದರ ಬೃಹತ್ ಗಾತ್ರವು ಜನರಲ್ಲಿ ಭೀತಿ ಹುಟ್ಟಿಸಿತ್ತು. ಹಾವು ಸೆರೆಯಾದ ನಂತರ ಅಂಗಡಿ ಮಾಲೀಕರು ಹಾಗೂ ಆ ಭಾಗದ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಬೇಸಿಗೆಯಲ್ಲಿ ಹಾವು ಕಾಣಿಸುವುದು ಸಹಜ,ಕೊಲ್ಲಬೇಡಿ: ಬೇಸಿಗೆಯಲ್ಲಿ ವಾತಾವರಣದಲ್ಲಿ ಉಷ್ಣ ತಾಪಮಾನ ಹೆಚ್ಚು ಇರುತ್ತದೆ ಆದ್ದರಿಂದ ಹಾವು,ಚೇಳು ಸೇರಿದಂತೆ ಇತರೆ ಕೆಲವು ವಿಷ ಜಂತುಗಳು ಹೊರಗೆ ಬರುವುದು ಸಹಜವಾಗಿದೆ. ಆದ್ದರಿಂದ ಹಾವು ಸೇರಿದಂತೆ ವಿಷಕಾರಿ ಜಂತುಗಳನ್ನು ಹೊಡೆದು ಸಾಯಿಸದಂತೆ ಉರಗ ಪ್ರೇಮಿ ರವಿ ಗೌಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ

ಕೊಲೆ ಪ್ರಕರಣ:20ವರ್ಷ ತಲೆ ಮರೆಸಿಕೊಂಡಿದ್ದ ಆರೋಪಿಗೆ ಜೀವವಾಧಿ ಶಿಕ್ಷೆ.

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ;ಕೊಲೆ ಮತ್ತು ಮರಣಾಂತಿಕ ಹಲ್ಲೆ ಪ್ರಕರಣದಲ್ಲಿ ಸುಮಾರು ೨೦ ವರ್ಷಗಳಿಂದಲೂ ತಲೆ ಕರೆಸಿಕೊಂಡಿದ್ದ ಕನಕಗಿರಿ ತಾಲೂಕಿನ ಬೈಲ್ ಲಖಂಪೂರದ ನಿವಾಸಿ ಪರಶುರಾಮ ಅಲಿಯಾಸ್ ರಾಮಣ್ಣ ತಾಯಿ ದುರುಗಮ್ಮ

(49) ಈತನಿಗೆ ಒಂದನೇಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಜ ಇವರು ತೀರ್ಪು ನೀಡಿ‌ ಜೀವಾವಧಿ ಶಿಕ್ಷೆ ಮತ್ತು 35 ಸಾವಿರ ರೂ.ಗಳ ದಂಡ ವಿಧಿಸಿದ್ದಾರೆ.

ಪ್ರಕರಣ:ದಿನಾಂಕ 15-01-2004 ರ ಮಧ್ಯಾನ್ಹ 3 ಗಂಟೆ ಸುಮಾರಿಗೆ ದುರುಗಪ್ಪ ನಾಯಕ ಹಾಗೂ ಆರೋಪಿತನ ಹೆಂಡತಿ ದುರುಗಪ್ಪ ನಾಯಕ ಮೇಲೆ ಬಲವಾಗಿ ಚಾಕುವಿನಿಂದ ಬಲ ಪಕ್ಕೆಗೆ ಇರಿದು ತೀವ್ರ ಗಾಯಗೊಳಿಸಿ ಕೊಲೆ ಮಾಡಿ ನಂತರ ಸ್ಥಳದಲ್ಲಿದ್ದ ಆರೋಪಿತನ ಹೆಂಡತಿ ಗೆ ಹೊಟ್ಟೆ ಭಾಗದಲ್ಲಿ ಮಾರಣಾಂತಿಕ ಹಲ್ಲೆ ಮಾಡಿದ‌ ಘಟನೆಯ ಕುರಿತ ಪ್ರಕರಣ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಡಿ ಸಲ್ಲಿಸಲಾಗಿತ್ತು.ಪ್ರಕರಣ ವಿಚಾರಣಾ ಹಂತದಲ್ಲಿ ಇದ್ದ ಸಂದರ್ಭದಲ್ಲಿ ಸದ್ರಿ ಆರೋಪಿ ತಲೆ ಮರೆಸಿಕೊಂಡು ಬೇರೆ ಹೆಸರುಗಳಿಂದ ತನ್ನ ಇರುವಿಕೆಯನ್ನು ಮರೆಮಾಚಿ ಬೆಂಗಳೂರಿನಲ್ಲಿ ವಾಸವಾಗಿದ್ದ ಸದ್ರಿ ಆರೋಪಿತನ ಬಗ್ಗೆ ಕನಕಗಿರಿ ಪೊಲೀಸರು ಶೋಧ ನಡೆಸಿ ಆರೋಪಿತನನ್ನು 2025 ರಲ್ಲಿ ಪತ್ತೆ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ನಾಗಲಕ್ಷ್ಮಿ ವಾದ ಮಂಡಿಸಿದ್ದಾರೆ. ಇದೀಗ ಆರೋಪಿ ಪರಶುರಾಮ ಅಲಿಯಾಸ್ ರಾಮಣ್ಣ ಇವರಿಗೆ‌ ಜೀವಾವಧಿ ಶಿಕ್ಷೆ ಘೋಷಣೆಯಾಗಿದೆ.

