Breaking News
ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ನ್ಯಾಯಾಧೀಶರ ಭೇಟಿ!

*ಅನ್ನದಲ್ಲಿ ಕಲ್ಲು,,ಗಾಜು,ಹುಳು,ಉಪ್ಪಡಿ

ವಿದ್ಯಾರ್ಥಿನಿಯರ ಹೇಳಿಕೆ.

*ಊಟ ಬಡಿಸಲು ಎರಡನೇ ಚಮಚ,ನೂರಾರು ವಿದ್ಯಾರ್ಥಿನಿಯರಿಗೆ ಮೂರೇ ದಿನಪತ್ರಿಕೆ.

*ಅಡುಗೆದಾರರ ಬದಲಿಸುವಂತೆ ಎಜೆನ್ಸಿಗೆ ನ್ಯಾಯಾಧೀಶರ ಸೂಚನೆ.

*ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳಿಗೆ ನ್ಯಾಯಾಲಯಕ್ಕೆ ಆಗಮಿಸುವಂತೆ ಸೂಚನೆ.

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ನಗರದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ಕಾಲೇಜು ಹಾಸ್ಟೆಲ್ ಗೆ ಒಂದನೆಯ ಸತ್ರ ಮತ್ತು ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಧೀಶರ ತಂಡ ಭೇಟಿ ನೀಡಿ ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿನಿಯರಿಂದ ಸಮಸ್ಯೆಗಳನ್ನು ಆಲಿಸಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಸಮಸ್ಯೆಗಳ ಸುರಿಮಳೆಯನ್ನೇ ನ್ಯಾಯಾಧೀಶರ ಮುಂದೆ ಹೇಳಿ ತಮ್ಮ ಅಳಲನ್ನು ತೋಡಿಕೊಂಡರು.

ಗ್ರಾಮೀಣ ಭಾಗದ ಎಸ್ ಸಿ ಎಸ್ ಟಿ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿನಿಯರು ಉನ್ನತ ವಿದ್ಯಾಭ್ಯಾಸ ಮಾಡಲು ನಗರ ಪ್ರದೇಶಕ್ಕೆ ಆಗಮಿಸಿ ಸಮಾಜ ಕಲ್ಯಾಣ ಇಲಾಖೆಯ ಕಾಲೇಜು ಹಾಸ್ಟೆಲ್ ನಲ್ಲಿ ವಸತಿ ಇದ್ದು ಸರ್ಕಾರ ಕಲ್ಪಿಸುವ ಸೌಲಭ್ಯದ ಊಟ, ಮೂಲಸೌಕರ್ಯದ ಓದಿ ಬದುಕು ಕಟ್ಟಿಕೊಳ್ಳುವ ಉದ್ದೇಶವನ್ನು ನಿರಾಸೆಗೊಳಿಸುವಂತೆ ಹಾಸ್ಟೆಲ್ ವಾರ್ಡನ್, ಅಡುಗೆದಾರರು ಕಾರ್ಯನಿರ್ವಹಿಸುತ್ತಿರುವ ಕುರಿತು ನ್ಯಾಯಾಧೀಶರುಗಳ ಮುಂದೆ ವಿದ್ಯಾರ್ಥಿನಿಯರು ಸಮಸ್ಯೆಗಳನ್ನು ಹೇಳಿಕೊಂಡರು.

ಅನ್ನದಲ್ಲಿ ಕಲ್ಲು,ಗಾಜು,ಹುಳು, ಉಪ್ಪಡಿಗಳು ಬರುತ್ತಿವೆ,ಅನ್ನ ಸಾಂಬಾರ ಬಡಿಸಲು ಎರಡು ಚಮಚಗಳಿವೆ, ೧೮೦ ವಿದ್ಯಾರ್ಥಿನಿಯರಿದ್ದು ಕೇವಲ ಮೂರು ದಿನಪತ್ರಿಕೆಗಳನ್ನು ತೋರಿಸಲಾಗುತ್ತದೆ ಇದರಿಂದ ಎಲ್ಲರೂ ಪೇಪರ್ ಓದಲು ಆಗುತ್ತಿಲ್ಲ ಎಂದು ಹಾಸ್ಟೆಲ್ ನಲ್ಲಿದ್ದ ಮೂಲಸೌಕರ್ಯಗಳ ಕೊರತೆಗಳ ಕುರಿತು ಹೇಳಿಕೊಂಡರು.

ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿನಿಯರಿಗೆ ಸರಿಯಾದ ಊಟ ಪೂರೈಸಬೇಕು.ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ರಾಜ್ಯ,ಜಿಲ್ಲಾ ಮಟ್ಟದ ದಿನಪತ್ರಿಕೆಗಳನ್ನು ತರಿಸಬೇಕು.ಅಡುಗೆದಾರರನ್ನು ಬದಲಿಸಬೇಕು,ಸಮಸ್ಯೆಗಳನ್ನು ಚರ್ಚಿಸಲು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು ನ್ಯಾಯಾಲಯಕ್ಕೆ ಆಗಮಿಸಿ ವಿವರಣೆ ನೀಡುವಂತೆ ನ್ಯಾಯಾಧೀಶರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ

ಒಂದನೇಯ ಸತ್ರ ಮತ್ತು ಜಿಲ್ಲಾ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ, ಪ್ರಧಾನ ಸಿವಿಲ್ ನ್ಯಾಯಾಧೀಶ ನಾಗೇಶ ಪಾಟೀಲ್ ಸೇರಿ ಹಾಸ್ಟೆಲ್ ವಾರ್ಡನ್ ಸಿಬ್ಬಂದಿಯವರಿದ್ದರು.

ಕನಕಗಿರಿ ಕನಕಾಚಲಪತಿ ಮಹಾರಥೋತ್ಸವಕ್ಕೆ ಸಾಕ್ಷಿಯಾಯ್ತು ಲಕ್ಷಾಂತರ ಭಕ್ತ ಸಮೂಹ!

*ಐತಿಹಾಸಿಕ ಹಿನ್ನೆಲೆಯ ಕನಕಗಿರಿ ಜಾತ್ರೆ

ಕಿಷ್ಕಿಂಧವಾಣಿ

ಕನಕಗಿರಿ: ವಿಜಯನಗರ ಸಾಮ್ರಾಜ್ಯದ ಐತಿಹಾಸಿಕ ಪ್ರಸಿದ್ಧ ಕನಕಗಿರಿಯ ಸುಕ್ಷೇತ್ರದ

ಕನಕಾಚಲಪತಿ ಲಕ್ಷ್ಮೀ ನರಸಿಂಹಸ್ವಾಮಿಯ ಮಹಾರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ

ಶ್ರದ್ಧೆ, ಭಕ್ತಿಯಿಂದ ಬುಧವಾರ ಸಂಜೆ ಜರುಗಿತು.

ರಥೋತ್ಸವದ ನಿಮಿತ್ತ ಬೆಳಗ್ಗೆ ಕನಕಾಚಲಪತಿ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಪಂಚಾಮೃತ ಅಭಿಷೇಕ, ತುಳಸಿ ಅರ್ಚನೆ, ರಥದ ಮುಂಭಾಗದಲ್ಲಿ ರಥಾಂಗ ಹೋಮ, ಹವನ, ಪೂರ್ಣಾಹುತಿ, ಅನ್ನಬಲಿ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ, ಭಕ್ತಿಯಿಂದ ನಡೆದವು. ರಥಕ್ಕೆ ಹಸಿರು ತರಿಳು ತೋರಣ, ಗೊಂಬೆ, ಹೂ, ಬಾವುಟ, ಐದು ಪ್ರಕಾರದ ಚಟ್ಟುಗಳನ್ನು ಕಟ್ಟಿದ ರಥಕ್ಕೆ ಶೃಂಗರಿಸಲಾಗಿತ್ತು. ರಾಜಬೀದಿಯಲ್ಲಿ ರಥೋತ್ಸವ ಆರಂಭವಾಗುತ್ತಿದ್ದಂತೆ ಭಕ್ತ ಸಮೂಹ ಬಾಳೆ ಹಣ್ಣು, ಉತ್ತತ್ತಿ ಎಸೆದು ಭಕ್ತಿ ಮೆರೆದರು. ಭಕ್ತಗಣ ರಥದ ಗಾಲಿಗೆ ತೆಂಗಿನಕಾಯಿ ಹೋಡೆದು ಹರಕೆ ತಿರಿಸಿದರು.

