Breaking News
ಕರಿಯಣ್ಣ ಸಂಗಟಿಯವರಿಗೆ ಅಭಿಮಾನಿಗಳಿಂದ ಶ್ರದ್ಧಾಂಜಲಿ..

*ಜನಸಾಮಾನ್ಯರ ನಾಯಕ ಕರಿಯಣ್ಣ ಸಂಗಟಿ ಸರಳ ಸಜ್ಜನಿಕೆಯ ಪ್ರತೀಕವಾಗಿದ್ದಾರೆ.

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ವಿಧಾನ ಪರಿಷತ್ ಮಾಜಿ ಸದಸ್ಯ ದಿವಂಗತ ಕರಿಯಣ್ಣ ಸಂಗಟಿಯವರು ಜನಸಾಮಾನ್ಯರ ನಾಯಕರಾಗಿದ್ದರು.

ಅವರು ಸರಳ ಸಜ್ಜನಿಕೆಯ ಪ್ರತಿರೂಪವಾಗಿದ್ದರು ಎಂದು ಯುವ ಕಾಂಗ್ರೆಸ್ ಮುಖಂಡ ಎಚ್. ಆರ್. ಭರತ್ ಹೇಳಿದರು.

ಅವರು ನಗರದ ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಕರಿಯಣ್ಣ ಸಂಗಟಿ ಅಭಿಮಾನಿಗಳ ಬಳಗದ ವತಿಯಿಂದ ದಿವಂಗತ ಕರಿಯಣ್ಣ ಸಂಗಟಿಯರಿಗೆ ನುಡಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಇರಕಲ್ ಗಡ ಭಾಗದಲ್ಲಿ ಸಂಘಟಿಯವರು ರೈತರಿಗೆ ಜನಸಾಮಾನ್ಯರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಹಗಲು ಇರುಳು ಕೆಲಸ ಮಾಡಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯರಾಗಿ ಎಂಎಲ್ಸಿ ಯಾಗಿ ತಮ್ಮ ಅನುದಾನವನ್ನು ಕೃಷಿಕರು ಮತ್ತು ಗ್ರಾಮೀಣ ಭಾಗದ ಜನರಿಗಾಗಿ ಮೀಸಲಿಟ್ಟು ಯೋಜನೆಗಳನ್ನು ಅನುಷ್ಠಾನ ಮಾಡಿದ್ದರು. ಅವರು ನಮ್ಮೊಂದಿಗೆ ಇಲ್ಲ ಅವರ ಕಾರ್ಯಗಳು ಶಾಶ್ವತವಾಗಿ ಉಳಿಯುತ್ತವೆ ಎಂದರು.

ಈ ಸಂದರ್ಭದಲ್ಲಿ

ಬಿ.ಕೃಷ್ಣಪ್ಪ ನಾಯಕ, ಸೋಮಶೇಖರ್ ಗೌಡ, ಹನುಮಂತ ರಾಯ,ಗೌಳಿ ರಮೇಶ,

ರಾಜಶೇಖರ ಮುಷ್ಟೂರ, ಸುರೇಶ, ಮಂಜುನಾಥ, ಸುರೇಶ್ ಗೌರಪ್ಪ ,ಉಸ್ಮಾನ್ ಬಿಚ್ಗತ್ತಿ ,ಅಶೋಕ ಜುಲೈನಗರ, ಮಾರಪ್ಪ ನಾಯಕ, ವಸಂತ ನಾಯಕ, ಶೋಭಾ ಸಿಂಗ್, ಸಂತೋಷ್ ರಾಯ್ಕರ್ ಜಗದೀಶ್ , ಆಯುಬ್ ಖಾನ್, ವೀರನಗೌಡ, ಅನ್ವರ್ ಜಿನ್ನಾ,ರಾಮಣ್ಣ ಸೇರಿದಂತೆ ಅನೇಕರಿದ್ದರು.

ಮಸ್ಕಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ವರಿಷ್ಠರ ಒತ್ತಡವಿದೆ:ಬಿ.ಶ್ರೀರಾಮುಲು.

*ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಕುರ್ಚಿ ಗುದ್ದಾಟ, ಉಪಚುನಾವಣೆಯಲ್ಲಿ ಬಿಜೆಪಿ ಗೆಲವು ಖಚಿತ.