ಸಣ್ಣಪುಟ್ಟ ವ್ಯಾಪಾರಕ್ಕೆ ಟ್ರೇಡ್ ಲೈಸೆನ್ಸ್ಗೆ ಆಗ್ರಹಿಸಿ ಸಾಣಾಪೂರ ಗ್ರಾ.ಪಂ.ಎದುರು ಗ್ರಾಮಸ್ಥರ ಪ್ರತಿಭಟನೆ

https://youtu.be/iVl7XmdYS5U?si=oQW6r1y1DWEjUNvf

https://youtu.be/iVl7XmdYS5U?si=oQW6r1y1DWEjUNvf

 

*ಚಹಾದಂಗಡಿ, ಸೇರಿ ವ್ಯಾಪಾರ ಮತ್ತು ವಿದ್ಯುತ್ ಸಂಪರ್ಕಕ್ಕೆ ಪ್ರಾಧಿಕಾರದ ಎನ್‌ಓಸಿ ಬೇಡ

*ಸಾಣಾಪೂರ ಭಾಗದಲ್ಲಿಲ್ಲ ಪುರಾತತ್ವ ಇಲಾಖೆಯ ಸ್ಮಾರಕಗಳು ಸ್ಥಳೀಯರ ಪ್ರತಿಪಾದನೆ

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ತಾಲೂಕಿನ ಸಾಣಾಪೂರದಲ್ಲಿ ಸಣ್ಣಪುಟ್ಟ ವ್ಯಾಪಾರ ವಹಿವಾಟು ಮಾಡಲು ಗ್ರಾ.ಪಂ.ಟ್ರೇಡ್ ಲೈಸೆನ್ ಕೊಡದಂತೆ ಹಂಪಿ ಅಭಿವೃದ್ಧಿ ಪ್ರಾಧಿಕಾರ ನಿಯಮವನ್ನು ರೂಪಿಸಿದ್ದು ಇದರಿಂದ ಕೂಡಲೇ ಟ್ರೇಡ್ ಲೈಸೆನ್ಸ್ ಕೊಡಲು ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಸಾಣಾಪೂರ ಗ್ರಾಮಸ್ಥರು, ಮಹಿಳೆಯರು ಗ್ರಾ.ಪಂ.ಕಚೇರಿ ಎದುರು ಪ್ರತಿಭಟನೆ ನಡೆಸಿ ಪಿಡಿಓ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಸಾಣಾಪೂರ ಗ್ರಾಮದ ರಸ್ತೆಯ ಅಕ್ಕಪಕ್ಕದಲ್ಲಿರುವ ಮನೆಗಳಲ್ಲಿ ಚಹಾದಂಗಡಿ, ತಂಪುಪಾನೀಯ, ಕಿರಾಣಿ, ಎಳೇನೀರು,ಕಾರಕುಟ್ಟುವ ಮಿಷನ್ ಸೇರಿ ಸಣ್ಣಪುಟ್ಟ ವ್ಯಾಪಾರ ಮಾಡಲು ಗ್ರಾ.ಪಂ.