Breaking News
ಬಂಜಾರ ರಾಷ್ಟ್ರೀಯ ಹೋಳಿ ಉತ್ಸವ-2026:ಯಶಸ್ವಿಯಾಗಿ ನಡೆದ ಬಂಜಾರ ಕವಿಗೋಷ್ಠಿ.

ಕಿಷ್ಕಿಂಧವಾಣಿ ಸುದ್ದಿ

ಕೊಪ್ಪಳ: ಹೋಳಿ ಹುಣ್ಣಿಮೆಯಂದು ನಡೆಯುವ ಹೋಳಿ ಹಬ್ಬವು ಬಂಜಾರ ಸಮುದಾಯದ ಅತ್ಯಂತ ಪ್ರಮುಖ ಆಚರಣೆಯಾಗಿದೆ. ಎಲ್ಲಾ ತಾಂಡಾಗಳಲ್ಲೂ ಮಹಿಳೆ ಹಾಗೂ ಪುರುಷರು ವಿಶಿಷ್ಟ ಶೈಲಿಯ ಉಡುಪುಗಳನ್ನು ಧರಿಸಿ ಕೋಲುಗಳನ್ನು ಹಿಡಿದು ಬಂಜಾರ ಜಾನಪದ ಹಾಡುಗಳನ್ನು ಹಾಡುತ್ತಾ ವೃತ್ತಾಕಾರದಲ್ಲಿ ನಗಾರಿ ಹಾಗೂ ತಮಟೆಯ ತಾಳಕ್ಕೆ ಕುಣಿದು ಉತ್ಸಾಹದಿಂದ ಆಚರಿಸುತ್ತಾರೆ.

ಅದೇರೀತಿ ಕೊಪ್ಪಳದ ಐತಿಹಾಸಿಕ ಬಹಾದ್ದೂರ ಬಂಡೆಯಲ್ಲಿ ಇರುವ ಹಾತಿರಾಮ ಬಾವಾಜಿ ರವರ ಕಟ್ಟೆ ಆವರಣದಲ್ಲಿ ಮಾ-3 ರಂದು ಮಹಿಳೆಯರ ಘೂಮರ್ ನೃತ್ಯ, ಡೊಡೋ ನಂಗಾರ ನೃತ್ಯ, ಪುರುಷರ ಲೆಹಂಗಿ ನೃತ್ಯ, ವಾಜಾ-ಭಜನೆ ಅತ್ಯಂತ ಅದ್ಧೂರಿಯಾಗಿ ನಡೆದವು. ಇವರು ತಮ್ಮ ಹಾಡುಗಳಲ್ಲಿ ಹೋಳಿಯ ಹಿನ್ನೆಲೆ, ಸಂಪ್ರದಾಯ, ಪರಂಪರೆ ಕುರಿತು ಹೇಳುತ್ತಾ ಇಡೀ ರಾತ್ರಿ ಸಂಭ್ರಮಿಸಿ ಬೆಳಗಿನ ಜಾವ ಹೋಳಿ ದಹನ ಮಾಡಿ ಸಂಪನ್ನಗೊಳಿಸಿದರು. ಬಂಜಾರ ಸಮುದಾಯದ ವಿಶಿಷ್ಠ ಭಾಷೆ, ಕಲೆ, ಸಂಸ್ಕೃತಿ, ಪರಂಪರೆ ಹಬ್ಬ-ಹರಿದಿನಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೋಳಿ ಹುಣ್ಣಿಮೆಯಂದು ರಾಷ್ಟ್ರೀಯ ಹೋಳಿ ಉತ್ಸವ-2026 ರ ನಿಮಿತ್ಯ ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತು,

ರಾಜ್ಯ ಘಟಕದ ವತಿಯಿಂದ ಉತ್ಸವದ ವೇದಿಕೆಯಲ್ಲಿ ಬಂಜಾರರ ಸಾಹಿತ್ಯದ ರಾಜ್ಯ ಮಟ್ಟದ ಕವಿಗೋಷ್ಠಿ ಏರ್ಪಡಿಸಲಾಗಿತ್ತು,

ಈ ಕವಿಗೋಷ್ಠಿಯಲ್ಲಿ ರಾಜ್ಯದ ಮೂಲೆಮೂಲೆಯಿಂದ ಐವತ್ತಕ್ಕೂ ಹೆಚ್ಚು ಕವಿಗಳು ಭಾಗವಹಿಸಿ ತಮ್ಮ ಕವನ ವಾಚನ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಗಂಗಾವತಿಯ ಎಸ್.ಆರ್. ಸರೋಜಮ್ಮ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಇತಿಹಾಸ ಸಂಶೋಧಕ ಡಾ. ರವಿ ಚವ್ಹಾಣ ಮಾತನಾಡಿ, ಬಂಜಾರರ ಮೂಲ ಇತಿಹಾಸ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಕವನಗಳ ಮೂಲಕ ಪ್ರಚುರಪಡಿಸಿದ್ದು ಬಹಳ ಹೆಮ್ಮೆಯ ವಿಷಯ, ಸಮುದಾಯದ ಸಂಸ್ಕೃತಿ ಹಾಗೂ ಪರಂಪರೆಯನ್ನು ಸಾಹಿತ್ಯದ ಮೂಲಕ ಮುಂದಿನ ಪೀಳಿಗೆಗೆ ಪರಿಚಯಿಸುವುದಕ್ಕಾಗಿ ಕವಿಗೋಷ್ಠಿ ಸಹಕಾರಿಯಾಗಿದೆ, ಇಂದಿನ ಯುವ ಪೀಳಿಗೆ ಮೊಬೈಲ್ ಹಾಗೂ ಡಿ.ಜೆ. ಹುಚ್ಚಿನಿಂದ ಹೊರಬಂದು ಉನ್ನತ ವಿದ್ಯಾಭ್ಯಾಸ ಪಡೆದು ಸಾಹಿತ್ಯದ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಲಿಂಗಸುಗೂರಿನ ವಿಜಯ ಮಹಾಂತೇಶ್ವರ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಹಾಗೂ ಕೊಪ್ಪಳದ ಶ್ರೀ ಗುರು ಗೋಸಾವಿ ಬಾವಾನವರು ಆಶೀರ್ವಚನ ನೀಡಿದರು. ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀಕಾಂತ ಜಾಧವ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಛತ್ರಪ್ಪ ತಂಬೂರಿರವರು ಆಶಯ ನುಡಿಗಳನ್ನು ಹೇಳಿದರು. ಯಾದಗಿರಿಯ ಸುವರ್ಣಬಾಯಿ ರಾಠೋಡ ಹಾಗೂ ಡಾ. ಮಿಟ್ಯಾ ನಾಯ್ಕ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಕರ್ನಾಟಕ ಬಂಜಾರ ಸಾಹಿತ್ಯ ಪರಿಷತ್ತಿನ ಕೊಪ್ಪಳ ಜಿಲ್ಲಾಧ್ಯಕ್ಷ ಪ್ರಕಾಶ ರಾಠೋಡ ತರಲಕಟ್ಟಿ ಹಾಗೂ ಶಿವಾನಂದ ನಾಯ್ಕ ಮುಖ್ಯ ಅಭಿಯಂತರರು ರವರು ಸಾಮಾಜಿಕ ಹಾಗೂ ಶೈಕ್ಷಣಿಕ ಜಾಗೃತಿ ಕುರಿತು ಮಾತನಾಡಿ ವಂದಿಸಿದರು.

