Breaking News
ಹಿರೇಬೆಣಕಲ್ : ಮೊರೇರ್ ಶಿಲಾಯುಗದ ಜನಾಂಗ ಸಂಗ್ರಹಿಸಿದ್ದ ಕಬ್ಬಿಣದ ಅದಿರು ಪತ್ತೆ :

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ತಾಲೂಕಿನ ಪ್ರಸಿದ್ಧ ಪ್ರಾಗೈತಿಹಾಸಿಕ ಶಿಲಾಯುಗದ ಶಿಲಾ ಸಮಾಧಿನೆಲೆ ಹಿರೇಬೆಣಕಲ್ ಗ್ರಾಮದ ಗುಡ್ಡದಲ್ಲಿ ಮೊರೇರ್ ಜನಾಂಗ ಸಂಗ್ರಹಿಸಿದ್ದ ಕಬ್ಬಿಣದ ಅದಿರನ್ನು ಹಿರೇಬೆಣಕಲ್ ಅನ್ವೇಷಣಾ ತಂಡ ಪತ್ತೆ ಹಚ್ಚಿದೆ ಎಂದು ಸಂಶೋಧಕ ಡಾ.ಶರಣಬಸಪ್ಪ ಕೋಲ್ಕಾರ್ ತಿಳಿಸಿದ್ದಾರೆ .

2000 ದಿಂದ 3000 ವರ್ಷಗಳ ಹಿಂದೆ ಕರ್ನಾಟಕ ಸಹಿತ ದಕ್ಷಿಣ ಭಾರತದಲ್ಲಿ ಬದುಕಿದ್ದ ಮೂರೇರ್ ಎಂಬ ಬುಡಕಟ್ಟು ಜನಾಂಗ ಮೊದಲ ಭಾರಿಗೆ ಕಬ್ಬಿಣದ ಅದಿರನ್ನು ಸಂಸ್ಕರಿಸಿ ಕಬ್ಬಿಣ ಲೋಹವನ್ನು ಉತ್ಪಾದಿಸುವ ತಂತ್ರಜ್ಞಾನವನ್ನು ಕಂಡುಕೊಂಡರು .

ಆ ಕಬ್ಬಿಣದಿಂದ ತಮ್ಮ ಪೂರ್ವಜರ ಸಮಾಧಿಗಳ ರಚನೆಗೆ ಬೇಕಾದ ಕಲ್ಲು ಚಪ್ಪಡಿಗಳನ್ನು ಸಿದ್ಧಪಡಿಸಲು ಸುತ್ತಿಗೆ, ಉಳಿ ಮತ್ತು ದಿನನಿತ್ಯ ಬಳಕೆಗೆ ಬೇಕಾದ ಕುಡುಗೋಲು,ಕತ್ತಿಗಳು ,ಬಾಣದ ಮೊನೆ,ಚಾಕು ,ಬಲ್ಲೆ ,ಚಪ್ಪಟೆ ಕೊಡಲಿ, ನೇಗಿಲಿನ ಕುಳ ಮುಂತಾದ ಉಪಕರಣಗಳನ್ನು ತಯಾರಿಸಿಕೊಳ್ಳುತ್ತಿದ್ದರು. ಕಬ್ಬಿಣದ ಬಳಕೆ ಬಂದದ್ದಕ್ಕಾಗಿ ಇವರ ಕಾಲಾವಧಿಯನ್ನು ಕಬ್ಬಿಣ ಯುಗವೆಂದು ಜೊತೆಗೆ ಬೃಹತ್ ಬಂಡೆಗಳಿಂದ ಸಮಾಧಿ ನಿರ್ಮಿಸುತ್ತಿದ್ದರಿಂದ ಕಬ್ಬಿಣ ಯುಗದ ಬೃಹತ್ ಶಿಲಾಯುಗವೆಂದು ಕರೆಯಲಾಗಿದೆ. ಇವರು ಒಂದು ಕೆಜಿ ಅದಿರಿನಿಂದ 350 ಗ್ರಾಂ ಪರಿಶುದ್ಧ ಕಬ್ಬಿಣವನ್ನು ಪಡೆಯುವ ತಂತ್ರಜ್ಞಾನವನ್ನು ಸಾಧಿಸಿದ್ದರು ಎನ್ನುವುದು ಸಂಶೋಧನೆಗಳಿಂದ ತಿಳಿದು ಬಂದಿದೆ . ಹಿರೇಬೆಣಕಲ್ ಮೊರೇರ್ ಜನಾಂಗ ಕಬ್ಬಿಣ ಬಳಸಿದ್ದ ಬಗ್ಗೆ ಈವರೆಗೆ ಯಾವುದೇ ಕುರುಹು ದೊರೆತಿರಲಿಲ್ಲ.ಆದರೆ ಈಗ ಮೊರೇರ್ ಗುಡ್ಡದ ದುರ್ಗದದಡಿ ಎಂಬ ಭಾಗದಲ್ಲಿ ಸುಮಾರು 200 ಮೀಟರ್ ವಿಸ್ತಾರ ಪ್ರದೇಶದಲ್ಲಿ ಸಂಸ್ಕರಿಸಿದ ಕಬ್ಬಿಣದ ಅದಿರು ಚೆದುರಿದಂತೆ ಕಂಡು ಬಂದಿದೆ. ಪ್ರಾಯಶಃ ಈ ಅದಿರನ್ನು ಸಮೀಪದ ಸಂಡೂರು ಪ್ರದೇಶದಿಂದ ಸಂಗ್ರಹಿಸಿ ಇಲ್ಲಿ ಸಂಸ್ಕರಿಸಿದ್ದಾರೆ. ಸಂಸ್ಕರಿತ ರೂಪದ ಅಂದರೆ ಕಾಯಿಸಿದ ಕಬ್ಬಿಣದ ದ್ರವರೂಪದ ಘನೀಕೃತ ತುಂಡುಗಳು ಇಲ್ಲಿ ಅಧಿಕ ಸಂಖ್ಯೆಯಲ್ಲಿ ದೊರೆಯುತ್ತವೆ. ಇವುಗಳ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ನಡೆಸಲಾಗುವುದೆಂದು ಮತ್ತು ಈ ಸಂಶೋಧನಾ ತಂಡದಲ್ಲಿ ಚಂದ್ರಶೇಖರ್ ಕುಂಬಾರ್ ,ಮಂಜುನಾಥ್ ದೊಡ್ಮನಿ ,ಹರನಾಯಕ ಮತ್ತು ಹುಸೇನ್ ಬಾಷಾ ಇದ್ದರೆಂದು ಡಾ.ಕೋಲ್ಕಾರ್ ತಿಳಿಸಿದ್ದಾರೆ.