ಹಾಗೂ ಜೆಸ್ಕಾಂ ಅಧಿಕಾರಿಗಳು ನೋಟೀಸ್ ಕೊಟ್ಟು ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಿದ್ದಾರೆ. ಲಕ್ಷಾಂತ ರೂ.ಗಳ ದಂಡ ವಿಧಿಸಿ ನೋಟೀಸ್ ನೀಡುತ್ತಿದ್ದು ಮಾನಸೀಕ ಹಿಂಸೆಯಾಗಿದೆ. ಮನೆಯ ಮುಂದೆ ಶೌಚಾಲಯ ನಿರ್ಮಿಸಿಕೊಳ್ಳಲು ಪ್ರಾಧಿಕಾರದ ಎನ್‌ಓಸಿ ಕಡ್ಡಾಯ ಎಂದು ಗ್ರಾ.ಪಂ. ಪಿಡಿಓ ಅವರು ನಿರ್ಮಾಣ ಕಾರ್ಯ ನಿಲ್ಲಿಸುತ್ತಿದ್ದಾರೆ. ಇದರಿಂದ ಬಹಳ ತೊಂದರೆಯಾಗಿದ್ದು ಕೂಡಲೇ ಗ್ರಾಮದ ಪ್ರತಿ ಕಾರ್ಯಕ್ಕೂ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಎನ್‌ಓಸಿ ಬೇಕೆನ್ನುವ ಗ್ರಾ.ಪಂ ಜೆಸ್ಕಾಂ, ಅರಣ್ಯ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳ ಸಾಣಾಪೂರ ಭಾಗದ ಜನರನ್ನು ಅವಮಾನಿಸುತ್ತಿದ್ದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಟ್ರೇಡ್ ಲೈಸೆನ್ಸ್ ಇಲ್ಲದೇ ಇನ್ಸೂರೆನ್ಸ್ ಕ್ಲೆöÊಮ್ ಕೂಡ ಆಗುತ್ತಿಲ್ಲ. ಇಲ್ಲಿಯ ಭೂಮಿ, ಮನೆ ಖರೀದಿಗೂ ಕ್ವಾರಿ ಬಿದ್ದಿದ್ದು ಸಾಣಾಪೂರ ಭಾಗದ ಅಭಿವೃದ್ಧಿ ಕುಂಠಿತವಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡು ಸಾಣಾಪೂರ ಜನಸಾಮಾನ್ಯರು ಸ್ವಾವಲಂಭಿಯಾಗಿ ಬದುಕಲು ಅವಕಾಶ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಗ್ರಾ.ಪಂ. ಮಾಜಿ ಸದಸ್ಯರಾದ ಕೋಡಿ ನಾಗೇಶ, ಶೇರಖಾನ್ ಸೇರಿ ಗ್ರಾಮದ ಮಹಿಳೆಯರು, ರೈತರು ಕೂಲಿಕಾರರು ಪಾಲ್ಗೊಂಡಿದ್ದರು.

