Breaking News
ಕೊಲೆ ಪ್ರಕರಣ:20ವರ್ಷ ತಲೆ ಮರೆಸಿಕೊಂಡಿದ್ದ ಆರೋಪಿಗೆ ಜೀವವಾಧಿ ಶಿಕ್ಷೆ.

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ;ಕೊಲೆ ಮತ್ತು ಮರಣಾಂತಿಕ ಹಲ್ಲೆ ಪ್ರಕರಣದಲ್ಲಿ ಸುಮಾರು ೨೦ ವರ್ಷಗಳಿಂದಲೂ ತಲೆ ಕರೆಸಿಕೊಂಡಿದ್ದ ಕನಕಗಿರಿ ತಾಲೂಕಿನ ಬೈಲ್ ಲಖಂಪೂರದ ನಿವಾಸಿ ಪರಶುರಾಮ ಅಲಿಯಾಸ್ ರಾಮಣ್ಣ ತಾಯಿ ದುರುಗಮ್ಮ

(49) ಈತನಿಗೆ ಒಂದನೇಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಜ ಇವರು ತೀರ್ಪು ನೀಡಿ‌ ಜೀವಾವಧಿ ಶಿಕ್ಷೆ ಮತ್ತು 35 ಸಾವಿರ ರೂ.ಗಳ ದಂಡ ವಿಧಿಸಿದ್ದಾರೆ.

ಪ್ರಕರಣ:ದಿನಾಂಕ 15-01-2004 ರ ಮಧ್ಯಾನ್ಹ 3 ಗಂಟೆ ಸುಮಾರಿಗೆ ದುರುಗಪ್ಪ ನಾಯಕ ಹಾಗೂ ಆರೋಪಿತನ ಹೆಂಡತಿ ದುರುಗಪ್ಪ ನಾಯಕ ಮೇಲೆ ಬಲವಾಗಿ ಚಾಕುವಿನಿಂದ ಬಲ ಪಕ್ಕೆಗೆ ಇರಿದು ತೀವ್ರ ಗಾಯಗೊಳಿಸಿ ಕೊಲೆ ಮಾಡಿ ನಂತರ ಸ್ಥಳದಲ್ಲಿದ್ದ ಆರೋಪಿತನ ಹೆಂಡತಿ ಗೆ ಹೊಟ್ಟೆ ಭಾಗದಲ್ಲಿ ಮಾರಣಾಂತಿಕ ಹಲ್ಲೆ ಮಾಡಿದ‌ ಘಟನೆಯ ಕುರಿತ ಪ್ರಕರಣ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಡಿ ಸಲ್ಲಿಸಲಾಗಿತ್ತು.ಪ್ರಕರಣ ವಿಚಾರಣಾ ಹಂತದಲ್ಲಿ ಇದ್ದ ಸಂದರ್ಭದಲ್ಲಿ ಸದ್ರಿ ಆರೋಪಿ ತಲೆ ಮರೆಸಿಕೊಂಡು ಬೇರೆ ಹೆಸರುಗಳಿಂದ ತನ್ನ ಇರುವಿಕೆಯನ್ನು ಮರೆಮಾಚಿ ಬೆಂಗಳೂರಿನಲ್ಲಿ ವಾಸವಾಗಿದ್ದ ಸದ್ರಿ ಆರೋಪಿತನ ಬಗ್ಗೆ ಕನಕಗಿರಿ ಪೊಲೀಸರು ಶೋಧ ನಡೆಸಿ ಆರೋಪಿತನನ್ನು 2025 ರಲ್ಲಿ ಪತ್ತೆ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ನಾಗಲಕ್ಷ್ಮಿ ವಾದ ಮಂಡಿಸಿದ್ದಾರೆ. ಇದೀಗ ಆರೋಪಿ ಪರಶುರಾಮ ಅಲಿಯಾಸ್ ರಾಮಣ್ಣ ಇವರಿಗೆ‌ ಜೀವಾವಧಿ ಶಿಕ್ಷೆ ಘೋಷಣೆಯಾಗಿದೆ.

