Breaking News
ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಆನೆಗೊಂದಿ ಭಾಗದ ಜನರ ಮೂಲಭೂತ ಹಕ್ಕುಗಳಿಗೆ ಧಕ್ಕೆ!


*ಪ್ರಾಧಿಕಾರದಿಂದ ಆನೆಗೊಂದಿ 15 ಗ್ರಾಮಗಳನ್ನು ಕೈ ಬಿಡುವಂತೆ ವಿ.ಎಸ್. ಉಗ್ರಪ್ಪ ಮುಖ್ಯಮಂತ್ರಿಯವರಿಗೆ ಪತ್ರ.

ಕಿಷ್ಕಿಂಧವಾಣಿ ಸುದ್ದಿ
ಗಂಗಾವತಿ: ಹಂಪಿ ಪ್ರವೇಶವು ವಿಶ್ವ ಪರಂಪರೆ ಪ್ರದೇಶಕ್ಕೆ ಸೇರಿದ ನಂತರ ಅಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದಂತೆ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ರಚನೆ ಮಾಡಲಾಗಿರುವ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಅವೈಜ್ಞಾನಿಕ ನಿಯಮಗಳ ಪರಿಣಾಮವಾಗಿ ಗಂಗಾವತಿ ತಾಲೂಕಿನ ಆನೆಗೊಂದಿ ವ್ಯಾಪ್ತಿಯ 15 ಗ್ರಾಮಗಳನ್ನು ಸೇರ್ಪಡೆ ಮಾಡಲಾಗಿದ್ದು ಹಂಪಿ ಪ್ರಾಧಿಕಾರದ ನಿಯಮಗಳು ಆನೆಗೊಂದಿ ಭಾಗದ ಜನರ ಮೂಲಭೂತ ಹಕ್ಕುಗಳನ್ನು ಕಳಸಿದು ಕೊಂಡಿದ್ದು ಜನರು ಜೀವನ ನಡೆಸಲು ಪರದಾಡಬೇಕಿದೆ. ಆದ್ದರಿಂದ ಕೂಡಲೇ ಹಂಪಿ ಪ್ರಾಧಿಕಾರದಿಂದ ಆನೆಗೊಂದಿ ಭಾಗವನ್ನು ಕೈಬಿಡುವಂತೆ ಮಾಜಿ ಸಂಸದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ವಿ. ಎಸ್. ಉಗ್ರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದಾಖಲೆ ಸಮೇತ ಪತ್ರ ಬರೆದು ಮನವಿ ಮಾಡಿದ್ದಾರೆ.
ಹಂಪಿ ಅಭಿವೃದ್ಧಿ ಪ್ರಾಧಿಕಾರ ರಚನೆ ಆದಾಗಿನಿಂದ ಪ್ರತಿ 10 ವರ್ಷಕ್ಕೊಮ್ಮೆ ಸ್ಥಳೀಯರ ಸಭೆಯನ್ನು ಕರೆದು ಅಭಿಪ್ರಾಯದ ಅನ್ವಯ ವೈಜ್ಞಾನಿಕವಾಗಿ ನಿಯಮಗಳನ್ನು ರೂಪಿಸಬೇಕಿದೆ ಆದರೆ 2008ರಲ್ಲಿ ಮಾಸ್ಟರ್ ಪ್ಲಾನ್ ರಚನೆಯಾಗಿ ಘೋಷಣೆ ಮಾಡಲಾಗಿತ್ತು ನಂತರ 2018 ರಲ್ಲಿ ಪುನಃ ಮಾಸ್ಟರ್ ಪ್ಲಾನ್ ಘೋಷಣೆ ಮಾಡದೇ ಅಧಿಕಾರಿಗಳು ವಿಳಂಬ ನೀತಿಯನ್ನು ಅನುಸರಿಸುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಕೆಲವು ಕಾರಣದ ಕೈಗಳಾಗಿದ್ದು ಕಾಣದ ಕೈಗಳು ಆನೆಗೊಂದಿ ಭಾಗದಲ್ಲಿ ವಾಣಿಜ್ಯ, ವ್ಯವಹಾರ ಬೆಳೆದಂತೆ ತಡೆಯೊಡುತ್ತಿದೆ. ಆದ್ದರಿಂದಲೇ ಆನೆಗೊಂದಿ ಭಾಗ ಅಭಿವೃದ್ಧಿ ಆಗುತ್ತಿಲ್ಲ, ಜನರು ಉದ್ಯೋಗ ಇಲ್ಲದೆ ಗುಳೇ ಹೋಗಿ ಬದುಕನ್ನು ನಡೆಸಬೇಕಾದ ಅನಿವಾರ್ಯತೆ ಇದೆ. ಆದ್ದರಿಂದ ಕೂಡಲೇ ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಆನೆಗೊಂದಿ ಭಾಗವನ್ನು ಕೈಬಿಡಬೇಕು. ಇದರಿಂದ ಅಲ್ಲಿಯ ಜನರು ತಮ್ಮ ಹಕ್ಕುಗಳಿಂದ ಬದುಕಲು ಸಾಧ್ಯವಾಗುತ್ತದೆ.
ಆನೆಗೊಂದಿ ಭಾಗದಲ್ಲಿ ಪ್ರವಾಸೋದ್ಯಮ ಬೆಳೆಯುತ್ತಿದ್ದು ಇದರಿಂದ ಜನರು ಸಣ್ಣಪುಟ್ಟ ವ್ಯಾಪಾರ ವಹಿವಾಟು ಮಾಡಿಕೊಂಡು ಬದುಕಲು ಸಾಧ್ಯವಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪ್ರಾಧಿಕಾರದಿಂದ 15 ಗ್ರಾಮಗಳನ್ನು ಕೈಬಿಡಬೇಕು ಎಂದು ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಜೊತೆಗೆ ಈ ಭಾಗದ ಸಮಸ್ಯೆಗಳ ಬಗ್ಗೆ ದಾಖಲೆ ಸಮೇತ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ

ಪುಟ್ ಪಾತ್ ತೆರವು ಕಾರ್ಯಾಚರಣೆ ತಾರತಮ್ಯದಿಂದ ಕೂಡಿದೆ ಮ್ಯಾಗಳ ಮನಿ‌ ಆರೋಪ.

*ನಗರಸಭೆ ಹಾಗೂ ರಸ್ತೆ ಜಾಗ ಒತ್ತುವರಿ ಮಾಡಿದ ಪ್ರಬಲರ ಡಬ್ಬಾ ಅಂಗಡಿ,ಮಳಿಗೆ ಹಾಗೆ ಉಳಿಸಿದ ನಗರಸಭೆಯವರು!

ಕಿಷ್ಕಿಂಧವಾಣಿ ಸುದ್ದಿ

ಗಂಗಾವತಿ: ಗಂಗಾವತಿ ನಗರದ ರಸ್ತೆಯ ಜಾಗ ಮತ್ತು ನಗರಸಭೆಯ ಜಾಗವನ್ನು ಒತ್ತುವರಿ ಮಾಡಿ ಡಬ್ಬಾ ಅಂಗಡಿಗಳು ಮತ್ತು ಕಟ್ಟಡಗಳನ್ನು ನಿರ್ಮಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಕೋರ್ಟ್ ನಲ್ಲಿ ಸು-ಮೋಟೋ ಕೇಸ್ ಹಿನ್ನೆಲೆಯಲ್ಲಿ ನಗರ ಸಭೆಯ ಅಧಿಕಾರಿಗಳು ಮತ್ತು ಪೌರಕಾರ್ಮಿಕರು ಕಳೆದ ಒಂದು ವಾರದಿಂದ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಬರದಿಂದ ನಡೆಸಿರುವುದು ಸಾರ್ವಜನಿಕ ವಲಯದಲ್ಲಿ ಶ್ಲಾಘನೀಯವಾದ ಮಾತುಗಳು ಕೇಳಿ ಬರುತ್ತಿವೆ. ಸಂಘ ಸಂಸ್ಥೆಯವರು ಹಾಗೂ ರಾಜಕಾರಣಿಗಳು ಒತ್ತೂವರೆ ತೆರವು ಕಾರ್ಯಚರಣೆಯನ್ನು ಸ್ವಾಗತಿಸಿದ್ದಾರೆ.