**

ಸಾಣಾಪೂರ ಗ್ರಾಮವನ್ನು ಅವ್ಶೆಜ್ಞಾನಿಕವಾಗಿ ಹಂಪಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರ್ಪಡೆ ಮಾಡಿದ್ದು ಇದರಿಂದ ಸಣ್ಣ ಪುಟ್ಟ ವ್ಯಾಪಾರ ವಹಿವಾಟು ಮಾಡಲು ಗ್ರಾ.ಪಂ.ಯಿಂದ ಟ್ರೇಡ್ ಲೈಸೆನ್ಸ್ ಪಡೆಯಲು ಪ್ರಾಧಿಕಾರದ ಎನ್‌ಓಸಿ ಪಡೆಯುವುದು ಕಡ್ಡಾಯವಾಗಿದೆ. ಗ್ರಾಮದಲ್ಲಿ ಶೇ.70ಕ್ಕಿಂತಲೂ ಹೆಚ್ಚು ಕ್ರಮಬದ್ದವಲ್ಲದ ಆಸ್ತಿ(11ಬಿ) ಇದ್ದು ಇದಕ್ಕೆ ಪ್ರಾಧಿಕಾರ ಎನ್‌ಓಸಿ ಕೊಡುವುಲ್ಲ. ಇದರಿಂದ ಗ್ರಾಮದ ಸಣ್ಣ ಪುಟ್ಟ ವ್ಯಾಪಾರಸ್ಥರು ಇನ್ಸೂರೆನ್ಸ್ ಕ್ಲೈಮ್ ಮಾಡಿಕೊಳ್ಳಲು ಆಗುತ್ತಿಲ್ಲ. ಚಹಾದಂಗಡಿ, ಪಂಚರ ಅಂಗಡಿ ಸೇರಿ ಇತರೆ ವ್ಯಾಪಾರ ಮಾಡಲು ಜೆಸ್ಕಾಂ ನವರು ಪ್ರಾಧಿಕಾರದ ಎನ್‌ಓಸಿ ಕೇಳುತ್ತಿದ್ದು ಕಳ್ಳತನದಲ್ಲಿ ಅಂಗಡಿ ಮುಂಗಟ್ಟುಗಳನ್ನು ನಡೆಸಿಕೊಳ್ಳಬೇಕಿದೆ. ಇದರಿಂದ ಜೆಸ್ಕಾಂನವರು ದಾಳಿ ಮಾಡಿ ಲಕ್ಷಾಂತರ ರೂ.ಗಳ ದಂಡ ಹಾಕುತ್ತಿದ್ದಾರೆ.ಜಿಲ್ಲಾಡಳಿತ ಕೂಡಲೇ ಸಮಸ್ಯೆ ಪರಿಹಾರ ಮಾಡಬೇಕು

-ಕೋಡಿ ನಾಗೇಶ ಗ್ರಾ.ಪಂ. ಮಾಜಿ ಸದಸ್ಯ.

ತುಂಗಭದ್ರಾ ಮಂಡಳಿ ಆಸ್ತಿ ಅತಿಕ್ರಮಣ: ಕಾನೂನು ಕ್ರಮದ ಎಚ್ಚರಿಕೆ: ಕಾರ್ಯದರ್ಶಿ ಓಆರ್.ವಿ. ರೆಡ್ಡ

*ಮೇ ಅಂತ್ಯಕ್ಕೆ 33 ಕ್ರಸ್ಟಗೇಟುಗಳ ಜೋಡಣೆ ಪೂರ್ಣ

ಕಿಷ್ಕಿಂಧವಾಣಿ ಸುದ್ದಿ

ಹೊಸಪೇಟೆ: ತುಂಗಭದ್ರಾ ಜಲಾಶಯದ ವ್ಯಾಪ್ತಿಗೆ ಒಳಪಡುವ ನೂರಾರು ಎಕರೆ ಪ್ರದೇಶವು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳ ಜಂಟಿ ಆಸ್ತಿಯಾಗಿದ್ದು, ಇಲ್ಲಿ ನಡೆಯುತ್ತಿರುವ ಯಾವುದೇ ಅನಧಿಕೃತ ಅತಿಕ್ರಮಣಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತುಂಗಭದ್ರಾ ಬೋರ್ಡ್ ಕಾರ್ಯದರ್ಶಿ ಓ.ಆರ್. ವಿ. ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ನಗರದ ತುಂಗಭದ್ರಾ ಜಲಾಶಯ ಆಡಳಿತ ಮಂಡಳಿಯ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