ಕಾರ್ಯಕ್ರಮದಲ್ಲಿ ಬಂಜಾರ ಕವಿಗಳಾದ ಡಾ. ಎಲ್.ಪಿ. ಕಠಾರಿ ನಾಯ್ಕ, ಕುಬೇರ ನಾಯ್ಕ, ಜ್ಯೋತಿ ಕೃಷ್ಣನಾಯ್ಕ ಬಾಗಲಕೋಟೆ, ಮೋತಿಲಾಲ್ ರಾಠೋಡ ಹುಬ್ಬಳ್ಳಿ, ಪ್ರವೀಣಕಮಾರ ಹರಪನಹಳ್ಳಿ, ಮೂರ್ತಿ ಎಲ್., ಸುರೇಶ ಕಲಾಪ್ರಿಯ, ಲಕ್ಷ್ಮಣ ನಾಯ್ಕ ಎ.ಐ.ಬಿ.ಎಸ್.ಎಸ್, ವಸಂತ್ ಚವ್ಹಾಣ ವಿಜಯಪುರ, ದೀಪಾ ರಾಠೋಡ ಕಾರಟಗಿ, ಪುಷ್ಪಾಬಾಯಿ ಹೂವಿನಹಡಗಲಿ, ಶಂಕರ ನಾಯ್ಕ, ಕುಮಾರ ರಾಠೋಡ, ಕೂಪಳಗಡ್ ಬಹಾದ್ದೂರ ಬಂಡಾ ಟ್ರಸ್ಟನ ಅಧ್ಯಕ್ಷರಾದ ಭರತ ನಾಯ್ಕ, ಗಂಗಾವತಿಯ ಶಿವಪ್ಪ ಜಾಗೊ, ರವಿನಾಯ್ಕ ಚವ್ಹಾಣ, ಪಾಂಡುನಾಯ್ಕ, ವೆಂಕಟೇಶ ನಾಯ್ಕ ಹಾಗೂ ಅನೇಕ ಕವಿಗಳು, ಹಿರಿಯರು, ಸಾಹಿತ್ಯಾಸಕ್ತರು ಭಾಗವಹಿಸಿದ್ದರು.

*ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ Infosys Springboard ಅಡಿ ಪತ್ರಕರ್ತೆಯರಿಗಾಗಿ ತರಬೇತಿಗೆ ಅರ್ಜಿ ಆಹ್ವಾನ*
  • *ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ Infosys Springboard ಅಡಿ ಪತ್ರಕರ್ತೆಯರಿಗಾಗಿ ತರಬೇತಿಗೆ ಅರ್ಜಿ ಆಹ್ವಾನ
    ಕಿಷ್ಕಿಂಧವಾಣಿ ಸುದ್ದಿ
    ಬೆಂಗಳೂರು:
    ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷವಾಗಿ ತರಬೇತಿ ಆಯೋಜಿಸಿದ್ದು, ಪತ್ರಕರ್ತೆಯರಿಂದ ಅರ್ಜಿ ಆಹ್ವಾನಿಸಿದೆ.
    ತರಬೇತಿಯು ಮಾರ್ಚ್‌ 25 ರಿಂದ 27ರ ವರೆಗೆ ಮೈಸೂರಿನ ಇನ್‌ಫೋಸಿಸ್‌ ಕ್ಯಾಂಪಸ್‌ನಲ್ಲಿ ನಡೆಯಲಿದೆ.
    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತೆಯರು ಅರ್ಜಿ ಸಲ್ಲಿಸಬಹುದು.
    ಆಸಕ್ತ ಪತ್ರಕರ್ತೆಯರು ಗೂಗಲ್‌ ಫಾರ್ಮ್‌ https://forms.gle/tozr4GxUQibDHBvk9 ನಲ್ಲಿ ಮಾಹಿತಿ ಹಾಗೂ ದಾಖಲೆಗಳನ್ನು ಒದಗಿಸುವ ಮೂಲಕ ತರಬೇತಿಗೆ ನೋಂದಾಯಿಸಬಹುದಾಗಿದೆ.
    • ಅರ್ಜಿ ನಮೂನೆಯಲ್ಲಿ ಸೂಚಿಸಿರುವಂತೆ ಪತ್ರಕರ್ತೆಯರು ಭಾವಚಿತ್ರ, ವಯಸ್ಸಿನ ದಾಖಲೆ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಅಥವಾ ಕಚೇರಿಯ ಅಧಿಕೃತ ಗುರುತಿನಚೀಟಿ, ಸದರಿ ಮಾಧ್ಯಮ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಕುರಿತ ದಾಖಲೆ ಹಾಗೂ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರುವ ಕುರಿತು ಸೇವಾನುಭವ ದಾಖಲೆಗಳನ್ನು ಸಲ್ಲಿಸಬೇಕು.
    • ಇದು ಮೂರು ದಿನಗಳ ವಸತಿಯುತ ತರಬೇತಿಯಾಗಿದ್ದು, ಪತ್ರಕರ್ತೆಯರಿಗೆ ನಿಯಮಾನುಸಾರ ಪ್ರಯಾಣ ಭತ್ಯೆ ನೀಡಲಾಗುವುದು.
    • ಈ ತರಬೇತಿ ಕಾರ್ಯಕ್ರಮದಲ್ಲಿ ಡಿಜಿಟಲ್‌ ಮಾಧ್ಯಮ, ಎಐ ಬಳಕೆ ಹಾಗೂ ಸಾಫ್ಟ್‌ಸ್ಕಿಲ್‌ ಅಭಿವೃದ್ಧಿ ಮತ್ತು ನಾಯಕತ್ವ ತರಬೇತಿ ನೀಡಲಾಗುವುದು.

    ಪತ್ರಕರ್ತೆಯರ ಆಯ್ಕೆ ಕುರಿತ ಅಂತಿಮ ನಿರ್ಧಾರ ಅಕಾಡೆಮಿಯದ್ದೇ ಆಗಿರುತ್ತದೆ.
    • ಅರ್ಜಿ ಸಲ್ಲಿಸಲು ಮಾರ್ಚ್ 10, 2026 ಕೊನೆಯ ದಿನವಾಗಿದೆ.

Read More *ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ Infosys Springboard ಅಡಿ ಪತ್ರಕರ್ತೆಯರಿಗಾಗಿ ತರಬೇತಿಗೆ ಅರ್ಜಿ ಆಹ್ವಾನ*

ಇವತ್ತಿನ‌ ಸಮಾಜಕ್ಕೆ ಕತ್ತರಿಗಳಲ್ಲ: ಸೂಜಿಗಳ ಅಗತ್ಯವಿದೆ: ಕೆ.ವಿ.ಪ್ರಭಾಕರ್ ಅಭಿಮತ *ಬರೆದ ಪ್ರತೀ ವರದಿ-ತೋರಿಸಿದ ಪ್ರತಿ ಸುದ್ದಿ-ಕ್ಯಾಮರಾ ಎದುರು ಆಡಿದ ಪ್ರತೀ ಮಾತಿಗೂ ಉತ್ತರದಾಯಿತ್ವ ಹೊಂದುವ ಹೊಣೆಗಾರಿ ಪತ್ರಕರ್ತರಾಗಿ: ಕೆ.ವಿ.ಪ್ರಭಾಕರ್ ಕರೆ.