ಸಣ್ಣಪುಟ್ಟ ವ್ಯಾಪಾರಕ್ಕೆ ಟ್ರೇಡ್ ಲೈಸೆನ್ಸ್ಗೆ ಆಗ್ರಹಿಸಿ ಸಾಣಾಪೂರ ಗ್ರಾ.ಪಂ.ಎದುರು ಗ್ರಾಮಸ್ಥರ ಪ್ರತಿಭಟನೆ

https://youtu.be/iVl7XmdYS5U?si=oQW6r1y1DWEjUNvf

https://youtu.be/iVl7XmdYS5U?si=oQW6r1y1DWEjUNvf

 

*ಚಹಾದಂಗಡಿ, ಸೇರಿ ವ್ಯಾಪಾರ ಮತ್ತು ವಿದ್ಯುತ್ ಸಂಪರ್ಕಕ್ಕೆ ಪ್ರಾಧಿಕಾರದ ಎನ್‌ಓಸಿ ಬೇಡ

*ಸಾಣಾಪೂರ ಭಾಗದಲ್ಲಿಲ್ಲ ಪುರಾತತ್ವ ಇಲಾಖೆಯ ಸ್ಮಾರಕಗಳು ಸ್ಥಳೀಯರ ಪ್ರತಿಪಾದನೆ

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ತಾಲೂಕಿನ ಸಾಣಾಪೂರದಲ್ಲಿ ಸಣ್ಣಪುಟ್ಟ ವ್ಯಾಪಾರ ವಹಿವಾಟು ಮಾಡಲು ಗ್ರಾ.ಪಂ.ಟ್ರೇಡ್ ಲೈಸೆನ್ ಕೊಡದಂತೆ ಹಂಪಿ ಅಭಿವೃದ್ಧಿ ಪ್ರಾಧಿಕಾರ ನಿಯಮವನ್ನು ರೂಪಿಸಿದ್ದು ಇದರಿಂದ ಕೂಡಲೇ ಟ್ರೇಡ್ ಲೈಸೆನ್ಸ್ ಕೊಡಲು ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಸಾಣಾಪೂರ ಗ್ರಾಮಸ್ಥರು, ಮಹಿಳೆಯರು ಗ್ರಾ.ಪಂ.ಕಚೇರಿ ಎದುರು ಪ್ರತಿಭಟನೆ ನಡೆಸಿ ಪಿಡಿಓ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಸಾಣಾಪೂರ ಗ್ರಾಮದ ರಸ್ತೆಯ ಅಕ್ಕಪಕ್ಕದಲ್ಲಿರುವ ಮನೆಗಳಲ್ಲಿ ಚಹಾದಂಗಡಿ, ತಂಪುಪಾನೀಯ, ಕಿರಾಣಿ, ಎಳೇನೀರು,ಕಾರಕುಟ್ಟುವ ಮಿಷನ್ ಸೇರಿ ಸಣ್ಣಪುಟ್ಟ ವ್ಯಾಪಾರ ಮಾಡಲು ಗ್ರಾ.ಪಂ.ಹಾಗೂ ಜೆಸ್ಕಾಂ ಅಧಿಕಾರಿಗಳು ನೋಟೀಸ್ ಕೊಟ್ಟು ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಿದ್ದಾರೆ. ಲಕ್ಷಾಂತ ರೂ.ಗಳ ದಂಡ ವಿಧಿಸಿ ನೋಟೀಸ್ ನೀಡುತ್ತಿದ್ದು ಮಾನಸೀಕ ಹಿಂಸೆಯಾಗಿದೆ. ಮನೆಯ ಮುಂದೆ ಶೌಚಾಲಯ ನಿರ್ಮಿಸಿಕೊಳ್ಳಲು ಪ್ರಾಧಿಕಾರದ ಎನ್‌ಓಸಿ ಕಡ್ಡಾಯ ಎಂದು ಗ್ರಾ.ಪಂ. ಪಿಡಿಓ ಅವರು ನಿರ್ಮಾಣ ಕಾರ್ಯ ನಿಲ್ಲಿಸುತ್ತಿದ್ದಾರೆ. ಇದರಿಂದ ಬಹಳ ತೊಂದರೆಯಾಗಿದ್ದು ಕೂಡಲೇ ಗ್ರಾಮದ ಪ್ರತಿ ಕಾರ್ಯಕ್ಕೂ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಎನ್‌ಓಸಿ ಬೇಕೆನ್ನುವ ಗ್ರಾ.ಪಂ ಜೆಸ್ಕಾಂ, ಅರಣ್ಯ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳ ಸಾಣಾಪೂರ ಭಾಗದ ಜನರನ್ನು ಅವಮಾನಿಸುತ್ತಿದ್ದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಟ್ರೇಡ್ ಲೈಸೆನ್ಸ್ ಇಲ್ಲದೇ ಇನ್ಸೂರೆನ್ಸ್ ಕ್ಲೆöÊಮ್ ಕೂಡ ಆಗುತ್ತಿಲ್ಲ. ಇಲ್ಲಿಯ ಭೂಮಿ, ಮನೆ ಖರೀದಿಗೂ ಕ್ವಾರಿ ಬಿದ್ದಿದ್ದು ಸಾಣಾಪೂರ ಭಾಗದ ಅಭಿವೃದ್ಧಿ ಕುಂಠಿತವಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು ಕ್ರಮ ಕೈಗೊಂಡು ಸಾಣಾಪೂರ ಜನಸಾಮಾನ್ಯರು ಸ್ವಾವಲಂಭಿಯಾಗಿ ಬದುಕಲು ಅವಕಾಶ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಗ್ರಾ.ಪಂ. ಮಾಜಿ ಸದಸ್ಯರಾದ ಕೋಡಿ ನಾಗೇಶ, ಶೇರಖಾನ್ ಸೇರಿ ಗ್ರಾಮದ ಮಹಿಳೆಯರು, ರೈತರು ಕೂಲಿಕಾರರು ಪಾಲ್ಗೊಂಡಿದ್ದರು.