‘ಭಾರತೀಯ ಅಧಿಕೃತ ರಹಸ್ಯಗಳ ಕಾಯ್ದೆ 1923 ರ ಅನ್ವಯ ಜಲಾಶಯದ ಪ್ರದೇಶ, ಪವರ್ ಹೌಸ್ ಮತ್ತು ಸುತ್ತಮುತ್ತಲಿನ ಸ್ಥಳಗಳನ್ನು ‘ನಿಷೇಧಿತ ಪ್ರದೇಶ’ ಎಂದು ಘೋಷಿಸಲಾಗಿದೆ. ಹೊಸಪೇಟೆ ವ್ಯಾಪ್ತಿಯ 207.41 ಎಕರೆ ಹಾಗೂ ಅಮರಾವತಿ ವ್ಯಾಪ್ತಿಯ 488.74 ಎಕರೆ ಸೇರಿದಂತೆ ಒಟ್ಟು 696.15 ಎಕರೆ ಪ್ರದೇಶವು ಮಂಡಳಿಯ ಸ್ವಾಧೀನದಲ್ಲಿದೆ. ಇದರಲ್ಲಿ ಗಾರ್ಡನ್, ಹಿನ್ನೀರು, ನಿಶಾನಿ ಕ್ಯಾಂಪ್, ಅಮರಾವತಿ ಕಾಲೋನಿ ಹಾಗೂ ಹೆಚ್.ಇ.ಎಸ್ ಕಾಲೋನಿ ಪ್ರದೇಶಗಳು ಸಹ ಸೇರಿವೆ. ಪ್ರಸ್ತುತ ಮಂಡಳಿಯ ಜಾಗಕ್ಕೆ ಸಂಬಂಧಿಸಿದಂತೆ ವಿವಿಧ ಹಂತಗಳಲ್ಲಿ ಒಟ್ಟು 23 ಪ್ರಕರಣಗಳು ನ್ಯಾಯಾಲಯದಲ್ಲಿವೆ. ಇದರಲ್ಲಿ ಧಾರವಾಡ ಹೈಕೋರ್ಟ್ ಪೀಠ ಮತ್ತು ಹೊಸಪೇಟೆಯ ಸಿವಿಲ್ ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಉಲ್ಲಂಘನೆಯ ಪ್ರಕರಣಗಳೂ ಸಹ ಸೇರಿವೆ. ಜಲಾಶಯದ ಸುರಕ್ಷತೆ ಮತ್ತು ಮಂಡಳಿಯ ಆಸ್ತಿಯನ್ನು ರಕ್ಷಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಅದರಂತೆ ಮಂಡಳಿಯ ಜಾಗವನ್ನು ಅತಿಕ್ರಮಣ ಕುರಿತ ವಿವಿಧ ಹಂತಗಳಲ್ಲಿ ಒಟ್ಟು 23 ಪ್ರಕರಣ ದಾಖಲಾಗಿವೆ. ಈ ಪೈಕಿ ಒಂದು ಪ್ರಕರಣ ಇತ್ಯರ್ಥವಾಗಿದ್ದು, ಇದರಲ್ಲಿ ನಿವೃತ್ತ ನ್ಯಾಯಧೀಶೆ ಜಯಶ್ರೀ ಭಾಗಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆಯ ಜೆ ಎಂ ಎಫ್ ಸಿ ನ್ಯಾಯಾಲಯ ಮಾರ್ಚ್ 28ರಂದು ಮಂಡಳಿಯ ಪರ ಆದೇಶ ನೀಡಿ, ತುಂಗಭದ್ರಾ ಯೋಜನಾ ಪ್ರದೇಶದ ಅತಿಕ್ರಮಣಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ, ಮಂಡಳಿಯು ತನ್ನ ವಶಕ್ಕೆ ಪಡೆಯಲು ಹಸಿರು ನಿಶಾನೆ ತೋರಿದೆ. ಆದ್ದರಿಂದ ಮಂಡಳಿಯ ಅನುಮತಿ ಇಲ್ಲದೆ ಈ ಜಾಗಗಳಲ್ಲಿ ಕಟ್ಟಡ ನಿರ್ಮಾಣ ಅಥವಾ ಇನ್ನಿತರೆ ಯಾವುದೇ ಚಟುವಟಿಕೆ ನಡೆಸುವುದು ಶಿಕ್ಷಾರ್ಹ ಅಪರಾಧ. ಈ ನಿಟ್ಟಿನಲ್ಲಿ ಸಾರ್ವಜನಿಕರು ಇಂತಹ ಅಕ್ರಮ ಅತಿಕ್ರಮಣದಾರರೊಂದಿಗೆ ಯಾವುದೇ ವ್ಯವಹಾರ ನಡೆಸಬಾರದು ಎಂದು ಅವರು ಮನವಿ ಮಾಡಿದರು.