ಕಿಷ್ಕಿಂಧವಾಣಿ ಸುದ್ದಿ
ಬೆಂಗಳೂರು:
ಪ್ರಸ್ತುತ ಸಾಮಾಜಿಕ ಬೆಸುಗೆಯನ್ನು ಕತ್ತರಿಸುವ ಕತ್ತರಿಗಳು ಜನ‌ಸಮುದಾಯದ ಪ್ರಜ್ಞೆಯನ್ನು ರೂಪಿಸುತ್ತಿವೆ. ಇಂಥಾ ಹೊತ್ತಲ್ಲಿ ಸಮಾಜವನ್ನು ಪರಸ್ಪರ ಹೊಲಿಯುವ ಸೂಜಿಗಳ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ‌ ಇಲಾಖೆ, ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾನಿಲಯ ಮತ್ತು ಬೆಂಗಳೂರು ವಿಶ್ವ ವಿದ್ಯಾನಿಲಯ ಆಯೋಜಿಸಿದ್ದ “ಮಾಧ್ಯಮ ಹಬ್ಬ-2026” ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಅರಳುವ ಹೂವಿನ ಒಳಗೆ ಮಕರಂದ ಬೆರೆತಿರುವ ಹಾಗೆ ಅರಳುವ ಪತ್ರಕರ್ತ, ಪತ್ರಕರ್ತೆಯ ಒಳಗೆ ಸಾಮಾಜಿಕ ಪ್ರಜ್ಞೆ ಮತ್ತು ನೈತಿಕ ಪ್ರಜ್ಞೆ ಬೆರೆತಿರಬೇಕು ಎಂದರು.
ಜನ ಸಮುದಾಯದ ಪ್ರಜ್ಞೆಯನ್ನು ರೂಪಿಸುವುದು ಪತ್ರಕರ್ತರಾದವರ ಹೊಣೆ. ಜನ‌ ಸಮುದಾಯದ, ಸಮಾಜದ ಪ್ರಜ್ಞೆಯನ್ನು ರೂಪಿಸುವ ನಿಮ್ಮ‌ ಪ್ರಜ್ಞೆಯನ್ನು ಯಾರು ರೂಪಿಸುತ್ತಿದ್ದಾರೆ, ಯಾವುದು ರೂಪಿಸುತ್ತಿದೆ ಎನ್ನುವ ಸ್ಪಷ್ಟ ಎಚ್ಚರ ಇರಬೇಕಾಗುತ್ತದೆ.
ಈ ಎಚ್ಚರ ಇದ್ದಾಗ ತಾನು ಬರೆದ ಪ್ರತೀ ವರದಿ, ತಾನು ತೋರಿಸಿದ ಪ್ರತೀ ಸುದ್ಧಿ, ಕ್ಯಾಮರಾ ಮುಂದೆ ತಾನು ಆಡಿದ ಪ್ರತೀ ಮಾತಿಗೂ ಉತ್ತರದಾಯಿತ್ವ ಹೊಂದಿರುವ ಹೊಣೆಗಾರಿ ಪತ್ರಕರ್ತರು ರೂಪುಗೊಳ್ಳುತ್ತಾರೆ.
ಈ ಸಾಮಾಜಿಕ ಎಚ್ಚರ ಬರುವುದು ನಮ್ಮ ನೋಟದಿಂದ. ಸಮಾಜವನ್ನು ನೋಡುವ ಕಣ್ಣುಗಳಿಂದ.
ಯಾರ ಕಣ್ಣುಗಳಿಂದ ಹಾಗೂ ಯಾವ ಕಣ್ಣುಗಳಿಂದ ನಾವು ನೋಡುತ್ತಿದ್ದೇವೆ ಎನ್ನುವುದರ ಮೇಲೆ ನಮ್ಮ ನೋಟ, ನಮ್ಮ ಗ್ರಹಿಕೆ ರೂಪುಗೊಳ್ಳುತ್ತದೆ ಎಂದು ವಿವರಿಸಿದರು.
ಹುಟ್ಟಿದ ಮಗು ಮಾತಿಗೆ ಮೊದಲು ನೋಡಿ ಕಲಿಯುತ್ತದೆ. ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ.
ಪತ್ರಕರ್ತರಾಗುವವರು ಪೂರ್ವಗ್ರಹ ಮುಕ್ತ ಮಗುವಿನ ಮನಸ್ಸಿನಿಂದ ಸಾಮಾಜಿಕ ವ್ಯವಸ್ಥೆಯನ್ನು, ಸಾಮಾಜಿಕ ತಾರತಮ್ಯಗಳನ್ನು “ಇರುವುದನ್ನು ಇರುವ ಹಾಗೆ ಗಮನಿಸಬೇಕು”. ಹೀಗಾದಾಗ ಮಾತ್ರ ಸಾಮಾಜಿಕ ಸಮಸ್ಯೆಗಳು ಮತ್ತು ಈ ಸಮಸ್ಯೆಗಳಿಗೆ ಕಾರಣವಾದ ಸಂಗತಿಗಳ ಬಗ್ಗೆ ಸ್ಪಷ್ಟ ಗ್ರಹಿಕೆ ಬರುತ್ತದೆ. ಈ ಸ್ಪಷ್ಟತೆಯೇ ಪರಿಣಾಮಕಾರಿ ಪತ್ರಕರ್ತನನ್ನು ರೂಪಿಸುತ್ತದೆ ಎಂದು ವಿವರಿಸಿದರು.