**

ಸಾಣಾಪೂರ ಗ್ರಾಮವನ್ನು ಅವ್ಶೆಜ್ಞಾನಿಕವಾಗಿ ಹಂಪಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರ್ಪಡೆ ಮಾಡಿದ್ದು ಇದರಿಂದ ಸಣ್ಣ ಪುಟ್ಟ ವ್ಯಾಪಾರ ವಹಿವಾಟು ಮಾಡಲು ಗ್ರಾ.ಪಂ.ಯಿಂದ ಟ್ರೇಡ್ ಲೈಸೆನ್ಸ್ ಪಡೆಯಲು ಪ್ರಾಧಿಕಾರದ ಎನ್‌ಓಸಿ ಪಡೆಯುವುದು ಕಡ್ಡಾಯವಾಗಿದೆ. ಗ್ರಾಮದಲ್ಲಿ ಶೇ.70ಕ್ಕಿಂತಲೂ ಹೆಚ್ಚು ಕ್ರಮಬದ್ದವಲ್ಲದ ಆಸ್ತಿ(11ಬಿ) ಇದ್ದು ಇದಕ್ಕೆ ಪ್ರಾಧಿಕಾರ ಎನ್‌ಓಸಿ ಕೊಡುವುಲ್ಲ. ಇದರಿಂದ ಗ್ರಾಮದ ಸಣ್ಣ ಪುಟ್ಟ ವ್ಯಾಪಾರಸ್ಥರು ಇನ್ಸೂರೆನ್ಸ್ ಕ್ಲೈಮ್ ಮಾಡಿಕೊಳ್ಳಲು ಆಗುತ್ತಿಲ್ಲ. ಚಹಾದಂಗಡಿ, ಪಂಚರ ಅಂಗಡಿ ಸೇರಿ ಇತರೆ ವ್ಯಾಪಾರ ಮಾಡಲು ಜೆಸ್ಕಾಂ ನವರು ಪ್ರಾಧಿಕಾರದ ಎನ್‌ಓಸಿ ಕೇಳುತ್ತಿದ್ದು ಕಳ್ಳತನದಲ್ಲಿ ಅಂಗಡಿ ಮುಂಗಟ್ಟುಗಳನ್ನು ನಡೆಸಿಕೊಳ್ಳಬೇಕಿದೆ. ಇದರಿಂದ ಜೆಸ್ಕಾಂನವರು ದಾಳಿ ಮಾಡಿ ಲಕ್ಷಾಂತರ ರೂ.ಗಳ ದಂಡ ಹಾಕುತ್ತಿದ್ದಾರೆ.ಜಿಲ್ಲಾಡಳಿತ ಕೂಡಲೇ ಸಮಸ್ಯೆ ಪರಿಹಾರ ಮಾಡಬೇಕು

-ಕೋಡಿ ನಾಗೇಶ ಗ್ರಾ.ಪಂ. ಮಾಜಿ ಸದಸ್ಯ.