ಮೇ ಅಂತ್ಯಕ್ಕೆ ಎಲ್ಲಾ ಕ್ರಸ್ಟ್ ಗೇಟ್ ಅಳವಡಿಕೆ ಪೂರ್ಣ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಭರದಿಂದ ಸಾಗಿದ್ದು, ಈಗಾಗಲೇ 22 ಗೇಟ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ಇನ್ನುಳಿದವು ಇದೇ ತಿಂಗಳಲ್ಲಿ ಮುಕ್ತಾಯವಾಗುವ ಭರವಸೆ ಕೂಡ ಇದೆ. ಅದರ ಜೊತೆಗೆ ಚೈನ್ ಅಳವಡಿಕೆ ಕಾರ್ಯವು ಮೇ ತಿಂಗಳ ಅಂತ್ಯಕ್ಕೆ ಪೂರ್ಣಗೊಂಡು ಜೂನ್ ನಲ್ಲಿ ಬರುವ ಮುಂಗಾರು ಮಳೆ ವೇಳೆಗೆ ಡ್ಯಾಮ್ ಸಂಪೂರ್ಣ ಸಿದ್ಧವಾಗಿರಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಇಂಜಿನಿಯರ್ ಎನ್.ಚಂದ್ರಶೇಖರ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್. ನಾರಾಯಣ ನಾಯ್ಕ್ ಇತರರು ಇದ್ದರು

ರೈತರ ಒತ್ತಾಯದ ಫಲ: ಸಮರೋಪಾದಿಯಲ್ಲಿ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಜೋಡಣಾ ಕಾಮಗಾರಿ.

*ಪ್ರಸ್ತುತ 21 ಕ್ರಸ್‌ಗೇಟ್‌ಗಳ ಜೋಡಣೆ ಪೂರ್ಣ

ಕಿಷ್ಕಿಂಧವಾಣಿ ವಿಶೇಷ

ಕೆ.ನಿಂಗಜ್ಜ.

ಗಂಗಾವತಿ: ಕೊಪ್ಪಳ ರಾಯಚೂರು ಬಳ್ಳಾರಿ ಮತ್ತು ತೆಲಂಗಾಣ ಆಂಧ್ರಪ್ರದೇಶದ ಜೀವನದಿಯಾಗಿರುವ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಗಳ ಮರು ಜೋಡಣಾ ಕಾಮಗಾರಿ ಬರದಿಂದ ಸಾಗಿದ್ದು ಸದ್ಯ 21 ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ಭರದಿಂದ ಸಾಗಿದೆ. ಒಟ್ಟು 32 ಕ್ರಸ್ಟ್‌ ಗೇಟುಗಳನ್ನು ಬದಲಾಯಿಸುವ ಕಾಮಗಾರಿ ಇದಾಗಿದ್ದು ಕಾಮಗಾರಿ ಗುತ್ತಿಗೆ ಪಡೆದ ಗುತ್ತಿಗೆದಾರನಿಗೆ ಜೂನ್ ಒಳಗೆ ಅಂದರೆ ಮಳೆಗಾಲ ಆರಂಭಕ್ಕೂ ಮುಂಚೆ ಕ್ರಸ್ಟ್‌ ಗೇಟುಗಳನ್ನು ಜೋಡಣೆ ಮಾಡುವ ಷರತ್ತನ್ನು ಟೆಂಡರ್ ನಲ್ಲಿ ಹಾಕಲಾಗಿದೆ.

ಕಲಕೆದ 2024ರ ಅ.10ರಂದು ಡ್ಯಾಂನ 19ನೇ ಕ್ರಸ್ಟ್ ಗೇಟ್ ಚೈನ್ ಹರಿದುಬಿದ್ದ ಪರಿಣಾಮ ಕ್ರಸ್ಟ್‌ ಗೇಟು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿತ್ತು. ದುರಂತ ಜರುಗಿ ಒಂದು ವರ್ಷದ ನಂತರ (2025ರ ಡಿಸೆಂಬರ್‌ನಲ್ಲಿ) ಗೇಟ್‌ಗಳ ಬದಲಾವಣೆಗೆ ಚಾಲನೆ ನೀಡಲಾಗಿತ್ತು. ಜಲಾಶಯದ ಒಟ್ಟು 33 ಕ್ರಸ್ಟ್‌ಗೇಟ್‌ಗಳ ಪೈಕಿ ಈವರೆಗೆ 21 ಗೇಟ್ ಗಳನ್ನು ಅಳವಡಿಸಲಾಗಿದೆ. ಉಳಿದ ಏಳು ಗೇಟ್ ಗಳ ಅಳವಡಿಕೆ ಕಾರ್ಯ ಚುರುಕಿನಿಂದ ನಡೆಯುತ್ತಿದ್ದು, ಮುಂದಿನ ತಿಂಗಳ ಕೊನೆಯ ವಾರದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ತದನಂತರ ಗೇಟ್‌ಗಳಿಗೆ ಪೇಂಟಿಂಗ್ ನಡೆಯಲಿದ್ದು, ಟೆಂಡರ್ ಷರತ್ತಿನಂತೆ ನಿಗದಿತ ಜಲಾಶಯಕ್ಕೆ ಹೊಸ ನೀರು ಬರುವ ಮುನ್ನವೇ ಕಾರ್ಯ ಮುಗಿಸಬೇಕು.