ವೇದಿಕೆ ಮೇಲಿರುವ ದಿನೇಶ್‌ ಅಮೀನ್ ಮಟ್ಟು ಅವರು ಸೇರಿದಂತೆ ವಡ್ಡರ್ಸೆ ರಘುರಾಮ್ ಶೆಟ್ಟರು, ಪಿ.ಲಂಕೇಶ್, ಖಾದ್ರಿ ಶಾಮಣ್ಣ, ವೈಎನ್ ಕೆ, ಮೊಹರೆ ಹನುಮಂತರಾಯರು, ಡಿವಿಜಿ, ಟಿಎಸ್ ಆರ್ ರೀತಿಯ ಹಲವು ಹಿರಿಯರು ಸೂಜಿಗಳಾಗಿ, ದರ್ಜಿಗಳಾಗಿ, ನೇಕಾರರಾಗಿ ಪತ್ರಿಕಾ ವೃತ್ತಿಯ ಪ್ರಜ್ಞೆಯನ್ನು ರೂಪಿಸುವುದರ ಜೊತೆಗೆ ಸಾಮಾಜಿಕ‌ ಪ್ರಜ್ಞೆಯನ್ನೂ ರೂಪಿಸಿದ್ದಾರೆ. ಸಮಾಜವನ್ನು ಬೆಸೆಯುವ ಬೆಸುಗೆಗಳಾಗಿದ್ದಾರೆ ಎಂದು ಎಲ್ಲರಿಗೂ ಧನ್ಯತೆ ಅರ್ಪಿಸಿದರು.
ಕೇವಲ ಕಾರ್ಯಾಗಾರದಲ್ಲಿ ಭಾಗವಹಿಸುವುದರಿಂದ ಪತ್ರಿಕೋದ್ಯಮದ‌ ಪಟ್ಟುಗಳನ್ನು ಕಲಿಯಲು ಸಾಧ್ಯವಿಲ್ಲ ಎಂಬುದರ ಬಗ್ಗೆಯೂ ವಿದ್ಯಾರ್ಥಿಗಳು ಸ್ಪಷ್ಡವಾಗಿ ತಿಳಿಯಬೇಕಿದೆ. ಓದು, ಸಂಘಟನೆ ಹಾಗೂ ಸ್ವತಂತ್ರ ಚಿಂತನೆಯಿಂದ ಮಾತ್ರ ಒಳನೋಟಗಳನ್ನು ಪಡೆಯಬಹುದು.‌ ಒಳನೋಟವೇ ಇಲ್ಲದವರಿಗೆ ಪತ್ರಿಕೋದ್ಯಮ ಕೈಹಿಡಿಯದು. ಹಾಗಾಗಿ ಈ ಒಳನೋಟಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳು ತಮ್ಮ ಒಳಗಣ್ಣುಗಳನ್ನು ತೆರೆದು ತಯಾರಿ ನಡೆಸಿಕೊಳ್ಳಬೇಕಿದೆ. ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಕೂಡ ಪತ್ರಕರ್ತರಾಗಿದ್ದವರು. ಇವರೆಲ್ಲಾ ಪತ್ರಕರ್ತರಾಗಿದ್ದಾಗ ಪತ್ರಿಕೋದ್ಯಮಕ್ಕೆ ಹಣದ ಬಡತನವಿತ್ತು. ಸತ್ಯಕ್ಕೆ ಬಡತನ ಇರಲಿಲ್ಲ. ಈಗ ಹಣದ ಬಡತನದಿಂದ ಹೊರಗೆ ಬಂದಿರುವ ಪತ್ರಿಕೋದ್ಯಮ ಸತ್ಯದ ಬಡತನಕ್ಕೆ ಜಾರಿರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು.
ಸತ್ಯಕ್ಕೆ ಹಲವು‌ ಮುಖಗಳು ಇರುತ್ತವೆ. ಆ ಎಲ್ಲ‌ ಮುಖಗಳನ್ನು ನಿರ್ಭಿಡೆಯಾಗಿ ಅನಾವರಣಗೊಳಿಸಲು ಎಲ್ಲ ಜಾತಿ, ಮತ, ಧರ್ಮ, ಆಚಾರ, ವಿಚಾರಗಳನ್ನು ಹೊಂದಿರುವವರು ಮಾಧ್ಯಮ ಕ್ಷೇತ್ರದಲ್ಲಿ ಇದ್ದಷ್ಟು ಮಾಧ್ಯಮ ಕ್ಷೇತ್ರ ಸದೃಢಗೊಳ್ಳುತ್ತದೆ.
ಸ್ವಾತಂತ್ರ್ಯ ಹೋರಾಟದಲ್ಲಿ “ಒಗ್ಗಟ್ಟು” ದೇಶದ ಮೌಲ್ಯವಾಗಿತ್ತು. ಸ್ವಾತಂತ್ರ್ಯಾ ನಂತರ “ವಿವಿಧತೆಯಲ್ಲಿ ಏಕತೆ” ದೇಶದ ಮೌಲ್ಯವಾಗಿತ್ತು. ಭಾರತವನ್ನು ರೂಪಿಸಿದ ಈ ಎರಡೂ ಮೌಲ್ಯಗಳನ್ನೂ ಹಾಳುಗೆಡವುತ್ತಿರುವ ಈ ಹೊತ್ತಲ್ಲಿ “ಬಹುತ್ವ” ನಮ್ಮ ನೆಲದ ಮಂತ್ರವಾಗಿದೆ, ಮೌಲ್ಯವಾಗಿದೆ. ಇದು ಕಾಪಾಡುವ ಹೊಣೆಗಾರಿಕೆ ಹಾಲಿ ಮತ್ತು ಭಾವಿ ಪತ್ರಕರ್ತರ ಮೇಲಿದೆ ಎಂದರು.
ಮಾಧ್ಯಮಗಳಲ್ಲಿ ಆಯಾ ಕಟ್ಟಿನ ಹುದ್ದೆಯಲ್ಲಿರುವವರು ಒಂದೇ ವರ್ಗಕ್ಕೆ ಸೇರಿದರೆ, ಬಹುತ್ವವನ್ನು ಪ್ರತಿನಿಧಿಸಲು ಸಾಧ್ಯವಿಲ್ಲ.
ಇಂದು ಮೊಬೈಲ್ ನಲ್ಲಿ ಹರಿದಾಡುವ ಲಕ್ಷಾಂತರ ಕಟೆಂಟ್ ಗಳು ಬಹುತ್ವದ ನೆಲೆಯಲ್ಲಿಯೇ ಸೃಷ್ಟಿಯಾಗಿವೆ. ಮಾಹಿತಿ ಸಾಗರ ಪತ್ರಿಕೋದ್ಯಮಕ್ಕೆ ಬೆದರಿಕೆಯೆಂದು ಭಾವಿಸಬೇಕಿಲ್ಲ. ಸೂಕ್ಷ್ಮವಾಗಿ ಗಮನಿಸಿದರೆ ಇಲ್ಲೊಂದು ಸಂಗತಿಯನ್ನು ಮಾಧ್ಯಮ ಕ್ಷೇತ್ರ ಸ್ಷಷ್ಡವಾಗಿ ಅಳವಡಿಸಿಕೊಳ್ಳಬೇಕಿದೆ. ಅದೇನೆಂದರೆ
ಒಂದು ಸಮುದಾಯ, ಒಂದು ಭಾಷೆ, ಒಂದು ಜಾತಿಯ ದನಿಗಳನ್ನಷ್ಟೆ ಕೇಳುತ್ತಿದ್ದ ಕಾಲಘಟ್ಟದಲ್ಲಿ‌ ಕಟೆಂಟ್ ಸುರಿಮಳೆಯಲ್ಲಿ ನಾನಾ ಮಣ್ಣಿಗೆ ಸೇರಿದ ವಿಭಿನ್ನ ದನಿಗಳಿವೆ.
ಈ‌ ಎಲ್ಲಾ ದನಿಗಳಿಂದ ಡಿಜಿಟಲ್ ಮಾಧ್ಯಮ ವರ್ಣಮಯವಾಗಿದೆ ಮತ್ತು ವಿಭಿನ್ನ ದನಿಗಳ‌ ಕಾರಣಕ್ಕೆ ಜನರನ್ನು ಹಿಡಿದಿಡುತ್ತಿದೆ ಎಂದರು.
ಪತ್ರಿಕೆಗಳಲ್ಲಿ ಮೊದಲೆಲ್ಲ ಪ್ರೂಫ್ ರೀಡರ್ ಇರುತ್ತಿದ್ದರು. ಕ್ರಮೇಣ ಆ ಪರಂಪರೆ ಇಲ್ಲವಾಯಿತು. ವಿಷಯ ತಪ್ಪಿಲ್ಲದ ಹಾಗೆ ಅಚ್ಚಿಗೆ ಹೋಗಲು ಪ್ರೂಪ್ ರೀಡರ್ ಹೇಗೆ ಮುಖ್ಯವಾಗುತ್ತಿದ್ದರೋ ಪ್ರಸ್ತುತ ಎಲ್ಲ ಬಗೆಯ ಮಾಧ್ಯಮಗಳಿಗೂ ಬೇಕಿರುವುದು ಫ್ಯಾಕ್ಟ್ ಚೆಕರ್ಸ್.
ಸುಳ್ಳುಗಳ‌ ನಡುವೆ ಸತ್ಯವನ್ನು, ನೈಜ‌ ಸುದ್ದಿಯನ್ನು ಹೆಕ್ಕಿ, ಜನರ ಮುಂದೆ ಪರಿಣಾಮಕಾರಿಯಾಗಿ ಇಡಬಲ್ಲವರು ಮಾತ್ರ ಪರಿಣಾಮಕಾರಿ ಪತ್ರಕರ್ತರಾಗಿ ಮಂಚೂಣಿಗೆ ಬರಲು ಸಾಧ್ಯವಿದೆ.
ಸಾವಿರ ಸುಳ್ಳಿನ ಕಟೆಂಟ್ ಗಳ ನಡುವೆ ಸತ್ಯ ಹೇಳುವ ಕಟೆಂಟ್ ಗಳಿಗೆ ಆರಂಭದಲ್ಲಿ ಹಿನ್ನಡೆಯಾದರೂ ಅದು ಗೆಲ್ಲುತ್ತದೆ. ಆ ಭರವಸೆಯಲ್ಲಿ ಪತ್ರಕರ್ತರು ಸತ್ಯವನ್ನು ಹುಡುಕಬೇಕಿದೆ.
ಈ ಸತ್ಯವನ್ನು ಹುಡುಕುವ ಕಣ್ಣುಗಳನ್ನು, ನೋಟವನ್ನು, ಗ್ರಹಿಕೆಯನ್ನು ಕೊಡುವ ಮೂಲಕ “ಸಾಮಾಜಿಕ ಪ್ರಜ್ಞೆ-ನೈತಿಕ ಪ್ರಜ್ಞೆ ಬೆರೆತ ಪತ್ರಕರ್ತರು ರೂಪುಗೊಳ್ಳಲು ಈ ಕಾರ್ಯಾಗಾರ ನೆರವಾಗಲಿ ಎಂದು ಆಶಿಸಿದರು.
ಹಿರಿಯ ಸಮಾಜವಾದಿ ಚಿಂತಕರೂ, ಪತ್ರಕರ್ತರೂ ಆದ ದಿನೇಶ್ ಅಮೀನ್ ಮಟ್ಟು ಅವರು ಮಾತನಾಡಿ, ” ಬರೆಯುವುದಕ್ಕಿಂತ ಹೆಚ್ಚಾಗಿ ಓದಬೇಕು. ಪತ್ರಕರ್ತರಾಗುವವರಿಗೆ ಓದಿನ‌ ಹಸಿವು ಮತ್ತು ಸಾಮಾಜಿಕ ಜವಾಬ್ದಾರಿ ಇರಬೇಕು. ಸಾಮಾಜಿಕ ಜವಾಬ್ದಾರಿ ಇಲ್ಲದ ಯಾವುದೇ ವೃತ್ತಿ ಸಾಮಾಜಿಕ ಪಾಪ. ಪಾತಕ, ಮೂಡನಂಬಿಕೆಗಳನ್ನು ವಿಜ್ರಂಭಿಸುವವರು ಒಳ್ಳೆ ಪತ್ರಕರ್ತ ಇರಲಿ, ಒಬ್ಬ ಜವಾಬ್ದಾರಿಯುತ ನಾಗರಿಕ ಕೂಡ ಆಗಿರಲು ಸಾಧ್ಯವಿಲ್ಲ. ಅಜ್ಞಾನ, ಅಸೂಕ್ಷ್ಮ ಆಗಿರುವವರು ಪತ್ರಕರ್ತ ಎನ್ನಿಸಲು ಸಾಧ್ಯವೇ ಇಲ್ಲ ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಮಾಧ್ಯಮ‌ ಅಕಾಡೆಮಿ‌ ಅಧ್ಯಕ್ಷೆ ಆಯೆಷಾ ಖಾನುಂ, ಕುಲಪತಿ ಪ್ರೊ.ರಮೇಶ್ ಬಿ, ಕುಲಸಚಿವ ನೀವೀನ್ ಜೋಸೆಫ್, ವಾರ್ತಾ ಇಲಾಖೆ ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಪೈ ಮೆಡಿಕಲ್ ಅಕಾಡೆಮಿ ಪಿಯುಸಿ ಕಾಲೇಜಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ.