ಐತಿಹಾಸಿಕ ಆನೆಗೊಂದಿ ಉತ್ಸವಕ್ಕಾಗಿ ಶಾಶ್ವತ ಭೂಮಿ ಖರೀದಿಸುವಂತೆ ಆಗ್ರಹ

*ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ.

ಕಿಷ್ಕಿಂಧವಾಣಿ ಸುದ್ದಿ ಗಂಗಾವತಿ :ತಾಲೂಕಿನ ಐತಿಹಾಸಿಕ

ಆನೆಗೊಂದಿ ಉತ್ಸವಕ್ಕಾಗಿ ಶಾಶ್ವತ ಭೂಮಿ ಖರೀದಿಸಿ ಸರ್ಕಾರ ಸ್ವಾದಿನಪಡಿಸಿಕೊಳ್ಳಬೇಕೆಂದು ಕೊಪ್ಪಳ ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಪದಾಧಿಕಾರಿಗಳು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು.

 

 

ಮನವಿ ಮಾಡಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಮಾತನಾಡಿ,ಆನೆಗೊಂದಿಯ ವಿಜಯನಗರಸಾಮ್ರಾಜ್ಯ ದ ಮೂಲ ರಾಜಧಾನಿಯಾಗಿತ್ತು. ಇಲ್ಲಿ ಅನೇಕ ಐತಿಹಾಸಿಕ ಸ್ಮಾರಕಗಳು ಇವೆ. ವಿಶ್ವ ಪರಂಪರೆ ಪಟ್ಟಿಯಲ್ಲಿಯೂ ಸೇರಿದೆ. ಆನೆಗುಂದಿ ಉತ್ಸವ ಎರಡು ವರ್ಷಗಳಿಂದ ನಡೆದಿಲ್ಲ. ಅಧಿವೇಶನ ಮುಗಿದ ತಕ್ಷಣವೇ ಈ ಬಾರಿ ಕಡ್ಡಾಯವಾಗಿ ಆನೆಗೊಂದಿ

ಉತ್ಸವ ಆಚರಿಸಲೇಬೇಕು. ಆನೆಗೊಂದಿ ಉತ್ಸವ ಆಚರಣೆಯನ್ನು ಮಾಡುವ ವೇದಿಕೆಯ ಭೂಮಿಯು ಖಾಸಗಿಯವರದ್ದಾಗಿರುತ್ತದೆ.

ಕಿಷ್ಕಿಂಧಾ ಅಂಜನಾದ್ರಿ ಸ್ಥಳ ಸಮೀಪದಲ್ಲಿರುವದರಿಂದ ಅಲ್ಲಿನ ಭೂಮಿಗೆ ಬೇಡಿಕೆ ಹೆಚ್ಚಾಗುತ್ತಿರುವದರಿಂದ ಅವರು ತಮ್ಮ ಭೂಮಿಯನ್ನು ಬೇರೆಯವರಿಗೆ ಮಾರಿದರೆ ಅಥವಾ ಕಟ್ಟಡಗಳನ್ನು ನಿರ್ಮಿಸಿದರೆ, ಮುಂದಿನ ದಿನಗಳಲ್ಲಿ ಉತ್ಸವ ಮಾಡಲು ಸ್ಥಳದ ಅಭಾವ ಉಂಟಾಗುತ್ತದೆ.ಉತ್ಸವ ಆಚರಿಸಲು ದೊಡ್ಡ ಸಮಸ್ಯೆಯಾಗುತ್ತದೆ. ಸಮಸ್ಯೆ ಆಗುವ ಮೊದಲೇ ಸರಕಾರ ಎಚ್ಚತ್ತುಕೊಂಡು ವಿಳಂಬ ಮಾಡದೇ ಅವರಿಂದ ಭೂಮಿ ಖರೀದಿಸಿ ಸ್ವಾದಿನಪಡಿಸಿಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಪದಾಧಿಕಾರಿ ರಾಮಣ್ಣ ರುದ್ರಾಕ್ಷಿ ಇದ್ದರು.