ಗುಜರಾತ್ ಮೂಲದ ಗುತ್ತಿಗೆದಾರ ಕಾಮಗಾರಿ ಗುತ್ತಿಗೆ ಪಡೆದಿದ್ದು‌ 60 ಕಾರ್ಮಿಕರು ತೊಡಗಿಸಿ ಕೊಂಡಿದ್ದಾರೆ. ಪ್ರತಿ ತಂಡದಲ್ಲಿ ಐದ-ರಿಂದ ಆರು ಜನರಂತೆ ಒಟ್ಟು ಎಂಟತ್ತು ತಂಡಗಳು ಅಳವಡಿಕೆ ಕಾರ್ಯದಲ್ಲಿ ತೊಡಗಿವೆ. 5 2 01, 02, 03, 04, 05, 06, 11. 17. 18, 19, 20, 24, 25, 26, 27, 28, 29, 30, 31, 32 ಮತ್ತು 33ನೇ ಸಂಖ್ಯೆಯ ಕ್ರಸ್ಟ್ ಗೇಟ್ ಗಳ ಅಳವಡಿಕೆ ಪೂರ್ಣಗೊಂಡಿದೆ. ಇವುಗಳಲ್ಲಿ 04, 11, 17, 18, 19, 20, 24 ಹಾಗೂ 31 ಸಂಖ್ಯೆಯ ಗೇಟ್‌ಗಳ ಪ್ರಾಯೋಗಿಕ ಪರೀಕ್ಷೆ

ಯಶಸ್ವಿಯಾಗಿದೆ. ಪ್ರಸ್ತುತ 06, 07, 08, 09, 12, 21 ಮತ್ತು 22ನೇ ಸಂಖ್ಯೆಯ ಕ್ರಸ್ಟ್‌ಗೇಟ್‌ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಶೇ.50 ರಷ್ಟು ಹೊಸ ಕ್ರಸ್ಟ್‌ ಗೇಟುಗಳ ತಯಾರಿಕೆ ಪೈಕಿ ಶೇ.

ಈಗಾಗಲೇ 30 ಹೊಸ ಗೇಟ್‌ಗಳ ತಯಾರಿಕೆ ಮುಗಿದಿದ್ದು ಇವುಗಳ ಪರೀಕ್ಷಾರ್ಥ ಕಾರ್ಯ ಮಾತ್ರ ಬಾಕಿ ಇದೆ. ಜಲಾಶಯದಲ್ಲಿದ್ದ 33 ಹಳೆಯ ಗೇಟ್‌ಗಳ ಪೈಕಿ 29 ಗೇಟ್‌ಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ.

***

ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ನಿಧಾನಗತಿಯಲ್ಲಿ ಸಾಗಿದ್ದರಿಂದ ಈಗಾಗಲೇ ರೈತರಿಗೆ ಒಂದು ಬೆಳೆ ನಷ್ಟವಾಗಿದೆ. ಏಪ್ರಿಲ್ ತಿಂಗಳೊಳಗೆ ಎಲ್ಲಾ 33 ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣಗೊಂಡರೆ ಮುಂದಿನ ಬೆಳೆಗೆ ರೈತರಿಗೆ ಅನುಕೂಲವಾಗಲಿದೆ. ಇಲ್ಲದಿದ್ದರೆ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಹೋರಾಟಕ್ಕೆ ಅಣಿಯಾಗಬೇಕಾಗುತ್ತದೆ.

-ಟಿ.ವಿ.ಸತ್ಯನಾರಾಯಣ ಹಾಗೂ ಯಡ್ಲಪಲ್ಲಿ ಆನಂದರಾವ್ ರೈತ ಮುಖಡರು.