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ನಗರದ ಪೈ ಮೆಡಿಕಲ್ ಅಕಾಡೆಮಿಯ ಬಿಬಿಸಿ ಪಿಯು ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಎರಡು ದಿನಗಳ ವಿಜ್ಞಾನ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಮುಗಿಸಿದ ವಿದ್ಯಾರ್ಥಿಗಳು ಭಾಗವಹಿಸಿದ ವಸ್ತು ಪ್ರದರ್ಶನದಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದ ಕೃತಕ ಬುದ್ಧಿಮತ್ತೆ (AI), ರೋಬೋಟಿಕ್ಸ್, ಡೋನ್ ಪ್ರದರ್ಶನ, 3D ಹೊಲೊಗ್ರಾಮ್, ರಕ್ತ ಹಾಗೂ ಸಕ್ಕರೆ ಕಾಯಿಲೆ ಪರೀಕ್ಷೆ, ತ್ಯಾಜ್ಯ ನಿರ್ವಹಣೆ, ನೀರಿನ ಶುದ್ದೀಕರಣ, ಫ್ರೀ ಎನರ್ಜಿ, ಹೈಡ್ರಾಲಿಕ್ ಬ್ರಿಡ್ಡ ( ಜಲಚಾಲಿತ ತಂತ್ರಜ್ಞಾನ ), ವಿವಿಧ ರಾಸಾಯನಿಕ ಕ್ರಿಯೆಗಳು, ಹೀಗೆಯೇ 30ಕ್ಕೂ ಹೆಚ್ಚು ಪ್ರದರ್ಶನಗಳು ಕಂಡುಬಂದವು.