ರಥ ಸಂಜೆ 4.20ಕ್ಕೆ ಆರಂಭಗೊಂಡಿತು. ಕೆಲ ನಿಮಿಷಗಳಲ್ಲಿ ಮೊದಲು ತನ್ನ ದಾರಿ ಬದಲಿಸಿದ ರಥ ಮುಂದೆ ಹೋಗದಿದ್ದಾಗ ಮತ್ತೆ ಹಿಂದಕ್ಕೆ ಎಳೆದು ನಂತರ ರಥವನ್ನು ಎಳೆಯಲಾಗಿತು. ಕೆಲ ನಿಮಿಷಗಳಲ್ಲಿ ಮತ್ತೆ ರಥ ಅಡ್ಡ ನಿಂತಾಗ ಮತ್ತೆ ಹಿಂದಕ್ಕೆ ಎಳೆದು ಮುಂದಕ್ಕೆ ಎಳೆಯಲಾಯಿತು. ನಂತರ ಎದಿರು ಹನುಮಪ್ಪನ ದೇವಸ್ಥಾನಕ್ಕೆ ತೆರಳಿ ನಂತರ 1.20 ನಿಮಿಷದಲ್ಲಿ ರಾಜಗಾಂಭಿರ್ಯದಂತೆ ತನ್ನ ಮೂಲಸ್ಥಾನಕ್ಕೆ ಆಗಮಿಸುತ್ತಿದ್ದಂತೆ ಲಕ್ಷಾಂತರ ಭಕ್ತರು ಕೆಕೆ ಹಾಕಿ ಸಂಭ್ರಮಿಸಿದರು. ಕೆಲ ಭಕ್ತರು ತಂಗಿದ್ದ ಸ್ಥಳದಿಂದ ದೇವಸ್ಥಾನದ ವರಗೆ ದೀಡ್ ಸ್ಕಾರ ಹಾಕಿ ಬೇಡಿಕೊಂಡ ಹರಕೆಗಳನ್ನು ತೀರಿಸಿದರು.ಸಿಹಿ ತಿನಿಸು ಸಮರ್ಪಣೆ ಮಾಡಿದರು. ಭಾಜಾ ತಾಷಾ, ವಾಧ್ಯಮೇಳ ಭಕ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದ್ದವು. ಭಕ್ತರು ಮನೆಯ ಮಾಳಿಗೆ, ರಾಜಬೀದಿಯಲ್ಲಿ ನಿಂತು ರಥೋತ್ಸವವನ್ನು ವೀಕ್ಷಿಸಿದರು. ಜಿಲ್ಲೆ, ರಾಜ್ಯ ಸೇರಿದಂತೆ ಆಂದ್ರಪ್ರದೇಶ, ತೆಲಂಗಾಣ, ತಮಿಳುನಾಡು ಸೇರಿದಂತೆ ನಾನಾ ಭಾಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು.

ಜಾತ್ರಾಮಹೋತ್ಸವದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ತಹಸೀಲ್ದಾರ್ ವಿಶ್ವನಾಥ ಮುರಡಿ, ಪಟ್ಟಣಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಅಧ್ಯಕ್ಷೆ ತನುಶ್ರೀ, ಉಪಾಧ್ಯಕ್ಷ ಕಂಠಿರಂಗ ನಾಯಕ, ಶಾಸಕ ರಮೇಶ ಜಾರಕಿಹೋಳಿ ಪುತ್ರ ಅಮರನಾಥ ಜಾರಕಿಹೋಳಿ ಸೇರಿದಂತೆ ಹಲವು ಗಣ್ಯರು ಇದ್ದರು

ಬುಡಕಟ್ಟು ಲಕ್ಷಣಗಳ ಕುರುಬ ಜನಾಂಗಕ್ಕೆ ಎಸ್.ಟಿ.ಮೀಸಲಾತಿ ಶೀಘ್ರ ಘೋಷಣೆಗೆ ಕೇಂದ್ರ ಬುಡಕಟ್ಟು ಸಚಿವಾಲಯಕ್ಕೆ ಮನವಿ ಸಲ್ಲಿಕೆ.

*ಪೂಜ್ಯ ಶ್ರೀನಿರಂಜನನಾನಂದ ಪುರಿ ಸ್ವಾಮೀಜಿಗಳ ನೇತೃತ್ವದಲ್ಲಿ ಮನವಿ ಸಲ್ಲಿಕೆ.