 

***

“ಗೇಟ್‌ಗಳ ತಯಾರಿಕೆ ಹಾಗೂ ಆಳವಡಿಕೆ ಕಾರ್ಯ ವೇಗವಾಗಿ ಸಾಗಿದೆ. ಈವರೆಗೆ 21 ಗೇಟ್‌ಗಳ ಅಳವಡಿಕೆ ಪೂರ್ಣಗೊಂಡಿದ್ದು, ಉಳಿದ ಗೇಟ್‌ಗಳ ಕೆಲಸ ಏಪ್ರಿಲ್ ವೇಳೆಗೆ ಮುಕ್ತಾಯವಾಗಲಿದೆ.

ಇನ್ನುಳಿದ ಮೂರು ಹೊಸ ಗೇಟ್ ಗಳ ತಯಾರಿಕೆ ಹಾಗೂ ನಾಲ್ಕು ಹಳೆಯ ಗೇಟ್ ತೆರವು ಕಾರ್ಯ ಒಂದು ವಾರದೊಳಗೆ ಮುಕ್ತಾಯವಾಗಲಿದೆ.

-ಒ.ಆರ್.ಕೆ. ರೆಡ್ಡಿ ಕಾರ್ಯದರ್ಶಿ ತುಂಗಭದ್ರಾ ಬೋರ್ಡ್.

ಭರತ್‌ ಕಂದಕೂರಗೆ ಪ್ರಶಸ್ತಿ 

ಕಿಷ್ಕಿಂಧವಾಣಿ ಸುದ್ದಿ

ಕೊಪ್ಪಳ: ಬೆಂಗಳೂರು ಫೋಟೋಗ್ರಾಫಿಕ್‌ ಕ್ಲಬ್‌ ಆಯೋಜಿಸಿದ್ದ ‘ಕರ್ನಾಟಕದ ಜಾತ್ರೆ ಮತ್ತು ಉತ್ಸವಗಳು’ ಕುರಿತ ಛಾಯಾಚಿತ್ರ ಸ್ಪರ್ಧೆಯಲ್ಲಿ ಕೊಪ್ಪಳದ ಛಾಯಾಗ್ರಹಕ ಭರತ್ ಕಂದಕೂರ ಅವರಿಗೆ ಬಹುಮಾನ ಲಭಿಸಿದೆ.

ದೊಡ್ಡಬಳ್ಳಾಪುರದ ಸುಧೀರ್‌ ಭಜನೆ ಹಟ್ಟಿ ಅವರ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಚಿತ್ರ (ಪ್ರಥಮ ಸ್ಥಾನ), ದೊಡ್ಡಬಳ್ಳಾಪುರದ ಬಿ.ಎನ್‌.ಉಮಾಶಂಕರ್‌ ಅವರ ಗೋಕಾಕದ ಭಂಡಾರ ಜಾತ್ರೆ ಚಿತ್ರ (ದ್ವಿತೀಯ ಸ್ಥಾನ), ಕೊಪ್ಪಳದ ಛಾಯಾಗ್ರಾಹಕ ಭರತ್ ಕಂದಕೂರ ಅವರ ಅಂಜನಾದ್ರಿ ಬೆಟ್ಟದ ಹನುಮ ಮಾಲೆ ಚಿತ್ರ (ತೃತೀಯ ಸ್ಥಾನ) ಪಡೆದಿವೆ.

ಮುಂದಿನ ವರ್ಷದ ಛಾಯಾಚಿತ್ರ ಸ್ಪರ್ಧೆಗೆ ‘ಕನಾಟಕದ ಹಬ್ಬ ಮತ್ತು ಆಚರಣೆಗಳು’ ಎನ್ನುವ ವಿಷಯ ಆಯ್ಕೆ ಮಾಡಲಾಗಿದ್ದು, ಛಾಯಾಗ್ರಾಹಕರು ಭಾಗಿಯಾಗಬಹುದು ಎಂದು ಕ್ಲಬ್‌ ಅಧ್ಯಕ್ಷ ಟಿ.ಕೆಂಪಣ್ಣ ತಿಳಿಸಿದ್ದಾರೆ. ಪ್ರಶಸ್ತಿಯು ನಗದು ಹಾಗೂ ಪುರಸ್ಕಾರ ಒಳಗೊಂಡಿದ್ದು ಏಪ್ರಿಲ್‌ ಎರಡನೇ ವಾರದಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.