ಪೌರ ಸೇವಾ ನೌಕರರ ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಯತ್ನ:ಶೈಲಾ ಕೆ.ಡಿ. * ಪೌರ ಸೇವಾ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ
ಕಿಷ್ಕಿಂಧವಾಣಿ ಸುದ್ದಿ
ಗಂಗಾವತಿ:ಪೌರ ಸೇವಾ ನೌಕರರ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹಾರಕ್ಕೆ ಪ್ರಯತ್ನಿಸುತ್ತೇನೆ ಎಂದು ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ನೂತನ ರಾಜ್ಯಾಧ್ಯಕ್ಷೆ ಶೈಲಾ ಕೆ.ಡಿ. ಹೇಳಿದರು. ನಗರದ ಅಮರಜ್ಯೋತಿ ಕಲ್ಯಾಣ ಮಂಟಪದಲ್ಲಿ ಪೌರ ಸೇವಾ ನೌಕರರ ರಾಜ್ಯಮಟ್ಟದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.,
ಪೌರ ಸೇವಾ ನೌಕರರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಅರಿವು ನನಗಿದೆ. ಎಲ್ಲ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಹಂತ ಹಂತವಾಗಿ ಅವುಗಳನ್ನು ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು
ಸಂಸದ ರಾಜಶೇಖರ್ ಹಿಟ್ನಾಳ್ ಮಾತನಾಡಿ ನಗರ, ಪಟ್ಟಣಗಳನ್ನು ಸ್ವಚ್ಛವಾಗಿಟ್ಟು ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆದು, ಸಾಮಾಜದ ಆರೋಗ್ಯಕ್ಕೆ ಅಡಿಪಾಯವಾಗಿದ್ದ ಪೌರಕಾರ್ಮಿಕರು ‘ನೈರ್ಮಲ್ಯ ಸೈನ್ನಿಕ’ರಾಗಿದ್ದಾರೆ ಎಂದರು.
ಪೌರ ಕಾರ್ಮಿಕರು ಸಮಾಜದ ಸ್ವಾಸ್ಯ್ಯ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಅನನ್ಯ ಮತ್ತು ಅವಶ್ಯಕ ಕೊಡುಗೆ ನೀಡುತ್ತಾರೆ. ಪ್ರತಿದಿನ ಬೆಳಿಗ್ಗೆ ಮಳೆ,ಚಳಿ, ಬಿಸಲೆನ್ನದೇ ಸ್ವಚ್ಛತೆ, ತ್ಯಾಜ್ಯನಿರ್ವಣೆ ಮತ್ತು ರಸ್ತೆಗಳ ನಿರ್ವಹಣೆ ಮೂಲಕ ಹರಡುವ ರೋಗಗಳನ್ನು ತಡೆಗಟ್ಟಿ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುತ್ತಾರೆ. ಕೋವಿಡ್ ಸಮಯದಲ್ಲಿ ಇವರು ತಮ್ಮ ಪ್ರಾಣವನ್ನು ಲೆಕ್ಕಿಸದೇ ಸಾರ್ವಜನಿಕರ ಪ್ರಾಣ ಉಳಿಸಿದ್ದಾರೆ. ಇವರ ಸೇವೆ ಸಮಾಜಕ್ಕೆ ಕನ್ನಡಿಯಾಗಿದೆ. ಇವರ ಕುಟುಂಬಗಳ ಕಲ್ಯಾಣಕ್ಕಾಗಿ ಸರ್ಕಾರ ಇವರೆಲ್ಲಾ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ತ್ವರಿತಗತಿಯಲ್ಲಿ ಈಡೇರಿಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಗಜಾನನ ನಾಯಕ, ಆರೋಗ್ಯ ನೀರಿಕ್ಷಕ ನಾಗರಾಜ್, ವ್ಯವಸ್ತಾಪಕ ಷಣ್ಮುಖ, ತಾಲೂಕ ಅದ್ಯಕ್ಷ ವಹೀದ್ ಖಾನ್, ರಮೇಶ, ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ರಗಡಪ್ಪ ಹುಲಿಹೈದರ್, ಜಂಟಿ ಕಾರ್ಯದರ್ಶಿ ಲಾಲಸಾಬ್ ಎಂ. ಮನಿಯಾರ್, ಮಹಿಬೂಬು ಪಾಷಾ, ರಾಮಣ್ಣ ಕಳ್ಳಿಮನಿ, ಮತ್ತು ಸಂಘದ ಎಲ್ಲಾ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.