ಆದರೆ ನಗರಸಭೆಯವರು ಕೆಲವೆಡೆ ಕೆಲವರ ಒತ್ತಡದ ಹಿನ್ನೆಲೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿದ ಮತ್ತು ರಸ್ತೆ ಬದಿಯಲ್ಲಿ ಡಬ್ಬಾ ಅಂಗಡಿಗಳನ್ನು ಇಟ್ಟುಕೊಂಡು ಬಹಿರಂಗವಾಗಿ ಕಳೆದ 30-40 ವರ್ಷಗಳಿಂದ ವ್ಯಾಪಾರ ಉದ್ಯೋಗವನ್ನು ಮಾಡುತ್ತಿರುವವರ ಮೇಲೆ ಯಾಕೋ ಕರುಣೆ ತೋರಿದಂತೆ ಕಾಣುತ್ತಿದೆ. ಪ್ರಮುಖವಾಗಿ ಪಂಪಾನಗರ ಸರ್ಕಲ್(ಮಳೆಮಲ್ಲೇಶ್ವರ ಸರ್ಕಲ್) ಬಸವಣ್ಣ ಸರ್ಕಲ್,ಜುಲೈನಗರ,ಕಿಲ್ಲಾ ಏರಿಯಾ,ಬಸ್ ನಿಲ್ದಾಣ ಸುತ್ತ ,ಆನೆಗೊಂದಿ ರಸ್ತೆ ,ನೀಲಕಂಠೇಶ್ವರ ಸರ್ಕಲ್‌ ನಿಂದ ಎಲ್ ಐಸಿ ಕಚೇರಿ ವರೆಗೆ

ಮತ್ತು ಕೋಟೆ ಆಂಜನೇಯಸ್ವಾಮಿ ದೇಗುಲದ ಮುಂದಿನ ರಸ್ತೆಯಿಂದ ಆದಿಜಾಂಬವ ಸರ್ಕಲ್ ವರೆಗೆ ಹೋಗುವ ರಸ್ತೆಯಲ್ಲಿ ಕೆಲವರು ಒತ್ತುವರಿ ಮಾಡಿಕೊಂಡಿದ್ದರೂ ತೆರವು ಕಾರ್ಯಾಚರಣೆ ಸರಿಯಾಗಿ ಆಗಿಲ್ಲ. ಪ್ರಭಾವಿಗಳಿಗೆ ಒಂದು ನ್ಯಾಯ ಜನಸಾಮಾನ್ಯರಿಗೆ ಮತ್ತೊಂದು ನ್ಯಾಯ ಮಾಡುತ್ತಿರುವುದು ಕಂಡುಬರುತ್ತಿದೆ.

ಈ ಮಧ್ಯೆ ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಅವರು ನಗರಸಭೆ ಕಾರ್ಯಾಚರಣೆ ತಾರತಮ್ಯ ಖಂಡಿಸಿ ರಸ್ತೆ ಪುಟ್ ಪಾತ್ ಒತ್ತುವರಿ ಮಾತ್ರ ನಡೆದಿದ್ದು ಸರಕಾರಿ ಜಾಗ ಒತ್ತುವರಿಯನ್ನು ತೆರವುಗೊಳಿಸುವಂತೆ ನಗರಸಭೆ ಪೌರಾಯುಕ್ತ ಆರ್. ವಿರೂಪಾಕ್ಷ ಮೂರ್ತಿ ಅವರಿಗೆ ಒತ್ತಾಯಿಸಿದ್ದಾರೆ