ತುಂಗಭದ್ರಾ ಮಂಡಳಿ ಆಸ್ತಿ ಅತಿಕ್ರಮಣ: ಕಾನೂನು ಕ್ರಮದ ಎಚ್ಚರಿಕೆ: ಕಾರ್ಯದರ್ಶಿ ಓಆರ್.ವಿ. ರೆಡ್ಡ

*ಮೇ ಅಂತ್ಯಕ್ಕೆ 33 ಕ್ರಸ್ಟಗೇಟುಗಳ ಜೋಡಣೆ ಪೂರ್ಣ

ಕಿಷ್ಕಿಂಧವಾಣಿ ಸುದ್ದಿ

ಹೊಸಪೇಟೆ: ತುಂಗಭದ್ರಾ ಜಲಾಶಯದ ವ್ಯಾಪ್ತಿಗೆ ಒಳಪಡುವ ನೂರಾರು ಎಕರೆ ಪ್ರದೇಶವು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳ ಜಂಟಿ ಆಸ್ತಿಯಾಗಿದ್ದು, ಇಲ್ಲಿ ನಡೆಯುತ್ತಿರುವ ಯಾವುದೇ ಅನಧಿಕೃತ ಅತಿಕ್ರಮಣಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತುಂಗಭದ್ರಾ ಬೋರ್ಡ್ ಕಾರ್ಯದರ್ಶಿ ಓ.ಆರ್. ವಿ. ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ನಗರದ ತುಂಗಭದ್ರಾ ಜಲಾಶಯ ಆಡಳಿತ ಮಂಡಳಿಯ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