ಮೊದಲನೆಯ ದಿನ ಪಾಲಕರು ಹಾಗೂ ಎರಡನೇ ದಿನ ಹಲವಾರು ಪ್ರೌಢಶಾಲೆಯ ವಿದ್ಯಾರ್ಥಿಗಳು ಬಂದು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಪೈ ಮೆಡಿಕಲ್ ಅಕಾಡೆಮಿಯ ಸಂಸ್ಥಾಪಕ ವಿನೋದ್ ಎಸ್ ಮಾತನಾಡಿ ವಿಜ್ಞಾನ ವಸ್ತು ಪ್ರದರ್ಶನವು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲತೆ ಮತ್ತು ಸಂಶೋಧನಾ ಆಸಕ್ತಿಯನ್ನು ಪ್ರೇರೇಪಿಸುವ ಪ್ರಮುಖ ಶೈಕ್ಷಣಿಕ ಕಾರ್ಯಕ್ರಮವಾಗಿದೆ. ಇದು ಪಠ್ಯಪುಸ್ತಕದ ಜ್ಞಾನವನ್ನು ಪ್ರಾಯೋಗಿಕ ಮಾದರಿಗಳ ಮೂಲಕ ಅನ್ವೇಷಿಸಲು, ಪರಿಸರ ಸಂರಕ್ಷಣೆ, ತಂತ್ರಜ್ಞಾನದ ಆವಿಷ್ಕಾರಗಳ ಬಗ್ಗೆ ಅರಿವು ಮೂಡಿಸಲು ಸಹಾಯ ಮಾಡುತ್ತದೆ ಮತ್ತು ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಸಹ ಸಂಸ್ಥಾಪಕ ಗಾಂಧಿ ಕೆ, ಉಪ ಪ್ರಾಂಶುಪಾಲ ಸಂದೀಪ ನಾಯಕ ಹಾಗೂ ಎಲ್ಲಾ ಉಪನ್ಯಾಸಕರು ಇದ್ದರು.

ರಾಜಾ ಶ್ರೀರಂಗದೇವರಾಯಲು ಕಂಚಿನ ಪುತ್ಥಳಿಯ ಸ್ಥಾಪನೆಗೆ ಶೀಘ್ರ ಅಭಿಮಾನಿಗಳ ಸಭೆ ರಾಜಾ ಶ್ರೀರಂಗದೇವರಾಯಲು ಪ್ರತಿಷ್ಠಾನ ರಚನೆಗೆ ನಿರ್ಧಾರ ಕೃಷಿ, ಸಾಹಿತ್ಯ, ಸಾಂಸ್ಕೃತಿಕ ಸಾಧಕರು, ಲೇಖಕರನ್ನು ಪ್ರತಿ ವರ್ಷ ಸತ್ಕರಿಸಲು ಯೋಜನೆ

ಕಿಮ್ಮಿಂಧವಾಣಿ ಸುದ್ದಿ

 

ಗಂಗಾವತಿ: ಮಾಜಿ ಸಚಿವರು ಹಾಗೂ ಆನೆಗೊಂದಿ ರಾಜವಂಶಸ್ಥರಾದರಾಜಾ ಶ್ರೀರಂಗದೇವರಾಯಲು

 

ಅವರ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸಿ ಕೃಷಿ, ಸಾಹಿತ್ಯ, ಸಾಂಸ್ಕೃತಿಕ ಸಾಧಕರು, ಲೇಖಕರನ್ನು ಸತ್ಕರಿಸಲು ತೀರ್ಮಾನ ಕೈಗೊಳ್ಳಲಾಯಿತು.ರಾಜಾಶ್ರೀರಂಗದೇವರಾಯಲು ಕಂಚಿನ ಪುತ್ಥಳಿಯ ಸ್ಥಾಪನೆಗೆ ಶೀಘ್ರಅಭಿಮಾನಿಗಳ ಸಭೆ ಕರೆದು ತೀರ್ಮಾನಿಸಲಾಗುತ್ತದೆ ಎಂದು ಆನೆಗೊಂದಿಯ ಹಿರಿಯ ಮುಖಂಡರಾದ ಹಂಪಿ ಹನುಮಂತಯ್ಯ ಹೇಳಿದರು.

 

ಸಾವಯವ ಕೃಷಿ ಕೇಂದ್ರದಲ್ಲಿ ರಾಜಾ ಅವರು ತಾಲೂಕಿನ ತಿರುಮಲಾಪೂರದ

 

ಶ್ರೀರಂಗದೇವರಾಯಲು ಪ್ರತಿಷ್ಠಾನ ಸ್ಥಾಪನೆಯ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತಾಡಿದರು.

 

ಶ್ರೀರಂಗದೇವರಾಯಲು ಜನಸಾಮಾನ್ಯರ ರಾಜಕಾರಣಿಯಾಗಿದ್ದರು. ಅವರ ಹೆಸರಿನಲ್ಲಿ ಮತ್ತು ಅವರ ಕುಟುಂಬಸ್ಥರು, ಅಭಿಮಾನಿಗಳ ನೇತೃತ್ವದಲ್ಲಿ ಪ್ರತಿಷ್ಠಾನ ಸ್ಥಾಪಿಸಿ ಸಾಮಾಜಿಕ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಆಯೋಜನೆ ಮಾಡಬೇಕು. ಕೃಷಿ, ಸಾಹಿತ್ಯ, ಸಾಂಸ್ಕೃತಿಕ ಸಾಧಕರು, ಲೇಖಕರನ್ನು ಪ್ರತಿ ವರ್ಷ ಸತ್ಕರಿಸಬೇಕು.

 

ವೈಚಾರಿಕ ಮತ್ತು ಜನೋಪಯೋಗಿ ಯೋಜನೆಗಳ ಕುರಿತು ಶ್ರೀರಂಗದೇವರಾಯಲು ಅವರಿಗಿದ್ದ ಕಳಕಳಿಯನ್ನು ಕಾರ್ಯಕ್ರಮ ರೂಪದಲ್ಲಿ

 

ಅನುಷ್ಠಾನ ಮಾಡಬೇಕು. ತುಂಗಭದ್ರಾ ಡ್ಯಾಂ ಕಾಲುವೆಗಳ ಕುರಿತು ಮತ್ತು ವಿಶೇಷವಾಗಿ ವಿಜಯನಗರ ಕಾಲುವೆಗಳ ಶಾಶ್ವತ ದುರಸ್ತಿಗಾಗಿ

 

ಮೂಲಕ ಶ್ರೀರಂಗದೇವರಾಯಲು ಇನ್ನೂ ಜನಮಾನಸದಲ್ಲಿದ್ದು ಅವರ ಕಾರ್ಯಗಳನ್ನು ಪ್ರತಿಷ್ಠಾನಗಳ ಮೂಲಕ ಅನುಷ್ಟಾನ ಮಾಡಲು ತೀರ್ಮಾನಿಸಾಗಿದೆ ಎಂದರು.

 

ಹಲವು ಭಾರಿ ಮುಖ್ಯಮಂತ್ರಿಗಳಿಗೆ ಅವರು ಸಲ್ಲಿಸಿದ್ದ ಮನವಿ ಹಿನ್ನೆಲೆಯಲ್ಲಿ ಶಾಶ್ವತ ದುರಸ್ತಿ ಕಾರ್ಯಗಳಾಗಿದ್ದು ಅವರಿದ್ದ ನೀರಾವರಿ ಕಾಳಜಿ ಮತ್ತು ಬಡವರಿಗೆ ಮನೆಗಳ ನಿರ್ಮಾಣ ಮತ್ತು ಆನೆಗೊಂದಿ ಉತ್ಸವ ಹಾಗೂ ತಳವಾರ ಘಟ್ಟ ಸೇತುವೆ ಕನಸು ಹೀಗೆ ಹಲವು ಜನಪರವಾದ ಯೋಜನೆಗಳನ್ನು ಮತ್ತು ಗಂಗಾವತಿಯಲ್ಲಿ ಕೃಷಿ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ, ಬೃಹತ್ ಬಸ್ ನಿಲ್ದಾಣ, 100 ಹಾಸಿಗೆ ಸರಕಾರಿ ಆಸ್ಪತ್ರೆ, ಮಿನಿವಿಧಾನಸೌಧ ಹೀಗೆ ಹಲವು ಕಾರ್ಯಗಳ