2023,24 ಸಿಂಚನ ಕಾವ್ಯ ಪ್ರಶಸ್ತಿ ಗೆ ಹುರಕಡ್ಲಿ ಶಿವಕುಮಾರ್ ಹಾಗೂ ಸೋಮಲಿಂಗ ಬೇಡರ ಆಯ್ಕೆ.

ಕಿಷ್ಕಿಂಧವಾಣಿ ಸುದ್ದಿ

ಹೂವಿನ ಹಡಗಲಿ: 2023 ರ ಸಿಂಚನ ಕಾವ್ಯ ಪ್ರಶಸ್ತಿಗೆ ಬಾಚಿಗೊಂಡನಹಳ್ಳಿಯ ಹುರಕಡ್ಲಿ ಶಿವಕುಮಾರ ಹಾಗೂ ಸೋಮಲಿಂಗ ಬೇಡರ ಅವರನ್ನು 2023-24 ರ ಸಿಂಚನ ಕಾವ್ಯ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಾಶಕಿ ಸವಿತಾ ಅಂಗಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಸೋಮಲಿಂಗ ಬೇಡರ ಅವರ “ಗೋರಿ ಮತ್ತು ಧರ್ಮ” ಹಾಗೂ ಬಾಚಿಗೊಂಡನಹಳ್ಳಿಯ ಹುರಕಡ್ಲಿ ಶಿವಕುಮಾರ ರವರ “ಕನ್ನಡಮೆನಿಪ್ಪಾ ನಾಡು”

ಕೃತಿಗಳಿಗೆ ಪ್ರಶಸ್ತಿ ಗ ಲಭಿಸಿದೆ. ಪ್ರಶಸ್ತಿ ತಲಾ 5000 ನಗದು, 2000 ರೂ ಮೌಲ್ಯದ ಪುಸ್ತಕಗಳು ಸ್ಮರಣಿಕೆ ನೀಡಿ ಪ್ರಶಸ್ತಿ ಪ್ರದಾನ

ಮಾಡಲಾಗುವುದು. ಮಾರ್ಚ್ 29 ಭಾನುವಾರ ಹೂವಿನ ಹಡಗಲಿಯ ಸರ್ಕಾರಿ ನೌಕರರ ಭವನದಲ್ಲಿ ಪ್ರಶಸ್ತಿ ಪ್ರದಾನ ಹಾಗೂ

ಗದಗಿನ ನಿರಂತರ ಪ್ರಕಾಶನದ ಎ.ಎಸ್ ಮಕಾನದಾರ ರವರ ಕಾವ್ಯ ಕೃತಿ “ದರ್ವೇಶಿ ಪದ್ಯ”

ಕೃತಿಗಳ ಲೋಕಾರ್ಪಣೆ ನಡೆಯಲಿದೆ.

ಹಿರಿಯ ಸಾಹಿತಿ ಹರಪನಹಳ್ಳಿಯ ಇಸ್ಮಾಯಿಲ್ ಯಲಿಗಾರ್ ಕೃತಿಗಳ ಲೋಕಾರ್ಪಣೆ ಮಾಡುವರು.

ಹಾವೇರಿಯ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯೆ ಉಪನ್ಯಾಸಕಿ

ಡಾ ಪುಷ್ಪಾ ಶಲವಡಿಮಠ

ಕೃತಿ ಕುರಿತು ಮಾಹಿತಿ ನೀಡುವರು.

ಸಾಹಿತಿ ತೋ ಮ ಶಂಕ್ರಯ್ಯ ಅಧ್ಯಕ್ಷತೆ ವಹಿಸುವರು.

ಕವಿ ರಾಮಪ್ಪ ಕೋಟಿಹಾಳ

ಪ್ರಶಸ್ತಿ ಪಡೆದ ಕೃತಿಗಳ ಕುರಿತು ಮಾತನಾಡುವರು.

 

ಇದೇ ವೇಳ ಸಾಹಿತ್ಯ ಸಂಗೀತ ರಂಗಭೂಮಿ ಶಿಕ್ಷಣ ಕ್ಷೇತ್ರಗಳಲ್ಲಿ ಸಾಧನೆ ಗೈದವರನ್ನು ಗೌರವಿಸಲಾಗುವುದು.

ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು

ಸವಿತಾ ಅಂಗಡಿ ಕೋರಿದ್ದಾರೆ.