‘ಭಾರತೀಯ ಅಧಿಕೃತ ರಹಸ್ಯಗಳ ಕಾಯ್ದೆ 1923 ರ ಅನ್ವಯ ಜಲಾಶಯದ ಪ್ರದೇಶ, ಪವರ್ ಹೌಸ್ ಮತ್ತು ಸುತ್ತಮುತ್ತಲಿನ ಸ್ಥಳಗಳನ್ನು ‘ನಿಷೇಧಿತ ಪ್ರದೇಶ’ ಎಂದು ಘೋಷಿಸಲಾಗಿದೆ. ಹೊಸಪೇಟೆ ವ್ಯಾಪ್ತಿಯ 207.41 ಎಕರೆ ಹಾಗೂ ಅಮರಾವತಿ ವ್ಯಾಪ್ತಿಯ 488.74 ಎಕರೆ ಸೇರಿದಂತೆ ಒಟ್ಟು 696.15 ಎಕರೆ ಪ್ರದೇಶವು ಮಂಡಳಿಯ ಸ್ವಾಧೀನದಲ್ಲಿದೆ. ಇದರಲ್ಲಿ ಗಾರ್ಡನ್, ಹಿನ್ನೀರು, ನಿಶಾನಿ ಕ್ಯಾಂಪ್, ಅಮರಾವತಿ ಕಾಲೋನಿ ಹಾಗೂ ಹೆಚ್.ಇ.ಎಸ್ ಕಾಲೋನಿ ಪ್ರದೇಶಗಳು ಸಹ ಸೇರಿವೆ. ಪ್ರಸ್ತುತ ಮಂಡಳಿಯ ಜಾಗಕ್ಕೆ ಸಂಬಂಧಿಸಿದಂತೆ ವಿವಿಧ ಹಂತಗಳಲ್ಲಿ ಒಟ್ಟು 23 ಪ್ರಕರಣಗಳು ನ್ಯಾಯಾಲಯದಲ್ಲಿವೆ. ಇದರಲ್ಲಿ ಧಾರವಾಡ ಹೈಕೋರ್ಟ್ ಪೀಠ ಮತ್ತು ಹೊಸಪೇಟೆಯ ಸಿವಿಲ್ ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಉಲ್ಲಂಘನೆಯ ಪ್ರಕರಣಗಳೂ ಸಹ ಸೇರಿವೆ. ಜಲಾಶಯದ ಸುರಕ್ಷತೆ ಮತ್ತು ಮಂಡಳಿಯ ಆಸ್ತಿಯನ್ನು ರಕ್ಷಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಅದರಂತೆ ಮಂಡಳಿಯ ಜಾಗವನ್ನು ಅತಿಕ್ರಮಣ ಕುರಿತ ವಿವಿಧ ಹಂತಗಳಲ್ಲಿ ಒಟ್ಟು 23 ಪ್ರಕರಣ ದಾಖಲಾಗಿವೆ. ಈ ಪೈಕಿ ಒಂದು ಪ್ರಕರಣ ಇತ್ಯರ್ಥವಾಗಿದ್ದು, ಇದರಲ್ಲಿ ನಿವೃತ್ತ ನ್ಯಾಯಧೀಶೆ ಜಯಶ್ರೀ ಭಾಗಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆಯ ಜೆ ಎಂ ಎಫ್ ಸಿ ನ್ಯಾಯಾಲಯ ಮಾರ್ಚ್ 28ರಂದು ಮಂಡಳಿಯ ಪರ ಆದೇಶ ನೀಡಿ, ತುಂಗಭದ್ರಾ ಯೋಜನಾ ಪ್ರದೇಶದ ಅತಿಕ್ರಮಣಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ, ಮಂಡಳಿಯು ತನ್ನ ವಶಕ್ಕೆ ಪಡೆಯಲು ಹಸಿರು ನಿಶಾನೆ ತೋರಿದೆ. ಆದ್ದರಿಂದ ಮಂಡಳಿಯ ಅನುಮತಿ ಇಲ್ಲದೆ ಈ ಜಾಗಗಳಲ್ಲಿ ಕಟ್ಟಡ ನಿರ್ಮಾಣ ಅಥವಾ ಇನ್ನಿತರೆ ಯಾವುದೇ ಚಟುವಟಿಕೆ ನಡೆಸುವುದು ಶಿಕ್ಷಾರ್ಹ ಅಪರಾಧ. ಈ ನಿಟ್ಟಿನಲ್ಲಿ ಸಾರ್ವಜನಿಕರು ಇಂತಹ ಅಕ್ರಮ ಅತಿಕ್ರಮಣದಾರರೊಂದಿಗೆ ಯಾವುದೇ ವ್ಯವಹಾರ ನಡೆಸಬಾರದು ಎಂದು ಅವರು ಮನವಿ ಮಾಡಿದರು.

ಮೇ ಅಂತ್ಯಕ್ಕೆ ಎಲ್ಲಾ ಕ್ರಸ್ಟ್ ಗೇಟ್ ಅಳವಡಿಕೆ ಪೂರ್ಣ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಭರದಿಂದ ಸಾಗಿದ್ದು, ಈಗಾಗಲೇ 22 ಗೇಟ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ. ಇನ್ನುಳಿದವು ಇದೇ ತಿಂಗಳಲ್ಲಿ ಮುಕ್ತಾಯವಾಗುವ ಭರವಸೆ ಕೂಡ ಇದೆ. ಅದರ ಜೊತೆಗೆ ಚೈನ್ ಅಳವಡಿಕೆ ಕಾರ್ಯವು ಮೇ ತಿಂಗಳ ಅಂತ್ಯಕ್ಕೆ ಪೂರ್ಣಗೊಂಡು ಜೂನ್ ನಲ್ಲಿ ಬರುವ ಮುಂಗಾರು ಮಳೆ ವೇಳೆಗೆ ಡ್ಯಾಮ್ ಸಂಪೂರ್ಣ ಸಿದ್ಧವಾಗಿರಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಇಂಜಿನಿಯರ್ ಎನ್.ಚಂದ್ರಶೇಖರ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಸ್. ನಾರಾಯಣ ನಾಯ್ಕ್ ಇತರರು ಇದ್ದರು