 

ಸಭೆಯಲ್ಲಿ ರಾಜವಂಶಸ್ಥರಾದ ಲಲಿತಾರಾಣಿ ಶ್ರೀರಂಗದೇವರಾಯಲು, ಟಿ.ಸತ್ಯನಾರಾಯಣ, ಪತ್ರಕರ್ತರಾದ ಕೆ.ಮಲ್ಲಿಕಾರ್ಜುನ ಸಾಣಾಪೂರ, ಕೆ.ನಿಂಗಜ್ಜ, ಮುಖಂಡರಾದ ಕೆ.. ತಿರುಕಪ್ಪ, ಟಿ.ಜಿ.ಬಾಬು, ವೈರಮೇಶ, ನರಸಿಂಹಲು. ಕೆ. ವೆಂಕಟೇಶ. ಇಲ್ಲೂರು ರಾಮಕೃಷ್ಣ, ಚಂದ್ರಣ್ಣ, ಯುವರಾಜ,ನಟ ವಿಷ್ಣುಜೋಶಿ ಆದಾಪೂರ, ಶಿವಚ್ಯು, ಬಾಳೆಕಾಯಿ ತಿಮ್ಮಪ್ಪ,ಕೆ.ಪವನಕುಮಾರ ಸೇರಿ ಆನೆಗೊಂದಿ ಭಾಗದ ಮುಖಂಡರಿದ್ದರು

ಮರಕುಂಬಿ ಪ್ರಕರಣದ ಮುಂಚೂಣಿ ನಾಯಕ ನಿತ್ಯಾನಂದ ಸ್ವಾಮಿ ನಿಧನ ನುಡಿ ನಮನ.

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ಮುರುಕುಂಬಿಯ ಅಸ್ಪೃಶ್ಯರ ಮೇಲಿನ ದೌರ್ಜನ ಖಂಡಿಸಿ ನಡೆದ ದಶಕಗಳ ಹೋರಾಟದ ಮುಂಚೂಣಿ ನಾಯಕರಾಗಿದ್ದ ಸಿಪಿಐಎಂ ಪಕ್ಷದ ನಿತ್ಯಾನಂದ ಸ್ವಾಮಿ ಅವರು ಭೂಮಿ ಚಳವಳಿ ಸೇರಿದಂತೆ ಗಂಗಾವತಿಯ ಪ್ರಮುಖ ಚಳುವಳಿಯಲ್ಲಿ ಹೋರಾಟದ ನೆನಪುಗಳು ಜೀವಂತವಾಗಿವೆ ಎಂದು ಸಿಐಟಿಯು ರಾಜ್ಯ ಮುಖಂಡ ಎಂ ನಿರುಪಾದಿ ಬೆಣಕಲ್ ಹೇಳಿದರು ಅವರು ಸಿಪಿಐಎಂ ಕಚೇರಿಯಲ್ಲಿ ನಿತ್ಯಾನಂದ ಸ್ವಾಮಿ ಅವರ ನುಡಿನಮನ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ನಿತ್ಯಾನಂದ ಸ್ವಾಮಿ ವಯೋ ಸಹಜ ಕಾಯಿಲೆಯಿಂದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಿಪಿಐಎಂ ಪಕ್ಷವು ಹಮ್ಮಿಕೊಳ್ಳುವ ಎಲ್ಲಾ ಹೋರಾಟಗಳಲ್ಲಿ ಭಾಗವಹಿಸಿ ದಲಿತರು ಹಿಂದುಳಿದವರು ಅಲ್ಪಸಂಖ್ಯಾತರು ಮತ್ತು ಕೃಷಿ ಕೂಲಿ ಕಾರ್ಮಿಕರಿಗೆ ನ್ಯಾಯವನ್ನು ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು ಎಂದರು.

ಸಿಪಿಐಎಂ ಪ್ರಧಾನ ಕಾರ್ಯಾಲಯದಲ್ಲಿ ಮತ್ತು ಎಪಿಎಂಸಿ ಗಂಜ್ ಕಾರ್ಯಲಯದಲ್ಲಿ ಪಕ್ಷದ ಧ್ವಜವನ್ನು ಅರ್ಧಕ್ಕೆ ಇಳಿಸುವುದರ ಮೂಲಕ ಗೌರವ ಸಲ್ಲಿಸಿ ಸಂತಾಪವನ್ನು ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಸಿಪಿಐಎಂ ನಾಯಕರುಗಳಾದ ಎಂ.ನಿರುಪಾದಿ ಬೆಣಕಲ್, ಬಸವರಾಜ್ ಮರಕುಂಬಿ, ಹುಸೇನಪ್ಪ,

ಗಂಜ್ ಹಮಾಲರ ಸಂಘದ ಕಾರ್ಯದರ್ಶಿ ಕೃಷ್ಣನಾಯಕ ಸೇರಿದಂತೆ ಅನೇಕರಿದ್ದರು

 

ಪೌರ ಸೇವಾ ನೌಕರರ ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಯತ್ನ:ಶೈಲಾ ಕೆ.ಡಿ. * ಪೌರ ಸೇವಾ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ:ಪೌರ ಸೇವಾ ನೌಕರರ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹಾರಕ್ಕೆ ಪ್ರಯತ್ನಿಸುತ್ತೇನೆ ಎಂದು ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ನೂತನ ರಾಜ್ಯಾಧ್ಯಕ್ಷೆ ಶೈಲಾ ಕೆ.ಡಿ. ಹೇಳಿದರು. ನಗರದ ಅಮರಜ್ಯೋತಿ ಕಲ್ಯಾಣ ಮಂಟಪದಲ್ಲಿ ಪೌರ ಸೇವಾ ನೌಕರರ ರಾಜ್ಯಮಟ್ಟದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.,

 

ಪೌರ ಸೇವಾ ನೌಕರರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಅರಿವು ನನಗಿದೆ. ಎಲ್ಲ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಹಂತ ಹಂತವಾಗಿ ಅವುಗಳನ್ನು ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು

 

ಸಂಸದ ರಾಜಶೇಖರ್ ಹಿಟ್ನಾಳ್ ಮಾತನಾಡಿ ನಗರ, ಪಟ್ಟಣಗಳನ್ನು ಸ್ವಚ್ಛವಾಗಿಟ್ಟು ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆದು, ಸಾಮಾಜದ ಆರೋಗ್ಯಕ್ಕೆ ಅಡಿಪಾಯವಾಗಿದ್ದ ಪೌರಕಾರ್ಮಿಕರು ‘ನೈರ್ಮಲ್ಯ ಸೈನ್ನಿಕ’ರಾಗಿದ್ದಾರೆ ಎಂದರು.