ಕಿಷ್ಕಿಂಧವಾಣಿ ಸುದ್ದಿ

ಮಸ್ಕಿ: 2028 ಇಸ್ವಿ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಸ್ಕಿಯ ಬಿಜೆಪಿ ಮುಖಂಡರು,ಕಾರ್ಯಕರ್ತರು ಹಾಗೂ ಪಕ್ಷದ ವರಿಷ್ಠರು ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ. ಪಕ್ಷದ ಅಂತಿಮ ತೀರ್ಮಾನದಂತೆ ನಡೆದುಕೊಳ್ಳುವುದಾಗಿ ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.

ಅವರು ಮಸ್ಕಿ

ಪಟ್ಟಣದಲ್ಲಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ನೆಕ್ಕುಂಟಿ ಇವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಡುವಿನ ಕುರ್ಚಿ ಗುದ್ದಾಟದಿಂದ ಅಭಿವೃದ್ಧಿ ನಿಲುಗಡೆಯಾಗಿದ್ದು ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಮತದಾರ ಬಿಜೆಪಿ ಅಭ್ಯರ್ಥಿಗಳ ಪರ ಇದ್ದು ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಮುಖಭಂಗವಾಗಲಿದೆ.

ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯಲ್ಲಿ ಬಿಜೆಪಿ ಎರಡೂ ಕ್ಷೇತ್ರಗಳಲ್ಲಿ ಹೆಚ್ಚಿನ ಬಹುಮತದೊಂದಿಗೆ ಗೆಲ್ಲಲಿದೆ.

ರಾಜ್ಯ ಸರ್ಕಾರದ ದುರ್ಬಲ ಆಡಳಿತ ಹಾಗೂ ಜನಸಾಮಾನ್ಯರ ಮೇಲೆ ತೆರಿಗೆ ಭಾರ ಹೆಚ್ಚಿಸಿರುವುದರಿಂದ ಜನರು ಬೇಸತ್ತು ಹೋಗಿದ್ದು

ಇದರ ಪರಿಣಾಮವಾಗಿ ಉಪಚುನಾವಣೆಯಲ್ಲಿ ಬಿಜೆಪಿ ಪರ ಮತದಾನ ಹೆಚ್ಚಾಗಲಿದೆ.

ತುಂಗಭದ್ರಾ ಎಡದಂಡೆ ಕಾಲುವೆ ವಿಚಾರದಲ್ಲಿಯೂ ಸರ್ಕಾರ ಈ ಭಾಗದ ರೈತರೊಂದಿಗೆ ಚೆಲಾಟವಾಡುತ್ತಿದೆ. ಯಾವುದೇ ಮುನ್ಸೂಚನೆ ನೀಡದೆ ಕಾಲುವೆಗೆ ನೀರು ಬಿಡಲಾಗಿದ್ದು, ಪರಿಣಾಮವಾಗಿ ಕಾಲುವೆ ಹಾನಿಗೊಳಗೊಂಡಿದೆ.

ಕೂಡಲೇ ಕಾಲುವೆಯನ್ನು ದುರಸ್ತಿ ಮಾಡಿ ಕುಡಿಯುವ ನೀರನ್ನು ಸಮರ್ಪಕವಾಗಿ ಒದಗಿಸಬೇಕು.

ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ ಬಿಜೆಪಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿ ವರಿಷ್ಠರು ತಮಗೆ ನೀಡಿದ್ದು, 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾಗದಲ್ಲಿ ವ್ಯಾಪಕ ಪ್ರವಾಸ ಕೈಗೊಂಡು ಸಂಘಟನೆ ಬಲಪಡಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಮಲ್ಲಿಕಾರ್ಜುನ ನೆಕ್ಕುಂಟಿ, ಆರ್.ಕೆ. ನಾಯಕ, ಶರಣು, ಬಸವರಾಜ ಹಾಲ್ದವರ್ ಸೇರಿ ಬಿಜೆಪಿ ಮುಖಂಡರು ಹಾಗೂ ವಾಲ್ಮೀಕಿ ನಾಯಕ ಸಮಾಜದವರಿದ್ದರು.