ಕಿಷ್ಕಿಂಧವಾಣಿ ಸುದ್ದಿ
ನವದೆಹಲಿ: ಸಾವಿರಾರು ವರ್ಷಗಳಿಂದ ಬುಡಕಟ್ಟು ಮತ್ತು ದೇಶದ ಮೂಲ ಸಂಸ್ಕೃತಿಯ ಲಕ್ಷಣಗಳನ್ನು ಹೊಂದಿರುವ ಕುರುಬ ಸಮಾಜಕ್ಕೆ ಕರ್ನಾಟಕದಲ್ಲಿ
ಎಸ್.ಟಿ.ಮೀಸಲಾತಿಯವನ್ನು ಕೇಂದ್ರ ಸರ್ಕಾರದ ಬುಡಕಟ್ಟು ಸಚಿವಾಲಯ ಘೋಷಣೆ ಮಾಡುವಂತೆ
ಶ್ರೀ ರೇವಣಸಿದ್ದೇಶ್ವರ ಕನಕ ಗುರು ಪೀಠ ಕಾಗಿನೆಲೆ ಮಹಾಸಂಸ್ಥಾನದ ಪೂಜ್ಯ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಮಹಾಸ್ವಾಮಿಗಳ ನೇತೃತ್ವದಲ್ಲಿ ಕೇಂದ್ರದ ಬುಡಕಟ್ಟು ಸಚಿವಾಲಯದ ಆಯುಕ್ತರಿಗೆ ಕುರುಬ ಸಮುದಾಯದ ಮುಖಂಡರು ಸಂಘಟನೆಗಳ ಹಿರಿಯರು ಮನವಿ ಪತ್ರವನ್ನು ಸಲ್ಲಿಸಿದರು.
ಈಗಾಗಲೇ ಕರ್ನಾಟಕದಲ್ಲಿ 1980ರ ದಶಕದ ಹಿಂದೆ ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿಯನ್ನು ಕಲ್ಪಿಸಲಾಗಿತ್ತು. ಕೆಲ ಕಾರಣಗಳಿಂದ ಮಧ್ಯದಲ್ಲಿ ಎಸ್‌ಟಿ ಮೀಸಲಾತಿ ಸರ್ಕಾರ ತೆಗೆದುಹಾಕಿದ್ದು ಪುನಃ ಸಮುದಾಯದ ಬೇಡಿಕೆಯಂತೆ ರಾಜ್ಯ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನ ಸೇರಿದಂತೆ ಅಗತ್ಯ ತಾಂತ್ರಿಕ ಮಾಹಿತಿಯನ್ನು ಎರಡು ಬಾರಿ ಕೇಂದ್ರ ಸರ್ಕಾರಕ್ಕೆ ರವಾನಿಸಿದ್ದು ಕೇಂದ್ರ ಸರ್ಕಾರದ ಬುಡಕಟ್ಟು ಅಧ್ಯಯನ ಮತ್ತು ಸಚಿವಾಲಯ ಎಸ್ ಟಿ ಮೀಸಲಾತಿ ಕಲ್ಪಿಸುವ ಕಡತವನ್ನು ಪರಿಶೀಲನೆ ಮಾಡಿದ್ದು ಶೀಘ್ರದಲ್ಲೇ ಕೇಂದ್ರ ಸರ್ಕಾರದ ಸಚಿವ ಸಂಪುಟದ ಮುಂದೆ ಕಡತವನ್ನು ಮಂಡನೆ ಮಾಡಿ ಎಸ್ ಟಿ ಮೀಸಲಾತಿಯನ್ನು ಘೋಷಣೆ ಮಾಡುವಂತೆ ಆಯುಕ್ತರಲ್ಲಿ ಮನವಿ ಮಾಡಲಾಯಿತು.
ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ,ವಿಧಾನಪರಿಷತ್ ಮಾಜಿ ಸಭಾಧ್ಯಕ್ಷ ರಘುನಾಥ್ ಮಲ್ಕಾಪೂರೆ,ಕುರಿ ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಶರಣು ತಳ್ಳಿಕೇರಿ,ಹಾಲುಮತ ಮಹಾಸಭಾ ಅಧ್ಯಕ್ಷ ರುದೃಣ್ಣ ಗುಳಗುಳಿ ಸೇರಿದಂತೆ ಕುರುಬ ಸಮಾಜದ ಹಿರಿಯ ಮುಖಂಡರು ಇದ್ದರು.