 

ಪೌರ ಕಾರ್ಮಿಕರು ಸಮಾಜದ ಸ್ವಾಸ್ಯ್ಯ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಅನನ್ಯ ಮತ್ತು ಅವಶ್ಯಕ ಕೊಡುಗೆ ನೀಡುತ್ತಾರೆ. ಪ್ರತಿದಿನ ಬೆಳಿಗ್ಗೆ ಮಳೆ,ಚಳಿ, ಬಿಸಲೆನ್ನದೇ ಸ್ವಚ್ಛತೆ, ತ್ಯಾಜ್ಯನಿರ್ವಣೆ ಮತ್ತು ರಸ್ತೆಗಳ ನಿರ್ವಹಣೆ ಮೂಲಕ ಹರಡುವ ರೋಗಗಳನ್ನು ತಡೆಗಟ್ಟಿ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುತ್ತಾರೆ. ಕೋವಿಡ್ ಸಮಯದಲ್ಲಿ ಇವರು ತಮ್ಮ ಪ್ರಾಣವನ್ನು ಲೆಕ್ಕಿಸದೇ ಸಾರ್ವಜನಿಕರ ಪ್ರಾಣ ಉಳಿಸಿದ್ದಾರೆ. ಇವರ ಸೇವೆ ಸಮಾಜಕ್ಕೆ ಕನ್ನಡಿಯಾಗಿದೆ. ಇವರ ಕುಟುಂಬಗಳ ಕಲ್ಯಾಣಕ್ಕಾಗಿ ಸರ್ಕಾರ ಇವರೆಲ್ಲಾ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ತ್ವರಿತಗತಿಯಲ್ಲಿ ಈಡೇರಿಸಬೇಕಾಗಿದೆ ಎಂದರು.

 

ಕಾರ್ಯಕ್ರಮದಲ್ಲಿ ಗಜಾನನ ನಾಯಕ, ಆರೋಗ್ಯ ನೀರಿಕ್ಷಕ ನಾಗರಾಜ್, ವ್ಯವಸ್ತಾಪಕ ಷಣ್ಮುಖ, ತಾಲೂಕ ಅದ್ಯಕ್ಷ ವಹೀದ್ ಖಾನ್, ರಮೇಶ, ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರಗಡಪ್ಪ ಹುಲಿಹೈದರ್, ಜಂಟಿ ಕಾರ್ಯದರ್ಶಿ ಲಾಲಸಾಬ್ ಎಂ. ಮನಿಯಾರ್, ಮಹಿಬೂಬು ಪಾಷಾ, ರಾಮಣ್ಣ ಕಳ್ಳಿಮನಿ, ಮತ್ತು ಸಂಘದ ಎಲ್ಲಾ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

ಮಾ.03 ರಂದು ಚಂದ್ರ ಗ್ರಹಣ: ಅರ್ಧ ದಿನ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಗುಡಿ ಬಂದ್

ಕಿಷ್ಕಿಂಧವಾಣಿ ಸುದ್ದಿ

ಕೊಪ್ಪಳ : ಚಂದ್ರ ಗ್ರಹಣದ ಪ್ರಯುಕ್ತ ಸುಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಕೊಪ್ಪಳ ಜಿಲ್ಲೆಗೆ ಶ್ರೀ ಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಹುಣ್ಣಿಮೆ ದಿನವಾದ ಮಾ.03 ರಂದು ಮಧ್ಯಾಹ್ನ 12 ಗಂಟೆಯೊಳಗೆ ಮಾತ್ರ ಶ್ರೀ ಹುಲಿಗೆಮ್ಮ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಶ್ರೀ ವಿಶ್ವಾವಸು ನಾಮ ಸಂವತ್ಸರ ಪಾಲ್ಗುಣ ಶುಕ್ಲ ಹುಣ್ಣಿಮೆ ಮಾ. 3ರ ಮಂಗಳವಾರ ಪೂರ್ವ ನಕ್ಷತ್ರ ಸಿಂಹರಾಶಿ ಗ್ರದ್ಯೋದಿತ ಚಂದ್ರ ಗ್ರಹಣ ಇರುವುದರಿಂದ ಅಂದು ಮಧ್ಯಾಹ್ನ 12 ಗಂಟೆವರೆಗೆ ಮಾತ್ರ ಭಕ್ತರಿಗೆ ಶ್ರೀ ಹುಲಿಗೆಮ್ಮ ದೇವಿಯವರ ದರ್ಶನದ ವ್ಯವಸ್ಥೆ ಇರುತ್ತದೆ. ನಂತರ ಮಧ್ಯಾಹ್ನ 12 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಗ್ರಹಣ ಆಚರಣೆ ಇರುವುದರಿಂದ ದೇವರ ದರ್ಶನ ಇರುವುದಿಲ್ಲ. ಗ್ರಹಣ ಮೋಕ್ಷವಾದ ಅಂದು ಸಂಜೆ 7 ಗಂಟೆಯ ನಂತರ ದೇವಾಲಯದ ಸಾಂಪ್ರದಾಯಿಕ ಪೂಜಾ ವಿಧಿ ವಿಧಾನಗಳು ನೆರವೇರುತ್ತವೆ ಎಂದು ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಅಪ್ರಾಪ್ತೆಗೆ ಹೆರಿಗೆ, ಪೋಕ್ಸೋ ಕೇಸ್ ದಾಖಲು ಸೋದರ ಮಾವನಿಂದ ಕೃತ್ಯ.

ಅಪ್ರಾಪ್ತೆಗೆ ಹೆದರಿಸಿ ಆತ್ಯಾಚಾರ,ಬೇರೆಯವರಿಗೆ ಹೇಳದಂತೆ ತಾಕೀತು.

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ತಾಲೂಕಿನ ಗ್ರಾಮೀಣ ಭಾಗದ ಅಲ್ಪಸಂಖ್ಯಾತರ ಕಾಲೇಜಿನ

ವಸತಿ ನಿಲಯದಲ್ಲಿ ಅಪ್ರಾಪ್ತೆ ಹೆರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ

ಬಾಧಿತೆಯ ತಾಯಿ ಅಣ್ಣ ಅನ್ವರಬಾಷಾ ಇವರ ಪುತ್ರ ಅಲ್ಪಪಬಾಷಾ (21) ಈತನು ಅಪ್ರಾಪ್ತೆಯನ್ನು ಪುಸಲಾಯಿಸಿ ಕಳೆದ ಅಕ್ಟೋಬರ್ ತಿಂಗಳಿಂದ ಲೈಂಗಿಕ ದೌರ್ಜನ್ಯವೆಸಗಿದ್ದು

ಲೈಂಗೀಕ ದೌರ್ಜನ್ಯವೆಸಗಿರುವ ಕುರಿತು ದೂರಿನಲ್ಲಿ ತಿಳಿಸಲಾಗಿದೆ.

ಫೆಬ್ರುವರಿ 19 ನೇ ತಾರೀಖಿನಂದು ರಾತ್ರಿ ಜಾಸ್ತಿ ರಕ್ತ ಸ್ರಾವವಾಗಿದ್ದು ಹಾಸ್ಟೆಲ್ ವಾರ್ಡನ್ ಅವರಿಗೆ ತಿಳಿಸಿದಾಗ ಬಾಲಕಿಯ ತಂದೆ-ತಾಯಿಯವರಿಗೆ ಫೋನ್ ಮಾಡಿ ಕರೆಯಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರ ಜತೆ ಗಂಗಾವತಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೃತ್ಯವೆಸಗಿದ ಅಲ್ಲಪಾಬಾಷಾ ಹೊಸ ಮಲಪನಗುಡಿ ಈತನ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.