ಹೊಸ ಜಾಹೀರಾತು ನೀತಿ:ಜಿಲ್ಲಾ ಮಟ್ಟದ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆ ಎಂಎಲ್ಸಿ ಕೆ. ಶಿವಕುಮಾರ.

* ವಿಧಾನ ಪರಿಷತ್ತಿನ ಅಧಿವೇಶದಲ್ಲಿ ಜಾಹೀರಾತು ನೀತಿ ಕುರಿತು ಪ್ರಸ್ತಾಪ.

* ಹೊಸ ಜಾಹೀರಾತು ನೀತಿಯಲ್ಲಿ ನ್ಯೂನ್ಯತೆಗಳಿದ್ದು ಸರಿಪಡಿಸುವಂತೆ ಸಲಹೆ.

* ನಿವೃತ್ತಿ ಹೊಂದುವ ಪತ್ರಕರ್ತರಿಗೆ ಮಾಶಾಸನ ಸರಳೀಕರಣಕ್ಕೆ ಮನವಿ.

ಕಿಷ್ಕಿಂಧವಾಣಿ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ 2026 ನೇ ಸಾಲಿನ ನೂತನ ಜಾಹೀರಾತು ನೀತಿಯನ್ನು ಅನುಷ್ಠಾನ ಮಾಡಲು ಈಗಾಗಲೇ ಸಚಿವ ಸಂಪುಟದಲ್ಲಿ ತೀರ್ಮಾನಿಸಿದ್ದು,ಈ ಜಾಹೀರಾತಿನಲ್ಲಿ ಇರುವ ಕೆಲ ಅಂಶಗಳಿಂದ ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿರುವ ಪತ್ರಿಕೆಗಳ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಜಾಹೀರಾತು ನೀತಿಯನ್ನು ಅನುಷ್ಠಾನ ಮಾಡುವ ಮೊದಲು ಕೆಲವು ತಿದ್ದುಪಡಿಗಳನ್ನು ಮಾಡುವಂತೆ ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಅವರು ಮಂಗಳವಾರ ವಿಧಾನಪರಿಷತ್ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದು ಮಾತನಾಡಿದರು.

ಪ್ರಸ್ತುತ ನೂತನ ಜಾಹೀರಾತು ನೀತಿ ಸ್ವಾಗತಾರ್ಹವಾಗಿದ್ದರೂ ಇದರಲ್ಲಿ ಕೆಲವು ಅಂಶಗಳು ತಾಲೂಕು ಮತ್ತು ಜಿಲ್ಲಾ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿವೆ. ಆದ್ದರಿಂದ ಮುಖ್ಯಮಂತ್ರಿಗಳು ವೈಯಕ್ತಿಕವಾಗಿ ಈ ನೀತಿಗಳ ಕುರಿತು ಪರಿಶೀಲನೆ ಮಾಡಬೇಕು. ಜೊತೆಗೆ ಪತ್ರಕರ್ತರೊಂದಿಗೆ ವಿಚಾರ ವಿನಿಮಯ ಮಾಡಿದ ನಂತರ ಜಿಲ್ಲಾ ಮಟ್ಟದ ಪತ್ರಿಕೆಗಳಿಗೆ ತಾಲೂಕ ಮಠದ ಪತ್ರಿಕೆಗಳಿಗೆ ನೆರವಾಗುವಂತಹ ನೀತಿಯನ್ನು ಅನುಷ್ಠಾನ ಮಾಡಬೇಕು. ಜೊತೆಗೆ ನಿವೃತ್ತಿಯಾಗುವ ಹಿರಿಯ ಪತ್ರಕರ್ತರಿಗೆ ರಾಜ್ಯ ಸರ್ಕಾರ ನೀಡುವ ಮಾಶಾಸನ ಪಡೆಯಲು ಅತ್ಯಂತ ಕಠಿಣವಾದ ನಿಯಮಗಳಿದ್ದು ಅವುಗಳನ್ನು ಸರಳೀಕರಣ ಮಾಡುವ ಮೂಲಕ ಸೇವಾ ಭದ್ರತೆ ಇಲ್ಲದ ಪತ್ರಕರ್ತರಿಗೆ ನೆರವಾಗಬೇಕು ಎಂದು ಸರಕಾರಕ್ಕೆ ಮನವಿ ಮಾಡಿದರು.